ಕೇಂದ್ರ ಸರ್ಕಾರ ಬೆಂಗಳೂರಿನ 1 ಮತ್ತು 2 ನೇ ಹಂತದ ಮೆಟ್ರೋ ಯೋಜನೆಗಳಿಗೆ ಅನುದಾನ ಬಿಡುಗಡೆ ಮಾಡಿರುವುದು ರಾಜ್ಯಕ್ಕೆ ನೀಡಿರುವ ಭಿಕ್ಷೆ ಅಲ್ಲ. ಆದರೆ ಈ ರಾಜ್ಯ ಸರ್ಕಾರ, ಕೇಂದ್ರಕ್ಕೆ ಕೃತಜ್ಞತೆ ರೂಪದಲ್ಲಿ ಕೋಟ್ಯಾಂತರ ರು. ಖರ್ಚು ಮಾಡಿ ಪತ್ರಿಕೆಗಳಿಗೆ ಜಾಹೀರಾತು ನೀಡಿರುವ ಕ್ರಮವನ್ನು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಕಿಡಿ ಕಾರಿದ್ದಾರೆ.
ಕೊರೋನಾ ಎರಡನೇ ಅಲೆ ಭೀಕರತೆಯಿಂದ ಜನ ಸಾಯುತ್ತಿರುವಾಗ ಅಗ್ಗದ ಪ್ರಚಾರಕ್ಕೆ ಈ ರಾಜ್ಯ ಸರ್ಕಾರ ಪತ್ರಿಕೆಗಳಿಗೆ ಜಾಹೀರಾತು ನೀಡಿರುವುದರ ವಿರುದ್ದ ಮಾಜಿ ಮುಖ್ಯಮಂತ್ರಿ ಗಳು ಅಸಮಾಧಾನ ವ್ಯಕ್ತಪಡಿಸಿದರು.
ಇದೊಂದು ಮೂರ್ಖ ಸರ್ಕಾರ:
ರಾಜ್ಯದಲ್ಲಿ ಕೊರೋನಾ ಹಾವಳಿಯಿಂದ ಅಮಾಯಕರು, ಬಡವರು ಆ್ಯಕ್ಸಿಜನ್ , ಬೆಡ್, ಔಷಧಿ ಒಲ್ಲದೇ ಸಾಯುತ್ತಿದ್ದಾರೆ. ಈ ಮೂರ್ಖ ಸರ್ಕಾರ ಅಗ್ಗದ ಪ್ರಚಾರಕ್ಕೆ ಕೋಟಿ, ಕೋಟಿ ಹಣ ಖರ್ಚು ಮಾಡುವ ಅಗತ್ಯ ಏನಿತ್ತು ಎಂದು ಪ್ರಶ್ನೆ ಮಾಡಿ ಇದೊಂದು ಮೂರ್ಖ ಸರ್ಕಾರ ಎಂದು ಕಟುವಾಗಿ ಟೀಕಿಸಿದ್ದಾರೆ.
ಜನರ ನೋವು , ಸಮಸ್ಯೆಗಳಿಗೆ ಸ್ಪಂದಿಸಿ, ಕೊರೋನಾ ಸಾವುಗಳನ್ನು ತಡೆಯಲು ಮುಂದಾಗಿ. ಹುಚ್ಚು ತೋರಿ ಪ್ರಚಾರದ ಗಿಮಿಕ್ ಗೆ ಹಣ ಸರ್ಕಾರದ ಖಜಾನೆ ಖಾಲಿ ಮಾಡುವ ಬದಲು ಉತ್ತಮ ಕೆಲಸಗಳನ್ನು ಮಾಡಿ ಎಂದು ಸಲಹೆ ನೀಡಿದ್ದಾರೆ.
ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More
ಆಂಧ್ರಪ್ರದೇಶ: ಹಿಂದಿನ ಸರ್ಕಾರ ತಿರುಪತಿ ಲಡ್ಡುವನ್ನು ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಯಾರಿಸಲಾಗಿದೆ ಎಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು… Read More
ಬೆಂಗಳೂರು: ಜೆಪಿ ಶಾಸಕ ಮುನಿರತ್ನವಿರುದ್ಧ ಮತ್ತೊಂದು ಕೇಸ್ ದಾಖಲಾಗಿದ್ದು , ಇದೀಗ ಶಾಸಕನ ವಿರುದ್ಧ ಅತ್ಯಾಚಾರ ಕೇಸ್ ದಾಖಲಾಗಿದೆ. ಶಾಸಕ… Read More
ಬೆಂಗಳೂರು: ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಬಿಎಂಟಿಸಿ ಬಸ್ ಅಪಘಾತಕ್ಕೆ ವಿಶೇಷ ಚೇತನ ಬಲಿಯಾಗಿರುವ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಯಶವಂತಪುರದಿಂದ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,640 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಸೆ.19ರಿಂದ ಮ ಆಡಳಿತಾಧಿಕಾರಿ ಮತ್ತು ಜಿಟಿಟಿಸಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ… Read More
This website uses cookies.
Leave a Comment