ನಾಲ್ಕು ಟರ್ಮಿನಲ್ ನಿಲ್ದಾಣಗಳಿಂದ (ಕೆಂಗೇರಿ, ನಾಗಸಂದ್ರ, ಬೈಯಪ್ಪನಹಳ್ಳಿ ಮತ್ತು ಸಿಲ್ಕ್ ಇನ್ಸ್ಟಿಟ್ಯೂಟ್) ಕೊನೆಯ ರೈಲು ಜೂನ್ 20ರ ಬೆಳಗಿನ ಜಾವ 1 ಗಂಟೆಗೆ ಹೊರಡಲಿದೆ ಎಂದು ತಿಳಿಸಿದೆ. ಮೆಜೆಸ್ಟಿಕ್ನಿಂದ ನಾಲ್ಕು ದಿಕ್ಕಿನ ಕಡೆಗೆ ಬೆಳಗಿನ ಜಾವ 1.30ಕ್ಕೆ ಕೊನೆ ರೈಲು ಹೊರಡಲಿದೆ. ಇದನ್ನು ಓದಿ – ರಾಜ್ಯಾದ್ಯಂತ ಏಕ ಕಾಲಕ್ಕೆ 21 ಅಧಿಕಾರಿಗಳ ನಿವಾಸದ ಮೇಲೆ 300 ಎಸಿಬಿ ಅಧಿಕಾರಿಗಳು ದಾಳಿ
ಕಂಠೀರವ ಕ್ರೀಡಾಂಗಣದಲ್ಲಿ ಪಂದ್ಯವನ್ನು ವೀಕ್ಷಿಸಲು ಉದ್ದೇಶಿಸಿರುವವರಿಗೆ ಒಂದು ಬಾರಿ ಹಿಂದಿರುಗುವ ಟಿಕೆಟ್ ನೀಡುವುದಾಗಿ ರೈಲು ನಿಗಮ ತಿಳಿಸಿದೆ. ಜನಸಂದಣಿಯನ್ನು ತಪ್ಪಿಸಲು ಕಾಗದದ ಟಿಕೆಟ್ಗಳನ್ನು ಜೂನ್ 19 ರಂದು ಮಧ್ಯಾಹ್ನ 3 ಗಂಟೆಯಿಂದ ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ನೀಡಲಾಗುವುದು, ಇದನ್ನು ಓದಿ – ಇಡಿಯಿಂದ ರಾಹುಲ್ ವಿಚಾರಣೆ ಸೋಮವಾರಕ್ಕೆ ಮುಂದೂಡಿಕೆ : ಭಾನುವಾರ ಸಂಸದರಿಗೆ ಬುಲಾವು
ಈ ಟಿಕೆಟ್ಗಳು ಜೂನ್ 19 ರಂದು ರಾತ್ರಿ 10 ರಿಂದ ಜೂನ್ 20 ರಂದು ಬೆಳಿಗ್ಗೆ 1 ಗಂಟೆಯವರೆಗೆ ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣದಿಂದ ಯಾವುದೇ ದಿಕ್ಕಿನ ಕಡೆಗೆ ಒಂದು ಪ್ರಯಾಣ ಮಾಡಲು ಮಾತ್ರ ಅನುಮತಿ ನೀಡುತ್ತದೆ.
ಕಬ್ಬನ್ ಪಾರ್ಕ್ಗೆ ತೆರಳಲು ಸ್ಮಾರ್ಟ್ ಕಾರ್ಡ್, ಟೋಕನ್ಗಳನ್ನು ಉಪಯೋಗಿಸಬಹುದು. ಆದರೆ ರಾತ್ರಿ 10 ಗಂಟೆಯ ನಂತರ ಕಬ್ಬನ್ ಪಾರ್ಕ್ನಿಂದ ಹೊರಡುವ ಮೆಟ್ರೋ ರೈಲುಗಳಿಗೆ ಟೋಕನ್, ಸ್ಮಾರ್ಟ್ ಕಾರ್ಡ್ ಅನ್ವಯ ಆಗುವುದಿಲ್ಲ. ಕಾಗದದ ಟಿಕೆಟ್ ಪಡೆದವರು ಮಾತ್ರ ಪ್ರಯಾಣಿಸಬಹುದಾಗಿದೆ. ಟಿಕೆಟ್ಗೆ 50 ರುಪಾಯಿ ನಿಗದಿಪಡಿಸಿದ್ದು, ಯಾವುದೇ ನಿಲ್ದಾಣದಲ್ಲಿ ಇಳಿದರೂ ಇದೇ ಮೊತ್ತ ಇರಲಿದೆ
2019ರ ಸೆಪ್ಟಂಬರ್ನಲ್ಲಿ ಇಲ್ಲಿ ಕೊನೆಯ ಟಿ20 ಅಂತಾರಾಷ್ಟ್ರೀಯ ಪಂದ್ಯ ನಡೆದಿತ್ತು. ಅದೂ ಕೂಡ ದಕ್ಷಿಣ ಆಫ್ರಿಕಾ ವಿರುದ್ಧ ನಡೆದಿತ್ತು ಎನ್ನುವುದೇ ವಿಶೇಷ. ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ 9 ವಿಕೆಟ್ಗಳಿಂದ ಭರ್ಜರಿ ಜಯ ಸಾಧಿಸಿತ್ತು. ಅದಾದ ನಂತರ ಕೋವಿಡ್ ಕಾರಣದಿಂದ ಇಲ್ಲಿ ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಯೋಜಿಸಿರಲಿಲ್ಲ. ವರ್ಷಗಳ ನಂತರ 2022ರ ಮಾರ್ಚ್ನಲ್ಲಿ ಶ್ರೀಲಂಕಾ ವಿರುದ್ಧ ಭಾರತ ಟೆಸ್ಟ್ ಪಂದ್ಯವನ್ನಾಡಿತ್ತು. ಈ ಟೆಸ್ಟ್ ಪಂದ್ಯದಲ್ಲಿ ಆತಿಥೇಯ ಭಾರತ ತಂಡ 238 ರನ್ಗಳ ಭಾರಿ ಅಂತರದ ಜಯ ಸಾಧಿಸಿತ್ತು. ಇದನ್ನು ಓದಿ – ರಾಜ್ಯದ ಹವಾಮಾನ ವರದಿ (Weather Report) 17-06-2022
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
This website uses cookies.
Leave a Comment