ಐಪಿಎಲ್ 20-20ಯ 26 ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ವಿರುದ್ಧ ಮುಂಬೈ ಇಂಡಿಯನ್ಸ್ ತಂಡ 5 ವಿಕೆಟ್ಗಳ ಭರ್ಜರಿ ಜಯ ಸಾಧಿಸಿತು.
ದುಬೈನ ಶೇಕ್ ಜಯೇದ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಡಿಸಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು.
ಡಿಸಿಯಿಂದ ಆರಂಭಿಕ ಬ್ಯಾಟ್ಸ್ಮನ್ಗಳಾಗಿ ಮೈದಾನಕ್ಕೆ ಎಂಟ್ರಿ ನೀಡಿದ ಪೃಥ್ವಿ ಶಾ ಆಟದ ಆರಂಭದಲ್ಲೇ ನಿರಾಸೆ ಮೂಡಿಸಿದರು. ಕೇವಲ 4 ರನ್ಗಳಿಗೆ ಅವರು ಪೆವಿಲಿಯನ್ ಸೇರಿದರು. ಆದರೆ ಶಿಖರ್ ಧವನ್ ಅವರು ಪಂದ್ಯ ಪೂರ್ತಿ ಮೈದಾನದಲ್ಲಿದ್ದು 69 ರನ್ (52 ಎಸೆತಗಳಿಗೆ) ಗಳಿಸಿದರೂ ತಂಡ ಸೋಲಿನ ಹಾದಿಯನ್ನು ಹಿಡಿಯಿತು. ಡಿಸಿ ತಂಡದ ನಾಯಕ ಎಸ್. ಐಯ್ಯರ್ ಕೂಡ ಉತ್ತಮ ಮೊತ್ತವನ್ನು ತಂಡಕ್ಕೆ ನೀಡಿದರೂ ಡಿಸಿ ಸೋಲಿನ ಸುಳಿಯಿಂದ ತಪ್ಪಿಸಿಕೊಳ್ಳಲಾಗಲಿಲ್ಲ. ಡಿಸಿ ತಂಡವು 20 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 162 ರನ್ ಗಳಿಸಿತು.
ಡಿಸಿ ನೀಡಿದ ಗುರಿಯ ಹಿಂದೆ ಬಿದ್ದ ಎಮ್ಐ ತಂಡದ ಆರಂಭಿಕ ಬ್ಯಾಟ್ಸ್ಮನ್ಗಳಲ್ಲಿ ಒಬ್ಬರಾದ ಹಾಗೂ ಎಮ್ಐ ತಂಡದ ನಾಯಕರಾದ ರೋಹಿತ್ ಶರ್ಮಾ ಕೇವಲ 5 ರನ್ಗಳಿಗೆ ಔಟಾಗಿ ನಿರಾಸೆ ಮೂಡಿಸಿದರು. ಆದರೆ ತಂಡದ ಉಪನಾಯಕ ಡಿ. ಕಾಕ್ 36 ಎಸೆತಗಳಿಗೆ 53 ರನ್ಗಳ ಮೊತ್ತವನ್ನು ತಂಡಕ್ಕೆ ನೀಡಿ ತಂಡವನ್ನು ಬಲಗೊಳಿಸಿದರು. ರೋಹಿತ್ ಶರ್ಮಾರ ನಂತರದ ಬ್ಯಾಟ್ಸ್ಮನ್ ಎಸ್ ಯಾದವ್ ಸಹ 32 ಎಸೆತಗಳಲ್ಲಿ 53 ರನ್ ಗಳಿಕೆ ಮಾಡಿದರು. ಧವನ್ ಹಾಗೂ ಯಾದವ್ ಇಂದು ಎಮ್ಐ ತಂಡ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದರು. ಎಮ್ಐ ತಂಡ 19.4 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 166 ರನ್ ಗಳಿಸಿ ಜಯಶೀಲರಾದರು.
ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More
This website uses cookies.
Leave a Comment