ಆದರೆ ಈ ಕುರಿತು ಮಾತನಾಡಿರುವ ಶಂಕರಣ್ಣ ತಾಯಿ ರಂಗಮ್ಮ, ಸೊಸೆ ದಿನಾಲೂ ಜಗಳ ಮಾಡುತ್ತಿದ್ದಳು, ಕಿರಿಕಿರಿ ಕೊಡುತ್ತಿದ್ದಳು, ಮಗನಿಗಿದ್ದ 3 ಎಕರೆ ಜಮೀನು ಮಾರಿ ಬೆಂಗಳೂರಿಗೆ ಹೋಗೋಣ ಅನ್ನುತ್ತಿದ್ದಳು ಎಂದು ಮೇಘನಾ ವಿರುದ್ಧ ಆರೋಪಿಸಿದ್ದಾರೆ.
ಅತ್ತೆ-ಸೊಸೆ ನಡುವೆ ಜಗಳ ಇರಲಿಲ್ಲ. ಮೇಘನಾ ಒಂದೊಮ್ಮೆ ನಾನು ಮಾತನಾಡುವುದನ್ನು ರೆಕಾರ್ಡ್ ಮಾಡಿಕೊಳ್ಳಲು ತಮ್ಮನನ್ನು ಕರೆಸಿದ್ದರು. ನಾನು ಆಗ ಏನೂ ಮಾತನಾಡದೇ ಆಚೆಗೆ ಬಂದುಬಿಟ್ಟಿದ್ದೆ. ಆಗ ಅವರಿಬ್ಬರ ನಡುವೆ ಜಗಳ ನಡೆದಿತ್ತು. ಮಗನಿಗೆ ವಿಷಯ ತಿಳಿಸಿದಾಗ, ನನ್ನ ತಮ್ಮನೊಂದಿಗೆ ಜಗಳ ಕಾದಿದ್ದಕ್ಕೆ ಏನಾಯ್ತು? ಎಂದು ಗದರಿದ್ದಳು.
ಅಂದಿನಿಂದ ನನ್ನೊಂದಿಗೆ ಮಾತನಾಡುವುದನ್ನೂ ಬಿಟ್ಟು, ನನ್ನನ್ನು ಹೊರಹಾಕಿ – ಹೊರಹಾಕಿ ಎಂದು ಪೀಡಿಸುತ್ತಿದ್ದಳು. ಆದರೆ, ಮಗ ಮಾತ್ರ ನಾನು ನಮ್ಮಮ್ಮನನ್ನು ಬಿಟ್ಟು ಬರುವುದಿಲ್ಲ. ಇಲ್ಲಿಂದ ಆಚೆ ಬಂದರೆ ಸತ್ತು ಹೋಗುತ್ತೇನೆ ಎಂದು ಹೇಳಿದ್ದ ಎಂದು ಅಳಲು ತೋಡಿಕೊಂಡಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು