ಮಂಗಳವಾರ ಬೆಳಿಗ್ಗೆಯಷ್ಟೇ ಆತ್ಮಹತ್ಯೆಗೆ ಶರಣಾಗಿರುವ ಶಂಕರಣ್ಣನ ಪತ್ನಿ ಮೇಘನಾ 4 ತಿಂಗಳ ಗರ್ಭಿಣಿಯಾಗಿದ್ದರೂ ಮನೆಯಲ್ಲಿ ಸಂಭ್ರಮ ಪಡುವ ಹಾಗೆ ಇರಲಿಲ್ಲ ಶಂಕರಣ್ಣನ ಅಗಲಿಕೆಯಿಂದ ಶೋಕಾಚರಣೆ ಮಾಡುವ ದುರ್ವಿಧಿ ಬಂದೊದಗಿದೆ ಮೇಘನಾ ಈಗ ರೋಧಿಸುತ್ತಿದ್ದಾರೆ
ಆದರೆ ಈ ಕುರಿತು ಮಾತನಾಡಿರುವ ಶಂಕರಣ್ಣ ತಾಯಿ ರಂಗಮ್ಮ, ಸೊಸೆ ದಿನಾಲೂ ಜಗಳ ಮಾಡುತ್ತಿದ್ದಳು, ಕಿರಿಕಿರಿ ಕೊಡುತ್ತಿದ್ದಳು, ಮಗನಿಗಿದ್ದ 3 ಎಕರೆ ಜಮೀನು ಮಾರಿ ಬೆಂಗಳೂರಿಗೆ ಹೋಗೋಣ ಅನ್ನುತ್ತಿದ್ದಳು ಎಂದು ಮೇಘನಾ ವಿರುದ್ಧ ಆರೋಪಿಸಿದ್ದಾರೆ.
ಅತ್ತೆ-ಸೊಸೆ ನಡುವೆ ಜಗಳ ಇರಲಿಲ್ಲ. ಮೇಘನಾ ಒಂದೊಮ್ಮೆ ನಾನು ಮಾತನಾಡುವುದನ್ನು ರೆಕಾರ್ಡ್ ಮಾಡಿಕೊಳ್ಳಲು ತಮ್ಮನನ್ನು ಕರೆಸಿದ್ದರು. ನಾನು ಆಗ ಏನೂ ಮಾತನಾಡದೇ ಆಚೆಗೆ ಬಂದುಬಿಟ್ಟಿದ್ದೆ. ಆಗ ಅವರಿಬ್ಬರ ನಡುವೆ ಜಗಳ ನಡೆದಿತ್ತು. ಮಗನಿಗೆ ವಿಷಯ ತಿಳಿಸಿದಾಗ, ನನ್ನ ತಮ್ಮನೊಂದಿಗೆ ಜಗಳ ಕಾದಿದ್ದಕ್ಕೆ ಏನಾಯ್ತು? ಎಂದು ಗದರಿದ್ದಳು.
ಅಂದಿನಿಂದ ನನ್ನೊಂದಿಗೆ ಮಾತನಾಡುವುದನ್ನೂ ಬಿಟ್ಟು, ನನ್ನನ್ನು ಹೊರಹಾಕಿ – ಹೊರಹಾಕಿ ಎಂದು ಪೀಡಿಸುತ್ತಿದ್ದಳು. ಆದರೆ, ಮಗ ಮಾತ್ರ ನಾನು ನಮ್ಮಮ್ಮನನ್ನು ಬಿಟ್ಟು ಬರುವುದಿಲ್ಲ. ಇಲ್ಲಿಂದ ಆಚೆ ಬಂದರೆ ಸತ್ತು ಹೋಗುತ್ತೇನೆ ಎಂದು ಹೇಳಿದ್ದ ಎಂದು ಅಳಲು ತೋಡಿಕೊಂಡಿದ್ದಾರೆ.
- ‘ವೈಸ್ ಅಡ್ಮಿರಲ್’ ದಿನೇಶ್ ತ್ರಿಪಾಠಿ ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ನೇಮಕ
- ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ
- ಕುಮಾರಸ್ವಾಮಿ ಗೆಲ್ಲಿಸಿ, ಕೇಂದ್ರ ಮಂತ್ರಿ ಸ್ಥಾನ ಸಾಧ್ಯತೆ : ಬಿಜೆಪಿ ಶಾಸಕ ಸುರೇಶ್ ಕುಮಾರ್
- ಮಂಡ್ಯದಲ್ಲಿ ಐಸ್ಕ್ರೀಂ ತಿಂದು ಅವಳಿ ಮಕ್ಕಳು ಸಾವು
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ದೇವೇಗೌಡರಿಂದ ಡಿ ಸಿ ಎಂ ಡಿಕೆಶಿ ವಿರುದ್ಧ ಗಂಭೀರ ಆರೋಪ