ಹೆರಿಗೆ ನೋವು ಕಾಣಿಸಿಕೊಂಡಿದ್ದರೂ ಗರ್ಭಿಣಿಯನ್ನು ಆಸ್ಪತ್ರೆಗೆ ಅಡ್ಮಿಟ್ ಮಾಡಿಕೊಳ್ಳಲು ಮಂಡ್ಯ ಜಿಲ್ಲಾ ಆಸ್ಪತ್ರೆ ಸಿಬ್ಬಂದಿ ನಿರಾಕರಣೆ ಮಾಡಿದ್ದರಿಂದ ಆಸ್ಪತ್ರೆ ಬಾಗಿಲಲ್ಲೇ ಹೆರಿಗೆ ಆಯ್ತು. ಆದರೆ ಮಗು ಸಾವನ್ನಪ್ಪಿದ ಘಟನೆ ಮಂಡ್ಯದಲ್ಲಿ ಜರುಗಿದೆ.
ಮಂಡ್ಯ ಜಿಲ್ಲಾಸ್ಪತ್ರೆಯ ಹೆರಿಗೆ ವಾರ್ಡ್ ಮುಂಭಾಗ ಮನಕಲಕುವ ಘಟನೆ ಜರುಗಿದೆ.
ನಿನ್ನೆ ಹೆರಿಗೆಗಾಗಿ ಸೋನು ಎಂಬ ತುಂಬು ಗರ್ಭಿಣಿ ಆಸ್ಪತ್ರೆಗೆ ಬಂದಿದ್ದರು. ಕೋವಿಡ್ ರಿಪೋರ್ಟ್ ಇಲ್ಲ ಎನ್ನುವ ಕಾರಣಕ್ಕೆ ಸೋನು ಅವರನ್ನು ನಿನ್ನೆ ಅಡ್ಮಿಟ್ ಮಾಡಿಕೊಂಡಿರಲಿಲ್ಲ.
ಬುಧವಾರ ಬೆಳಗ್ಗೆ 6 ಗಂಟೆಯಲ್ಲಿ ನೋವು ಮತ್ತೆ ಕಾಣಿಸಿಕೊಂಡಿದ್ದರಿಂದ ಪೋಷಕರು 8 ಗಂಟೆ ವೇಳಗೆ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ.
ಈ ವೇಳೆ 2 ಗಂಟೆಯಾದರೂ ಸೋನಳನ್ನು ದಾಖಲು ಮಾಡಿಕೊಳ್ಳದೆ ಸಿಬ್ಬಂದಿ ನಿರ್ಲಕ್ಷ್ಯ ತೋರಿದರು. ಈ ವೇಳೆ ಆಸ್ಪತ್ರೆ ಮುಂಭಾಗ ನಿಂತಿದ್ದ ಮಹಿಳೆಗೆ ನಿಂತಲ್ಲೇ ಹೆರಿಗೆ ಆಗಿ, ಮಗು ಕೆಳಗೆಬಿದ್ದು ಮಗು ಸಾವನ್ನಪ್ಪಿತು.
ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯದ ವಿರುದ್ಧ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
- ರೇವಣ್ಣ ರಿಲೀಸ್ : ಬಿಗ್ ರಿಲೀಪ್
- ನನ್ನನ್ನು ಯಾರು ಅಪಹರಣ ಮಾಡಿಲ್ಲ, ಮಗ ತಪ್ಪು ದೂರು ಕೊಟ್ಟಿದ್ದಾನೆ ಎಂದ ಕಿಡ್ನ್ಯಾಪ್ ಸಂತ್ರಸ್ತೆ
- ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಂದಿದ್ದರೆ ಮಂಡ್ಯದ ನಟಿ ಪವಿತ್ರಾ ಸಾಯುತ್ತಿರಲಿಲ್ಲ- ಗೆಳೆಯ ಚಂದ್ರಕಾಂತ್