ಬಡತನವನ್ನು ಆಕರ್ಷಕವಾಗಿ ಕಣ್ಣೀರಾಗುವಂತೆ ವರ್ಣಿಸಬಲ್ಲೆ,
ಭ್ರಷ್ಟತೆಯನ್ನು ಕೋಪ ಉಕ್ಕುವಂತೆ ಚಿತ್ರಿಸಬಲ್ಲೆ,
ದೌರ್ಜನ್ಯಗಳನ್ನು ಕೆಂಡಾಮಂಡಲವಾಗುವಂತೆ ಬರೆಯಬಲ್ಲೆ,
ವೇಶ್ಯಾವಾಟಿಕೆಯನ್ನು ಮನಮಿಡಿಯುವಂತೆ ಹೇಳಬಲ್ಲೆ,
ರೈತರ ಕಷ್ಟ ಕೋಟಲೆಗಳನ್ನು ನಿಮ್ಮ ಮನದಾಳಕ್ಕೆ ಮುಟ್ಟುವಂತೆ ಸೃಷ್ಟಿಸಬಲ್ಲೆ,
ಬಾಲಕಾರ್ಮಿಕರ ಸ್ಥಿತಿಯನ್ನು ಮನಕರಗುವಂತೆ ನಿರೂಪಿಸಬಲ್ಲೆ,
ಧರ್ಮಗಳನ್ನು ಕಟು ಮಾತುಗಳಲ್ಲಿ ಖಂಡಿಸಬಲ್ಲೆ,
ಜಾತಿಗಳ ಅಸ್ತಿತ್ವವನ್ನು ಅಲ್ಲಗಳೆಯಬಲ್ಲೆ,
ಬುದ್ದ, ಬಸವ, ಗಾಂಧಿ, ವಿವೇಕಾನಂದ, ಅಂಬೇಡ್ಕರ್ ಅವರುಗಳನ್ನು ದೇವರಂತೆ ಚಿತ್ರಿಸಬಲ್ಲೆ,
ಪ್ರೀತಿ, ಕರುಣೆ, ಸಮಾನತೆ, ಮಾನವೀಯತೆಯ ಶ್ರೇಷ್ಠತೆಯನ್ನು ಸಾರಬಲ್ಲೆ,
ನಿಮ್ಮನ್ನು ಮೆಚ್ಚಿಸುವ ಸಿನಿಮಾ ನಿರ್ಮಿಸಬಲ್ಲೆ,
ನಿಮ್ಮನ್ನು ರಂಜಿಸುವ ಲೇಖನ ಬರೆಯಬಲ್ಲೆ,
ನಿಮ್ಮನ್ನು ನಗಿಸುವ ಸಾಹಿತ್ಯ ರಚಿಸಬಲ್ಲೆ,
ನಿಮ್ಮನ್ನು ಅಳಿಸುವ ಕಥೆ, ಕಾದಂಬರಿ ಸೃಷ್ಟಿಸಬಲ್ಲೆ,
ನಿಮ್ಮನ್ನು ಭಕ್ತಿಯ ಲೋಕದಲ್ಲಿ ತೇಲಿಸಬಲ್ಲೆ,
ನಿಮ್ಮನ್ನು ಮೌಡ್ಯದ ಆಳಕ್ಕೆ ಸೆಳೆಯಬಲ್ಲೆ,
ನಿಮ್ಮನ್ನು ಮಹಾನ್ ಬುದ್ದಿವಂತರೆಂದು ನಂಬಿಸಬಲ್ಲೆ,
ನಿಮ್ಮನ್ನು ಮಾತಿನ ಮೋಡಿಯಲ್ಲಿ ಬೀಳಿಸಬಲ್ಲೆ,
ಹೌದು,
ಇದನ್ನು ಕೇವಲ ಲೇಖನಿಯಿಂದ ಮಾಡಬಲ್ಲೆ,
ಆದರೆ,…….,
ನಿಮ್ಮನ್ನು ನಾಗರೀಕರನ್ನಾಗಿ ಮಾಡಲು ಸಾಧ್ಯವಾಗುತ್ತಿಲ್ಲ,
ನಿಮ್ಮನ್ನು ನಿಜವಾದ ಮನುಷ್ಯರನ್ನಾಗಿ ಮಾಡಲು ಸಾಧ್ಯವಾಗುತ್ತಿಲ್ಲ,
ನಿಮ್ಮ ಕಷ್ಟ ಕೋಟಲೆಗಳನ್ನು ಕಡಿಮೆ ಮಾಡಲು ಸಾಧ್ಯವಾಗುತ್ತಿಲ್ಲ,
ನನಗೂ ನನ್ನಂತೆ ಸ್ವತಂತ್ರವಾಗಿ ಬದುಕಲು ಸಾಧ್ಯವಾಗುತ್ತಿಲ್ಲ,
ಇದೆಲ್ಲಾ ಹೇಳಿದ ನಾನೂ ನಿಮ್ಮೊಳಗೊಬ್ಬನೆ,
ನಿಮ್ಮಂತೆ ನನ್ನ ಮನಸ್ಸೂ ಬದಲಾವಣೆಗಾಗಿ ತುಡಿಯುತ್ತಿದೆ,
ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More
This website uses cookies.
Leave a Comment