ಸಚಿವ ಗೋವಿಂದ ಕಾರಜೋಳ ಪ್ರಯಾಣಿಸುತ್ತಿದ್ದ ಕಾರ್ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರನೊಬ್ಬ ಗಂಭೀರ ವಾಗಿ ಗಾಯಗೊಂಡ ಘಟನೆ ಈ ಸಂಜೆ ಜರುಗಿದೆ
ನೆಲಮಂಗಲ ತಾಲೂಕಿನ ಕುಲವನಹಳ್ಳಿಯಲ್ಲಿ ಮಹಿಮಾಪುರ ಗೇಟ್ ಬಳಿ ಘಟನೆ ನಡೆದಿದೆ.
ಅಪಘಾತದಲ್ಲಿ ಬೈಕ್ ಸವಾರನ ಕಾಲು ಮುರಿದಿದೆ. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತದೆ.
ನೆಲಮಂಗಲ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ಜರುಗಿದೆ
ಸಚಿವರು ಹಾಗೂ ಇತರರಿಗೆ ಗಾಯಗಳಾಗಿರುವ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.