ಮೈಸೂರಿನ ಅರಣ್ಯ ಭವನದಲ್ಲಿ ಭಾನುವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವ ಖಂಡ್ರೆ ಇಂದಿನ ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ವೈಪರಿತ್ಯ ತಡೆಗೆ ವೃಕ್ಷ ಸಂಪತ್ತಿನ ಹೆಚ್ಚಳ ಅನಿವಾರ್ಯವಾಗಿದೆ ಎಂದರು.
ರಾಜ್ಯ ಸರ್ಕಾರ ಪ್ರಸಕ್ತ ವರ್ಷ 5 ಕೋಟಿ ಸಸಿಗಳನ್ನು ನೆಟ್ಟು ಪೋಷಿಸಲು ತೀರ್ಮಾನಿಸಿದೆ. ಈ ವಲಯದಲ್ಲಿ ಹೆಚ್ಚಿನ ಸಸ್ಯಗಳನ್ನು ನೀಡುವಂತೆ ಸೂಚಿಸಿದರು.
ದಿನಗೂಲಿ ನೌಕರರಿಗೆ ಅದರಲ್ಲೂ ಹೊರಗುತ್ತಿಗೆಯ ನೌಕರರಿಗೆ ವೇತನ ವಿಳಂಬವಾಗುತ್ತಿರುವ ಬಗ್ಗೆ ದೂರುಗಳು ಬಂದಿವೆ ಅಂತಹ ಹೊರಗುತ್ತಿಗೆ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಂಡು ಬಡ ನೌಕರರಿಗೆ ಸಕಾಲದಲ್ಲಿ ಸಂಬಳ ಕೈ ಸೇರುವಂತೆ ಕ್ರಮವಹಿಸಲು ಸೂಚಿಸಿದರು.
ಮೈಸೂರು ದಸರಾ ಜಂಬೂ ಸವಾರಿಯಲ್ಲಿ ಆನೆಗಳೆ ಪ್ರಧಾನ ಆಕರ್ಷಣೆಯಾಗಿದೆ, ಈ ಬಾರಿಯ ದಸರಾ ಮಹೋತ್ಸವಕ್ಕೆ 14 ಆನೆಗಳನ್ನು ಎಲ್ಲಾ ಮಾನದಂಡಗಳನ್ನು ಅನುಸರಿಸಿ ಆಯ್ಕೆ ಮಾಡುವಂತೆ ತಿಳಿಸಿದರು.ಜಲಾಶಯಗಳ ಇಂದಿನ ನೀರಿನ ಮಟ್ಟ
ಆನೆಗಳ ಆಯ್ಕೆ ಗಜ ಪಯಣ ಮತ್ತು ತಾಲಿಮೀನಲ್ಲಿ ಯಾವುದೇ ಲೋಪದೋಷಗಳಿಗೆ ಆಸ್ಪದ ನೀಡದಂತೆ ಕಟ್ಟೆಚ್ಚರ ವಹಿಸಲು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು