ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಮಹದೇವಪ್ಪ ಧಾರ್ಮಿಕ ಸ್ವಾತಂತ್ರ್ಯ ಎಂಬುದು ಸಂವಿಧಾನಬದ್ಧ ಹಕ್ಕು .ಯಾರು ಯಾವ ಆಚರಣೆಯನ್ನು ಬೇಕಾದರೂ ಮಾಡಬಹುದು. ಯಾವ ಆಚರಣೆ ಬೇಕು, ಬೇಡ ಅಂತಾ ಸರ್ಕಾರ ತೀರ್ಮಾನ ಮಾಡಲು ಅವಕಾಶ ಇಲ್ಲ ಎಂದರು.
ಮಹಿಷ ದಸರಾಕ್ಕೆ ಅವಕಾಶ ನೀಡುವ ವಿಚಾರ ಇನ್ನೂ ನಮ್ಮ ಮುಂದೆ ಬಂದಿಲ್ಲ. ಮನವಿ ಬಂದರೆ ಪರಿಶೀಲಿಸುತ್ತೇವೆ ಎಂದು ಮೈಸೂರು ಜಿಲ್ಲಾ ಮಂತ್ರಿ ಡಾ ಮಹದೇವಪ್ಪ ಮಹಿಷ ದಸರಾ ನಡೆಯುವ ಬಗ್ಗೆ ಸುಳಿವು ನೀಡಿದರು.
ನೂತನ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ನಡೆಯುತ್ತಿರುವ ಮೊದಲ ದಸರಾ ಇದು. ಹಾಗಾಗಿ ಜನರು ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿರುತ್ತಾರೆ. ದಸರಾ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಚರ್ಚಿಸಿದ ಬಳಿಕ ಈ ಬಾರಿಯ ನಾಡಹಬ್ಬದ ರೂಪುರೇಷೆಯನ್ನು ಸಿದ್ಧಪಡಿಸಲಾಗುವುದು. ಎಲ್ಲವನ್ನೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ನಿರ್ಧರಿಸುತ್ತಾರೆ ಎಂದು ಹೇಳಿದರು.
ಇನ್ನು ಎಚ್.ಡಿ.ಕುಮಾರಸ್ವಾಮಿ ಪೆನ್ಡ್ರೈವ್ ವಿಚಾರವಾಗಿ ಪ್ರತಿಕ್ರಿಯಿಸಿ, ಅವರು ಮುಖ್ಯಮಂತ್ರಿಯಾಗಿ ಕೆಲಸ ಮಾಡಿರುವ ಅನುಭವ ಇರುವವರಾಗಿದ್ದಾರೆ. ಹಾಗಾಗಿ ಅವರು ಗಾಳಿಯಲ್ಲಿ ಗುಂಡು ಹೊಡೆಯಬಾರದು. ನಿಖರ ಮಾಹಿತಿ ಇದ್ದಲ್ಲಿ ಅದನ್ನು ಜನರ ಮುಂದೆ ಪ್ರದರ್ಶಿಸಲಿ. ದಾಖಲೆ, ಸಾಕ್ಷ್ಯ ಇಟ್ಟುಕೊಂಡು ಆರೋಪಿಸಿದರೆ ಅದಕ್ಕೊಂದು ಅರ್ಥವಿರುತ್ತದೆ ಎಂದು ತಿಳಿಸಿದರು.ಇಂದು ಅನ್ನಭಾಗ್ಯ ಯೋಜನೆ ಚಾಲನೆ : ಬಿಪಿಎಲ್ ಕಾರ್ಡ್ ಅಕೌಂಟ್ಗೆ ರೇಷನ್ ದುಡ್ಡು .
ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷ ಘೋಷಣೆ ಮಾಡಿದ್ದ ಎಲ್ಲ ಗ್ಯಾರಂಟಿಗಳನ್ನೂ ಈಡೇರಿಸಲಾಗುವುದು. ಈಗಾಗಲೇ ಬಜೆಟ್ನಲ್ಲಿ ಘೋಷಣೆ ಮಾಡಿ ಇದಕ್ಕೆ ಅನುದಾನವನ್ನು ಮೀಸಲಿಡಲಾಗಿದೆ. ಇನ್ನು ಯುವ ನಿಧಿಯ ನೋಂದಣಿ ಪ್ರಕ್ರಿಯೆ ಬಗ್ಗೆ ಶೀಘ್ರದಲ್ಲೇ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More
ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರ… Read More
ಬೆಂಗಳೂರು : ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಿಸಲು ಸಂಚು ರೂಪಿಸಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ(ಎನ್ಐಎ)… Read More
ಹುಬ್ಬಳ್ಳಿ : ಇಂದು ಪಾಗಲ್ ಪ್ರೇಮಿಯೊಬ್ಬ ಪ್ರೀತಿ ನಿರಾಕರಿಸಿದ್ದಕ್ಕೆ ಮನೆಗೆ ನುಗ್ಗಿ ಯುವತಿಗೆ ಚಾಕುವಿನಿಂದ ಮನಬಂದಂತೆ ಇರಿದು ಹತ್ಯೆಗೈದಿರುವ ಘಟನೆ… Read More
This website uses cookies.
Leave a Comment