ಸಕ್ಕರೆ ಮತ್ತು ಪೌರಾಡಳಿತ ಸಚಿವ ರಾಗಿರುವ ಎಂಟಿಬಿ ನಾಗರಾಜ್ ಅವರಿಗೆ ಹೆಚ್ಚುವರಿಯಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಸ್ತುವಾರಿ ಸ್ಥಾನ ನೀಡಲಾಗಿದೆ.
ಸಿಎಂ ಬಿಎಸ್ ಯಡಿಯೂರಪ್ಪ ಅವರ ನಿರ್ದೇಶನದಂತೆ ಕಂದಾಯ ಸಚಿವ ಆರ್.ಅಶೋಕ್ ಬಳಿಯಿದ್ದ ಈ ಖಾತೆಯನ್ನು ಎಂಟಿಬಿ ನಾಗರಾಜ್ ನೀಡಿ ಸರ್ಕಾರದ ಅಧೀನ ಕಾರ್ಯದರ್ಶಿ ಸಿ. ಮಾಲತಿ ಆದೇಶ ಹೊರಡಿಸಿದ್ದಾರೆ.
ಇಷ್ಟು ದಿನಗಳ ಕಾಲ ಸಿಎಂ ಮುಂದೆ ಎಂಟಿಬಿ ನಾಗರಾಜ್ ಬೇಡಿಕೆ ಇಟ್ಟಿದ್ದರು. ನಾನು ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯವನು. ನನಗೆ ನನ್ನ ಜಿಲ್ಲೆಯ ಉಸ್ತುವಾರಿ ಸ್ಥಾನ ಬೇಕು. ನನಗೆ ನನ್ನ ಜಿಲ್ಲೆಯನ್ನು ಹೊರತುಪಡಿಸಿ, ಈ ಹಿಂದೆ ಕೋಲಾರ ಜಿಲ್ಲೆಯ ಉಸ್ತುವಾರಿ ಸ್ಥಾನ ನೀಡಲಾಗಿತ್ತು.
2023ರಲ್ಲಿ ಎದುರಾಗಲಿರುವ ರಾಜ್ಯ ಸಾರ್ವತ್ರಿಕ ವಿಧಾನಸಭಾ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಬಲವರ್ಧನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಆಗಬೇಕೆಂದರೆ, ನನಗೆ ನನ್ನ ತವರು ಜಿಲ್ಲೆಯ ಉಸ್ತುವಾರಿ ಬೇಕು ಎಂದು ಎಂಟಿಬಿ ನಾಗರಾಜ್ ಬೇಡಿಕೆ ಇಟ್ಟಿದ್ದರು. ಕೊನೆಗೂ ಎಂಟಿಬಿ ನಾಗರಾಜ್ ಬೇಡಿಕೆಯನ್ನು ಸಿಎಂ ಯಡಿಯೂರಪ್ಪ ಈಡೇರಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ