Main News

ಸಧ್ಯದಲ್ಲೇ 1 ರಿಂದ5 ತರಗತಿ ಶಾಲೆ ಆರಂಭಕ್ಕೆ ಚಿಂತನೆ – ಸಚಿವ ನಾಗೇಶ್

ರಾಜ್ಯದಲ್ಲಿ 1 ರಿಂದ 5ನೇ ತರಗತಿಯವರೆಗೆ ಶಾಲೆ ಆರಂಭಿಸುವ ಕುರಿತಂತೆ ತಾಂತ್ರಿಕ ಸಮಿತಿ ಸಭೆ ಅನುಮತಿ ನೀಡಿದ ನಂತರ ಆರಂಭಿಸುತ್ತೇವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ನಾಗೇಶ್
ಪಠ್ಯ ಕಡಿತಗೊಳಿಸುವ ಸಂಬಂಧ ಬ್ರಿಡ್ಜ್ ಕೋರ್ಸ್ ಮಾಡುತ್ತಿದ್ದೇವೆ. ಸಿಲೆಬಸ್ ಪೂರ್ತಿ ಮಾಡಿದರೆ ಮಕ್ಕಳಿಗೆ ಲಾಭ. ಒಂದೂವರೆ ವರ್ಷ ಮಕ್ಕಳು ಶಾಲೆಯಿಂದ ದೂರ ಉಳಿದಿದ್ದಾರೆ. ಅದನ್ನು ಬ್ರಿಡ್ಜ್ ಕೋರ್ಸ್ ನಲ್ಲಿ ಪೂರ್ಣಗೊಳಿಸ ಬೇಕಿದೆ ಎಂದರು

ಈ ವರ್ಷವು ಪಠ್ಯ ಕಡಿತಗೊಳಿಸಿದರೆ ಮುಂದಿನ ತರಗತಿಗಳಿಗೆ ತೊಂದರೆ ಆಗುತ್ತದೆ. ಹೀಗಾಗಿ ಆ ಬಗ್ಗೆ ಯಾವ ನಿರ್ಣಯ ಕೈಗೊಂಡಿಲ್ಲ. ಶಿಕ್ಷಕರ ರಜೆ ಕಡಿಮೆ ಮಾಡಿ ಸಿಲೆಬಸ್ ಪೂರ್ಣಗೊಳಿಸಬಹುದಾ ಎಂಬ ಬಗ್ಗೆ ಯೋಚನೆ ಇದೆ. ಈ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಹೇಳಿದರು.

ಕೇರಳದಲ್ಲಿ ಕೊರೊನಾ ಹೆಚ್ಚಾಗುತ್ತಿದೆ. ಮಂಗಳೂರು, ಉಡುಪಿಯಲ್ಲಿ ಕಡಿಮೆ ಆಗುತ್ತಿದೆ. ಶಾಲೆ ಪ್ರಾರಂಭ ಮಾಡಿರುವ ಸರ್ಕಾರಕ್ಕೆ ಕೋವಿಡ್ ಹೆಚ್ಚಳವಾದರೆ ತಕ್ಷಣ ನಿಲ್ಲಿಸುವ ಅವಕಾಶ ಇದೆ. ಈ ಬಗ್ಗೆ ಕೊರೊನಾ ಹೆಚ್ಚಾದ ಸಂದರ್ಭದಲ್ಲಿ ನಿರ್ಣಯ ಕೈಗೊಳ್ಳುತ್ತೇವೆ ಎಂದರು.

ಕಳೆದ ಮೂರು ವರ್ಷದಿಂದ ಶಿಕ್ಷಕರ ವರ್ಗಾವಣೆ ನೆನೆಗುದಿಗೆ ಬಿದ್ದಿದೆ. ಮೂರು ವರ್ಷದಿಂದ ಸತತವಾಗಿ ಕೋರ್ಟ್ ಗೆ ಹೋಗಿ ಸ್ಟೇ ತರುತ್ತಿದ್ದಾರೆ. ಹೀಗಾಗಿ ವರ್ಗಾವಣೆ ಪ್ರಕ್ರಿಯೆ ಸ್ಥಗಿತವಾಗುತ್ತಿದೆ. ಸರ್ಕಾರದಿಂದ ಕೋರ್ಟ್‍ಗೆ ಮನವಿ ಸಲ್ಲಿಸುತ್ತೇವೆ. ಸ್ಟೇ ತೆರವುಗೊಳಿಸುವ ಪ್ರಯತ್ನ ಮಾಡುತ್ತೇವೆ. ಸ್ಟೇ ತೆರವುವಾಗದಿದ್ದರೆ ಉಳಿದ ವರ್ಗಕ್ಕೆ ವರ್ಗಾವಣೆ ಪ್ರಕ್ರಿಯೆ ಮಾಡುತ್ತೇವೆ ಎಂದರು.

Team Newsnap
Leave a Comment
Share
Published by
Team Newsnap
Tags: #schools

Recent Posts

ಮೈಸೂರು : ಇವಿಎಂ, ವಿವಿ ಪ್ಯಾಟ್ ಗಳಿಗೆ ಬಿಗಿ ಭದ್ರತೆ: ಸ್ಟ್ರಾಂಗ್ ರೂಂ ಪರಿಶೀಲಿಸಿದ ಡಿಸಿ ಡಾ ರಾಜೇಂದ್ರ

ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More

April 27, 2024

ಕೇಂದ್ರದಿಂದ ರಾಜ್ಯಕ್ಕೆ 3,454 ಕೋಟಿ ರು ಬರಪರಿಹಾರ ಘೋಷಣೆ

ತಮಿಳನಾಡಿಗೆ 275 ಕೋಟಿ ರೂ.'ನೆರೆ ಪರಿಹಾರ' ಘೋಷಣೆ ನವದೆಹಲಿ : ಕೇಂದ್ರವು ಕರ್ನಾಟಕಕ್ಕೆ 3,454 ಕೋಟಿ ರೂ. ಬರಪರಿಹಾರ, ತಮಿಳಿನಾಡಿಗೆ… Read More

April 27, 2024

14 ಕ್ಷೇತ್ರಗಳ ಪೈಕಿ ಮಂಡ್ಯ ಕ್ಷೇತ್ರದಲ್ಲಿ ಹೆಚ್ಚು ಮತದಾನ: ಮಂಡ್ಯದಲ್ಲಿ ಶೇ 81.67 ರಷ್ಟು. ಮತದಾನ

ಮಂಡ್ಯ : ನಿನ್ನೆ ನಡೆದ 14 ಲೋಕಸಭಾ ಕ್ಷೇತ್ರಗಳ ಪೈಕಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಶೇ.81.67 ಮತದಾನವಾಗಿದೆ ಕಳೆದ ಬಾರಿಗಿಂತ… Read More

April 27, 2024

ಮಂಡ್ಯ , ಬೆಂಗಳೂರು ಕ್ಷೇತ್ರದ 9 ಗಂಟೆ ತನಕದ ಮತದಾನದ ವಿವರ

ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರ 9 ಗಂಟೆಗೆ ಶೇ. 7.70% ಮತದಾನ Join WhatsApp Group ವಿಧಾನಸಭಾ ಕ್ಷೇತ್ರವಾರು… Read More

April 26, 2024

ಮೂವರು ಯುವಕರು ರೈಲಿಗೆ ಸಿಲುಕಿ ದುರ್ಮರಣ

ಬೆಂಗಳೂರು : ಮಾರತ್ತಹಳ್ಳಿ ರೈಲ್ವೇ ನಿಲ್ದಾಣದ ಬಳಿ ಮೂವರು ಯುವಕರು ರೈಲಿಗೆ ಸಿಲುಕಿ ಸಾವಿಗೀಡಾದ ಘಟನೆ ನಡೆದಿದೆ. ಆಂಧ್ರಪ್ರದೇಶದ ಚಿತ್ತೂರು… Read More

April 25, 2024

ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಮೈಸೂರಿನ ಹೊರವಲಯದಲ್ಲಿ ಅಪಘಾತಕ್ಕೀಡಾಗಿರುವ ಘಟನೆ ಬುಧವಾರ ರಾತ್ರಿ 11.50 ರ ಸುಮಾರಿಗೆ ನಡೆದಿದೆ.… Read More

April 25, 2024