ಕೊರೋನಾಗೆ ಬಲಿಯಾದ ವ್ಯಕ್ತಿಗಳ ಅನಾಥ ಶವಗಳ ಮುಕ್ತಿಗೆ ಕೊಡುವ ಸಂಕಲ್ಪ ಮಾಡಿದ ರಾಜ್ಯ ಸರ್ಕಾರ ಕಾವೇರಿ ನದಿಗೆ ಸಾವಿರಕ್ಕೂ ಹೆಚ್ಚು ಅಸ್ಥಿಗಳನ್ನು ಸಾಮೂಹಿಕವಾಗಿ ವಿಸರ್ಜನೆ ಮಾಡಲಾಯಿತು.
ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಬೆಳಕವಾಡಿ ಗ್ರಾಮದಲ್ಲಿರುವ ಶ್ರೀ ಕಾಶಿ ವಿಶ್ವೇಶ್ವರ ದೇವಾಲಯ ಸಮೀಪದ ಕಾವೇರಿ ನದಿ ಬಳಿ ಈ ಕಾರ್ಯ ನಡೆಯಿತು.
ಪುರೋಹಿತ ಭಾನು ಪ್ರಕಾಶ್ ಶರ್ಮ ನೇತೃತ್ವದಲ್ಲಿ ಅಂತಿಮ ವಿಧಿವಿಧಾನವು 12ಕ್ಕೂ ಹೆಚ್ಚು ಪುರೋಹಿತರಿಂದ ಕೋವಿಡ್ ಮೃತರಿಗೆ ಶ್ರಾದ್ಧ ಕಾರ್ಯ ನೆರವೇರಿತು.
ಕರ್ನಾಟಕ ಸರ್ಕಾರದ ಪರವಾಗಿ ಸಂಕಲ್ಪಕ್ಕೆ ಕುಳಿತಿದ್ದ ಸಚಿವ ಆರ್. ಅಶೋಕ್ ನದಿಗೆ ಇಳಿದು ಅಸ್ಥಿ ವಿಸರ್ಜನೆ ಮಾಡಿದ್ದಾರೆ.
ನಂತರ ಮಾತನಾಡಿ ಸಚಿವ ಆರ್ ಅಶೋಕ್, ನನ್ನ ಜೀವನದ ಇದು ಭಾವನಾತ್ಮಕ ಘಳಿಗೆ. ಕಂದಾಯ ಸಚಿವನಾಗಿ ಇಂದು ನಿರ್ವಹಿಸಿದ ಕೆಲಸ ನನ್ನಲ್ಲಿ ಆತ್ಮತೃಪ್ತಿ ತಂದಿದೆ ಎಂದರು.
ಈ ಕಾರ್ಯ ಕೇವಲ ಇಲ್ಲಷ್ಟೇ ಅಲ್ಲ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಮಾಡಲು ಎಲ್ಲಾ ಜಿಲ್ಲಾಧಿಕಾರಿಗಳಿಗೂ ಸೂಚಿಸಲಾಗಿದೆ. ಅವರ ಜಿಲ್ಲೆಯಲ್ಲಿ ಹೀಗೆ ಕುಟುಂಬಸ್ಥರು ತೆಗೆದುಕೊಂಡು ಹೋಗದ ಅಸ್ಥಿಗಳನ್ನು ಗೌರವಪೂರ್ವಕವಾಗಿ ವಿಸರ್ಜನೆ ಮಾಡಲು ಸೂಚಿಸಲಾಗಿದೆ ಎಂದು ಹೇಳಿದರು.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ