ಶಿಕ್ಷಕರ ನೇಮಕಾತಿ ಹಗರಣ ಆರೋಪದ ಮೇಲೆ ಬಂಧಿತರಾಗಿರುವ ಪಶ್ಚಿಮ ಬಂಗಾಳದ ಸಚಿವ ಪಾರ್ಥ ಚಟರ್ಜಿ ಆಪ್ತ ಗೆಳತಿ ಅರ್ಪಿತಾ ಮೂಖರ್ಜಿ ತಮ್ಮ ಮನೆಯನ್ನು ಚಟರ್ಜಿಯವರು ಮಿನಿ ಬ್ಯಾಂಕ್ನಂತೆ ಬಳಸಿಕೊಂಡಿದ್ದರು ಎಂದು ಹೇಳಿದ್ದಾರೆ
ಕಳೆದ ಶುಕ್ರವಾರ ಜಾರಿ ನಿರ್ದೇಶನಾಲಯ ಶಿಕ್ಷಕರ ನೇಮಕಾತಿ ಹಗರಣದ ಆರೋಪದ ಮೇಲೆ ಪಾರ್ಥ ಚಟರ್ಜಿ ಅವರ ಆಪ್ತೆ ಅರ್ಪಿತಾ ಮುಖರ್ಜಿ ಅವರ ಮನೆಯಲ್ಲಿ ದಾಳಿ ನಡೆಸಿತ್ತು.ಇದನ್ನು ಓದಿ –ಬಿಜೆಪಿ ನಾಯಕ ಪ್ರವೀಣ್ ಹತ್ಯೆ : ಮಂಗಳೂರು ಪೊಲೀಸರಿಂದ 15 ಶಂಕಿತರು ವಶಕ್ಕೆ
ಈ ವೇಳೆ ಅರ್ಪಿತಾ ಮನೆಯಲ್ಲಿ 21 ಕೋಟಿ ರು ಹಣದ ರಾಶಿ ಪತ್ತೆಯಾದ ಮರುದಿನವೇ ಪಾರ್ಥ ಚಟರ್ಜಿ ಅವರನ್ನು ಇಡಿ ಬಂಧಿಸಿತ್ತು.
ನಟಿ ಅರ್ಪಿತಾ ಮುಖರ್ಜಿ ತಮ್ಮ ಮನೆಯಲ್ಲಿ ಪತ್ತೆಯಾದ ಅಷ್ಟೂ ಹಣ ಪಾರ್ಥ ಚಟರ್ಜಿಗೆ ಸೇರಿದ್ದು ಎಂದು ತಿಳಿಸಿದ್ದಾರೆ.
ಪಾರ್ಥ ಅವರು ಎಲ್ಲಾ ಹಣವನ್ನು ನನ್ನ ಮನೆಯ ಒಂದೇ ಕೋಣೆಯಲ್ಲಿಡುತ್ತಿದ್ದರು. ಪ್ರತೀ ವಾರ ಅಥವಾ 10 ದಿನಗಳಿಗೊಮ್ಮೆ ಪಾರ್ಥ ನನ್ನ ಮನೆಗೆ ಭೇಟಿ ನೀಡುತ್ತಿದ್ದರು. ಆದರೆ ತನ್ನ ಮನೆಯಲ್ಲಿ ಅವರು ಎಷ್ಟು ಹಣವನ್ನು ಇಟ್ಟಿದ್ದಾರೆ ಎಂಬ ಮಾಹಿತಿಯನ್ನು ತಿಳಿಸಿರಲಿಲ್ಲ ಎಂದಿದ್ದಾರೆ.
ಚಟರ್ಜಿಯವರು ನನ್ನ ಮನೆ ಹಾಗೂ ಇನ್ನೊಬ್ಬ ಮಹಿಳೆಯ ಮನೆಯನ್ನೂ ಕೂಡ ಮಿನಿ ಬ್ಯಾಂಕ್ ಆಗಿ ಬಳಸಿಕೊಂಡಿದ್ದಾರೆ. ಆ ಮಹಿಳೆ ಕೂಡಾ ಚಟರ್ಜಿಯವರ ಆಪ್ತ ಸ್ನೇಹಿತೆ ಎಂಬ ಗುಟ್ಟನ್ನು ನಟಿ ಅರ್ಪಿತಾ ಬಿಟ್ಟುಕೊಟ್ಟಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ