March 11, 2026

Newsnap Kannada

The World at your finger tips!

ragi bele

ರಾಗಿ ಬೆಂಬಲ ಬೆಲೆ ಕೇಂದ್ರ ಉದ್ಘಾಟಿಸಿದ ಸಚಿವ ಸೋಮಶೇಖರ್

Spread the love
  • ಕನಿಷ್ಠ ಬೆಂಬಲ ಬೆಲೆ ಸದುಪಯೋಗ ಪಡೆದುಕೊಳ್ಳಲು ಸಚಿವರ ಮನವಿ

ಮೈಸೂರಿನ ಬಂಡಿಪಾಳ್ಯ ಎಪಿಎಂಸಿಗೆ ಭೇಟಿ ನೀಡಿದ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು, ರಾಗಿ ಬೆಂಬಲ ಬೆಲೆ ಖರೀದಿ ಕೇಂದ್ರವನ್ನು ಉದ್ಘಾಟಿಸಿದರು.

ಕೇಂದ್ರ ಸರ್ಕಾರ ಸಹ ಭತ್ತ, ಗೋಧಿ ಸೇರಿದಂತೆ ಅನೇಕ ಆಹಾರ ಧಾನ್ಯಗಳಿಗೆ ಬೆಂಬಲ ಬೆಲೆ ಘೋಷಿಸಿದೆ. ರಾಜ್ಯ ಸರ್ಕಾರದಿಂದಲೂ ರೈತರಿಗೆ ಬೆಂಬಲ ಬೆಲೆ ನೀಡುತ್ತಿದ್ದು, ರಾಜ್ಯದ ಹಲವೆಡೆ ರಾಗಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ ಎಂದರು.

ಎಪಿಎಂಸಿ ಮುಚ್ಚುವುದಿಲ್ಲ :

ಎಪಿಎಂಸಿಯನ್ನು ಯಾವುದೇ ಕಾರಣಕ್ಕೂ ಮುಚ್ಚುವ ಪ್ರಶ್ನೆಯೇ ಇಲ್ಲ. ಕೇಂದ್ರ ಸರ್ಕಾರ ಸಹ ಈ ಸಾಲಿನ ಬಜೆಟ್ ನಲ್ಲಿ ಎಪಿಎಂಸಿಗಳ ಉನ್ನತೀಕರಣಕ್ಕೆ ಅನುದಾನ ಮೀಸಲಿಟ್ಟಿದೆ. ರಾಜ್ಯ ಸರ್ಕಾರ ಸಹ ಎಪಿಎಂಸಿಗಳ ಮೂಲಕ ರೈತರಿಗೆ ಮುಟ್ಟಿಸಬೇಕಾದ ಎಲ್ಲಾ ಕಾರ್ಯ ಕ್ರಮಗಳನ್ನು ಅನುಷ್ಠಾನ ಗೊಳಿಸಲಿದೆ ಎಂದು ಸಚಿವರು ತಿಳಿಸಿದರು.

19.99 ಲಕ್ಷ ರೈತರಿಗೆ 12975.34 ಕೋಟಿ ರೂಪಾಯಿ ಸಾಲ; ಎಸ್ ಟಿ ಎಸ್

ಕೋವಿಡ್ ನಡುವೆಯೂ ರೈತರಿಗೆ ಬೆಳೆ ಸಾಲಕ್ಕೆ ಯಾವುದೇ ತೊಂದರೆಯಾಗಬಾರದು ಎಂಬ ನಿಟ್ಟಿನಲ್ಲಿ ಮುಖ್ಯಮಂತ್ರಿಗಳ ಆದೇಶ ದಂತೆ ಸಹಕಾರ ಇಲಾಖೆ ಮುಖಾಂತರ ರೈತರಿಗೆ ಸಾಲ ನೀಡಿಕೆ ಪ್ರಕ್ರಿಯೆ ನಿರಂತರವಾಗಿ ನಡೆಯುತ್ತಲೇ ಇದೆ.

ರಾಜ್ಯದ 24.50 ಲಕ್ಷ ರೈತರಿಗೆ 15300 ಕೋಟಿ ರೂಪಾಯಿ ಸಾಲ ನೀಡುವ ಗುರಿಯಲ್ಲಿ ಈಗಾಗಲೇ 19,99,508 ರೈತರಿಗೆ 12975.34 ಕೋಟಿ ರೂಪಾಯಿ ಸಾಲ ನೀಡಲಾಗಿದೆ ಎಂದು ಸಚಿವ ಸೋಮಶೇಖರ್ ಮಾಹಿತಿ ನೀಡಿದರು.

error: Content is protected !!