ಈ ಹಿಂದೆ 2013ರಲ್ಲಿ ಪಂಚಲಿಂಗ್ ದರ್ಶನ ಮಹೋತ್ಸವ ನಡೆದಿತ್ತು. ಈಗ ಏಳು ವರ್ಷಕ್ಕೆ ಬಂದಿರುವುದು ನನ್ನ ಸೌಭಾಗ್ಯ ಎಂದು ತಿಳಿಸಿದ ಸಚಿವರು, ಈ ಪಂಚಲಿಂಗ ದರ್ಶನ ಮಹೋತ್ಸವದಲ್ಲಿ ಸ್ವಾಮಿ ವೈದ್ಯನಾಥೇಶ್ವರನು ಎಲ್ಲರಿಗೂ ಒಳಿತನ್ನು ಮಾಡಲಿ, ನಾಡಿಗೆ ಅಂಟಿರುವ ಕೊರೋನಾ ಮಹಾಮಾರಿ ದೂರವಾಗಲಿ, ಸಕಲರಿಗೂ ಆರೋಗ್ಯ ಹಾಗೂ ಸನ್ಮಂಗಳವನ್ನು ಕರುಣಿಸಲಿ ಎಂದು ಸಚಿವರಾದ ಸೋಮಶೇಖರ್ ಅವರು ಪ್ರಾರ್ಥಿಸಿದರು.
11 ರೀತಿಯ ಅಭಿಷೇಕ:
ಏಕಾದಶವಾರ ಆಚರಣೆ
ರುದ್ರಾಭಿಷೇಕ, ಹಾಲು, ಮೊಸರು, ತುಪ್ಪ, ಜೇನುತುಪ್ಪ, ಮೊಸರು, ಎಳನೀರು, ಭಸ್ಮೋದಿಕೆ, ಗಂಧ, ರುದ್ರೋದಕ, ಸುವರ್ಣ, ಅಕ್ಷತೋದಿಕೆ ಸೇರಿದಂತೆ ವೈದ್ಯನಾಥೇಶ್ವರನಿಗೆ 11 ರೀತಿಯ ಅಭಿಷೇಕಗಳನ್ನು ನೆರವೇರಿಸಲಾಯಿತು.
ಋಗ್ವೇದ, ಯಜುರ್ವೇದ, ಸಾಮವೇದಗಳ ಸಹಿತ ಶ್ರೀಸೂಕ್ತ, ದುರ್ಗಾ ಸೂಕ್ತ, ರುದ್ರಾ, ಚಮೆ ಸೇರಿದಂತೆ ವಿವಿಧ ಮಂತ್ರಘೋಷಗಳ ಪಠಣ ಮಾಡಲಾಯಿತು. ಈ ಮೂಲಕ ವೈದ್ಯನಾಥೇಶ್ವರ, ಮರಳೇಶ್ವರ, ಪಾತಾಳೇಶ್ವರ, ಅರ್ಕೇಶ್ವರ, ಮುಡುಕುತೊರೆ ಮಲ್ಲಿಕಾರ್ಜುನ ಸ್ವಾಮಿ ದೇವರುಗಳಿಗೆ ಏಕ ಕಾಲದಲ್ಲಿ ಪೂಜಾ ಕೈಂಕರ್ಯಗಳು ನೆರವೇರಿದವು.
ವರ್ಚುವಲ್ ಪ್ರಸಾರ
ಕೋವಿಡ್ 19ರ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಕಾಯ್ದು ಕೊಳ್ಳುವುದು ಕಡ್ಡಾಯವಾಗಿರುವ ಹಿನ್ನೆಲೆಯಲ್ಲಿ ಮೈಸೂರು ವಾರ್ತಾ ಇಲಾಖೆ ವತಿಯಿಂದ ವರ್ಚುವಲ್ ಆಗಿ ಪ್ರಸಾರವನ್ನು ಮಾಡಲಾಯಿತು. ಮೈಸೂರು ಸೇರಿದಂತೆ ರಾಜ್ಯ, ಅಂತಾರಾಜ್ಯಗಳ ಜನತೆ ಮನೆಯಿಂದಲೇ ದರ್ಶನ ಮಾಡಿದರು.
More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ