ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ದಿಢೀರ್ ದೆಹಲಿಗೆ ತೆರಳಿದ್ದಾರೆ. ಕಳೆದ ರಾತ್ರಿ 8.30ಕ್ಕೆ ವಿಮಾನ ಮೂಲಕ ಯೋಗೇಶ್ವರ್ ದೆಹಲಿಗೆ ಪ್ರಯಾಣ ಮಾಡಿದ್ದಾರೆ.
ಇಂದು ಕೇಂದ್ರ ನಾಯಕರ ಭೇಟಿಗೆ ಯೋಗೇಶ್ವರ್ ಕಾಲಾವಕಾಶ ಪಡೆಯಲಿದ್ದಾರೆ ಎನ್ನಲಾಗಿದೆ. ಇನ್ನು ನಿನ್ನೆ ರಾತ್ರಿಯೇ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಕೂಡಾ ದೆಹಲಿಯನ್ನು ತಲುಪಿದ್ದಾರೆ.
ಇತ್ತೀಚೆಗೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಬೆಂಗಳೂರಿಗೆ ಆಗಮಿಸಿ, ಸಚಿವರು ಶಾಸಕರ ಜೊತೆ ಮಾತುಕತೆ ನಡೆಸಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ್ದ ಯೋಗೇಶ್ವರ್, ಪರೀಕ್ಷೆ ಬರೆದಿದ್ದೇವೆ ರಿಸಲ್ಟ್ಗೋಸ್ಕರ ಕಾಯುತ್ತಿದ್ದೇವೆ ಅಂತ ಹೇಳಿಕೆ ನೀಡಿದರು.
ಈ ಬೆನ್ನಲ್ಲೆ ಬಿಜೆಪಿಯ ಇಬ್ಬರೂ ನಾಯಕರ ದೆಹಲಿ ಯಾತ್ರೆ ತೀವ್ರ ಕುತೂಹಲ ಮೂಡಿಸಿದೆ.
- ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ
- ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ
- ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ
- ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು
- ಬಿಜೆಪಿಯವರು ಏಕೆ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮಾತನಾಡುತ್ತಿಲ್ಲ ?ಡಿ.ಕೆ.ಶಿವಕುಮಾರ್