ಲಿಂಗಾಯತ ಸಮುದಾಯಕ್ಕೆ ಒಟ್ಟು ಏಳು ಸಚಿವ ಸ್ಥಾನ ನೀಡಲಾಗಿದೆ ಈ ಸಮುದಾಯದ ಬಹುತೇಕ ಎಲ್ಲಾ ಪ್ರಮುಖ ಒಳಪಂಗಡಗಳನ್ನೂ ಪರಿಗಣನೆಗೆ ತೆಗೆದುಕೊಳ್ಳಲಾಗಿದೆ.
ಬಣಜಿಗರಲ್ಲಿ ಈಶ್ವರ್ ಖಂಡ್ರೆ, ಪಂಚಮಸಾಲಿಗಳಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಶಿವಾನಂದ ಪಾಟೀಲ್, ಕುರು ಒಕ್ಕಲಿಗರಲ್ಲಿ ಎಂ.ಬಿ.ಪಾಟೀಲ್, ಸಾದ ಲಿಂಗಾಯತರಲ್ಲಿ ಎಸ್.ಎಸ್.ಮಲ್ಲಿಕಾರ್ಜುನ್, ಆದಿ ಬಣಜಿಗರಲ್ಲಿ ಶರಣ ಪ್ರಕಾಶ ಪಾಟೀಲ್ ರೆಡ್ಡಿಲಿಂಗಾಯತರಲ್ಲಿ ದರ್ಶನಾಪುರ ಮತ್ತು ವೈಷ್ಣವ ರೆಡ್ಡಿಯ ಪ್ರತಿನಿಧಿಯಾಗಿ ಹೆಚ್.ಕೆ.ಪಾಟೀಲ್ ಅವರಿಗೆ ಪ್ರಾತಿನಿಧ್ಯ ದೊರೆತಿದೆ.
ಒಕ್ಕಲಿಗರಲ್ಲಿ ಗಂಗಟಕಾರ್ ಒಕ್ಕಲಿಗರಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಚೆಲುವರಾಯಸ್ವಾಮಿ ಅವರುಗಳು ಇದ್ದಾರೆ. ಪಿರಿಯಾಪಟ್ಟಣ ವೆಂಕಟೇಶ್ ಕುಂಚಟಿಗರು, ದಾಸ ಒಕ್ಕಲಿಗರಲ್ಲಿ ಕೃಷ್ಣ ಬೈರೇಗೌಡ ಸೇರಿ ನಾಲ್ಕು ಮಂದಿಗೆ ಪ್ರಾತಿನಿಧ್ಯ ದೊರೆತಿದೆ.
ದಲಿತ ಸಮುದಾಯಕ್ಕೆ ಬರೋಬ್ಬರಿ 9 ಸಚಿವ ಸ್ಥಾನ ಲಭಿಸಿದ್ದು ಮುನಿಯಪ್ಪ, ಜಿ.ಪರಮೇಶ್ವರ್, ಹೆಸ್.ಸಿ.ಮಹದೇವಪ್ಪ, ತಿಮ್ಮಾಪುರ ಮತ್ತು ಪ್ರಿಯಾಂಕ್ ಖರ್ಗೆ ಅವರುಗಳು ಪರಿಶಿಷ್ಟ ಜಾತಿ ಖೋಟಾದಲ್ಲಿ ಸಚಿವರಾಗಿದ್ದಾರೆ. ಎಡಗೈ ಮತ್ತು ಬಲಗೈ ಸಮುದಾಯಗಳನ್ನು ಸರಿದೂಗಿಸಲಾಗಿದೆ. ಪರಿಶಿಷ್ಟ ಪಂಗಡದ ಪ್ರತಿನಿಧಿಗಳಾಗಿ ನಾಗೇಂದ್ರ, ಮಧುಗಿರಿ ರಾಜಣ್ಣ, ಸತೀಶ್ ಜಾರಕಿಹೊಳಿ ಅವರಿಗೆ ಅವಕಾಶ ದೊರೆತಿದೆ.
ವಿಧಾನ ಪರಿಷತ್ ಮುಖ್ಯ ಸಚೇತಕರಾಗಿರುವ ಪ್ರಕಾಶ್ ರಾಥೋಡ್ ಕೂಡ ಬಂಜಾರ ಸಮುದಾಯದವರು.
ಹಿಂದುಳಿದ ಜಾತಿಗಳಲ್ಲಿ ಅತ್ಯಂತ ಸಣ್ಣ ಸಮುದಾಯ ರಾಜು ಕ್ಷತ್ರಿಯ ಸಮುದಾಯದ ಬೋಸರಾಜು, ಅತ್ಯಂತ ಸಣ್ಣ ಹಿಂದುಳಿದ ಸಮುದಾಯಗಳಲ್ಲಿ ಒಂದಾದ ಬೆಸ್ತ ಸಮುದಾಯದ ಮಾಂಕಾಳ ವೈದ್ಯ, ಮರಾಠ ಸಮಾಜದಿಂದ ಸಂತೋಷ್ ಲಾಡ್ ಇದ್ದಾರೆ. ಕುರುಬ ಸಮುದಾಯದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬಿಟ್ಟರೆ ಬೈರತಿ ಸುರೇಶ್ ಅವರಿಗೆ ಮಾತ್ರ ಸಂಪುಟದೊಳಗೆ ಪ್ರವೇಶ ದೊರೆತಿದೆ. ಬಿಲ್ಲವ ಸಮುದಾಯದಿಂದ ಮಧು ಬಂಗಾರಪ್ಪ ಇದ್ದಾರೆ.
ಮುಸ್ಲಿಂ ಸಮುದಾಯದಿಂದ ಜಮೀರ್ ಅಹಮದ್ ಖಾನ್, ರಹೀಂ ಖಾನ್ ಇಬ್ಬರು ಸಚಿವರಾಗಿದ್ದರೆ, ಯು.ಟಿ.ಖಾದರ್ ಸ್ಪೀಕರ್ ಆಗಿದ್ದಾರೆ. ಕ್ರೈಸ್ತ ಸಮುದಾಯದಿಂದ ಕೆ.ಜೆ.ಜಾರ್ಜ್ ಅವರಿಗೆ ಸಚಿವ ಸ್ಥಾನ ಒಲಿದಿದೆ. ಜೈನ ಸಮುದಾಯದಿಂದ ಡಿ.ಸುಧಾಕರ್ ಹಾಗೂ ಬ್ರಾಹ್ಮಣ ಸಮುದಾಯದ ಪ್ರತಿನಿಧಿಯಾಗಿ ದಿನೇಶ್ ಗುಂಡೂರಾವ್ ಅವರಿಗೆ ಸಚಿವ ಸ್ಥಾನ ದೊರಕಿದೆ.
ಹೀಗೆ ಜಾತಿ, ಉಪ ಜಾತಿಗಳನ್ನೂ ವೈಜ್ಞಾನಿಕವಾಗಿ ಪರಿಗಣಿಸಲಾಗಿದೆ.
ಸಚಿವರ ಆಯ್ಕೆಯಲ್ಲಿ ಸಾಮಾಜಿಕ ನ್ಯಾಯವನ್ನು ಪಾಲಿಸುವಾಗ ಪ್ರಾದೇಶಿಕ ನ್ಯಾಯ ಸಮತೋಲನ ತಪ್ಪದಂತೆಯೂ ಎಚ್ಚರ ವಹಿಸಿರುವುದು ಸಿದ್ದರಾಮಯ್ಯ ಅವರ ಆಯ್ಕೆ ಸಮತೂಕದಲ್ಲಿದೆ ಎನ್ನುವುದಕ್ಕೆ ಸ್ಪಷ್ಟ ಉದಾಹರಣೆ.
ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕದ ಜಿಲ್ಲೆಗಳಿಗೂ ಪ್ರಾತಿನಿಧ್ಯ ದೊರೆತಿದೆ. ಮಲೆನಾಡು, ಕರಾವಳಿ ಕರ್ನಾಟಕ ಮತ್ತು ಮೈಸೂರು ಕರ್ನಾಟಕ ಹಾಗೂ ಮಧ್ಯ ಕರ್ನಾಟಕಕ್ಕೆ ಸಿಕ್ಕಿರುವ ಪ್ರಾತಿನಿಧ್ಯ ಜಾತಿವಾರು ಲೆಕ್ಕಾಚಾರಗಳನ್ನೂ ಸರಿದೂಗಿಸಿದೆ.
ಗ್ರಾ ಪಂ ಅಧ್ಯಕ್ಷ, ಉಪಾಧ್ಯಕ್ಷ ಮೀಸಲು ನಿಗದಿಗೆ ಆದೇಶ
ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್ಐಆರ್… Read More
ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More
ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More
ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More
ನವದೆಹಲಿ ,ಮೇ 3 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,250 ರೂಪಾಯಿ ದಾಖಲಾಗಿದೆ. 24… Read More
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
This website uses cookies.
Leave a Comment