ಆಗಸ್ಟ್ 15ರಂದು ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಒನ್ ವೇ ಸಂಚಾರಕ್ಕೆ ಚಾಲನೆ ನೀಡಬೇಕಿತ್ತು. ಆದರೆ ದಶಪಥ ಕಾಮಗಾರಿಯಿಂದಾಗಿ ಬೆಂಗಳೂರು – ಮೈಸೂರು ಹೆದ್ದಾರಿ ಮೊದಲ ಹಂತದ ಕಾಮಗಾರಿ ವಿಳಂಬವಾಗಿದೆ.
ಕೊಟ್ಟ ಮಾತಿಗೆ ತಪ್ಪಿದ್ದೇನೆ. ದಯವಿಟ್ಟು ಕ್ಷಮಿಸಿ ಎಂಬುದಾಗಿ ಸಂಸದ ಪ್ರತಾಪ್ ಸಿಂಹ ಜನತೆಯ ಕ್ಷಮೆಯಾಚಿಸಿದ್ದಾರೆ.
ಈ ಕುರಿತಂತೆ ತಮ್ಮ ಫೇಸ್ ಬುಕ್ ಮುಖ ಪುಟದಲ್ಲಿ ಬರೆದುಕೊಂಡಿದ್ದಾರೆ ಜುಲೈನಲ್ಲಿ ಬೆಂಗಳೂರು-ನಿಡಘಟ್ಟ ರಸ್ತೆಯನ್ನು ಸಂಚಾರಕ್ಕೆ ತೆರವು ಮಾಡಿಸುತ್ತೇನೆ ಎಂದಿದ್ದೆ, ನಂತರ ಆಗಸ್ಟ್ 15 ರಂದು ಬಿಡದಿ, ರಾಮನಗರ-ಚನ್ನಪಟ್ಟಣ ಬೈಪಾಸ್ ಓಪನ್ ಮಾಡುತ್ತೇವೆ ಎಂದೆ. ಮಾತಿಗೆ ತಪ್ಪಿದ್ದೇನೆ, ದಯವಿಟ್ಟು ಕ್ಷಮಿಸಿ. ಎಲ್ಲಾ ಪ್ರಯತ್ನಗಳ ನಡುವೆಯೂ ಇನ್ನೂ ವಾರ, ಹತ್ತು ದಿನಗಳ ಕೆಲಸ ಬಾಕಿಯಿದೆ. ಗುಡ್ಡ ಕಡಿದು ರಸ್ತೆ ನಿರ್ಮಾಣ ನಡೆಯುತ್ತಿದೆ, ಸ್ವಲ್ಪ ಕಾಲಾವಕಾಶ ನೀಡಿ, ಪ್ಲೀಸ್ ಎಂದಿದ್ದಾರೆ.
ಬೆಂಗಳೂರು ಮೈಸೂರು ಹೆದ್ದಾರಿ ಮೊದಲ ಹಂತದ ಕಾಮಗಾರಿ ಜುಲೈ ವೇಳೆಗೆ ಮುಗಿಯುವ ನಿರೀಕ್ಷೆಯಿತ್ತು. ಆದರೆ ದಶಪಥ ಕಾಮಗಾರಿಯಿಂದಾಗಿ ವಿಳಂಬಗೊಂಡಿತ್ತು. ಇದೇ ಕಾರಣದಿಂದಾಗಿ ಆಗಸ್ಟ್ 15ರ ಇಂದು ಒನ್ ವೇ ಸಂಚಾರಕ್ಕೂ ಅಧಿಕೃತವಾಗಿ ಚಾಲನೆ ನೀಡೋದಕ್ಕೆ ಸಾದ್ಯವಾಗಿರಲಿಲ್ಲ. ಹೀಗಾಗಿಯೇ ಸಂಸದ ಪ್ರತಾಪ್ ಸಿಂಹ ಜನತೆಯಲ್ಲಿ ಕ್ಷಮೆ ಕೋರಿದ್ದಾರೆ.
ಮೈಸೂರು : ಉದಯಗಿರಿ ಪೊಲೀಸ್ ಠಾಣೆಯಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಗರ್ಭಪಾತ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಮಂದಿ… Read More
ಬೆಂಗಳೂರು: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ (76) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಮೂತ್ರಕೋಶ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರು… Read More
ರಾಯಚೂರು : ರಾಯಚೂರಿನ ತಾಪಮಾನ ಹೆಚ್ಚಳದಿಂದ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ನಡೆದಿದೆ. ಜನರು ಬಿಸಿ ಗಾಳಿಯಿಂದಾಗಿ ತತ್ತರಿಸುತ್ತಿದ್ದು ,… Read More
ಬೆಂಗಳೂರು : ರಾಜ್ಯದಲ್ಲಿ 14 ಕ್ಷೇತ್ರಗಳ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು , ಮೇ 7ರಂದು ಉತ್ತರ… Read More
ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More
ತಮಿಳನಾಡಿಗೆ 275 ಕೋಟಿ ರೂ.'ನೆರೆ ಪರಿಹಾರ' ಘೋಷಣೆ ನವದೆಹಲಿ : ಕೇಂದ್ರವು ಕರ್ನಾಟಕಕ್ಕೆ 3,454 ಕೋಟಿ ರೂ. ಬರಪರಿಹಾರ, ತಮಿಳಿನಾಡಿಗೆ… Read More
This website uses cookies.
Leave a Comment