ವಿಚ್ಛೇದನದಲ್ಲಿ ತಪ್ಪು ಯಾವಾಗಲೂ ಪುರುಷರದ್ದೇ ಆಗಿರುತ್ತದೆ. ಪುರುಷ ಬೇಟೆಗಾರ ಆಗಿದ್ದರೆ, ಮಹಿಳೆ ಪೋಷಕಿಯಾಗಿರುತ್ತಾಳೆ ಎಂದು ಹೇಳಿದ್ದಾರೆ ಹಿಂದಿ ನಟಿ, ಆಗಾಗ್ಗೆ ವಿವಾದಕ್ಕೆ ಕಾರಣರಾಗುವ ಕಂಗನಾ ರಣಾವತ್.
ಮಹಿಳೆಯರನ್ನು ಬಟ್ಟೆಯಂತೆ ಬದಲಿಸಿ ನಂತರ ನಾವು ಉತ್ತಮ ಸ್ನೇಹಿತರೆಂದು ಹೇಳಿಕೊಳ್ಳುವವರ ಮೇಲೆ ದಯೆ ತೋರುವುದನ್ನು ನಿಲ್ಲಿಸಿ. ನೂರು ಜನ ಮಹಿಳೆಯರಲ್ಲಿ ಒಂದು ಮಹಿಳೆ ತಪ್ಪು ಮಾಡುವುದು ನಿಜ. ಆದರೆ ಎಲ್ಲರೂ ಅಲ್ಲ ಎಂದು ಖಚಿತವಾಗಿ ನುಡಿದಿದ್ದಾರೆ.
ಟಾಲಿವುಡ್ ನಟ ನಾಗಚೈತನ್ಯ ಮತ್ತು ಸಮಂತಾ ವಿಚ್ಛೇದನಕ್ಕೆ ಸಂಬಂಧಿಸಿದಂತೆ ತಮ್ಮ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಹಂಚಿಕೊಂಡಿರುವ ಈ ನಟಿ, ಈ ವಿಚ್ಛೇದನ ವಿಷಯದಲ್ಲಿ ಬಾಲಿವುಡ್ ನಟ ಅಮೀರ್ ಖಾನ್ ಹೆಸರನ್ನೂ ಪರೋಕ್ಷವಾಗಿ ಪ್ರಸ್ತಾಪಿಸಿದ್ದಾರೆ.
ಮದುವೆಯಾಗಿ ನಾಲ್ಕು ವರ್ಷಗಳ ನಂತರ ಈಗ ಇದ್ದಕ್ಕಿದಂತೆ ಪತ್ನಿಗೆ ಡಿವೋರ್ಸ್ ನೀಡಿದ್ದಾರೆ. ಇವರು ಇತ್ತೀಚಿಗೆ ಬಾಲಿವುಡ್ ಡಿವೋರ್ಸ್ ಎಕ್ಸ್ಪರ್ಟ್ ಬಾಲಿವುಡ್ ಸೂಪರ್ಸ್ಟಾರ್ ಭೇಟಿಯಾಗಿದ್ದರು. ಅನೇಕ ಮಹಿಳೆಯರು ಹಾಗೂ ಮಕ್ಕಳ ಜೀವನ ಹಾಳುಮಾಡಿ, ಈಗ ಮಾರ್ಗದರ್ಶಕರಾಗಿದ್ದಾರೆ. ನಾನು ಯಾರ ಬಗ್ಗೆ ಮಾತನಾಡುತ್ತಿದ್ದೇನೆ ಎಂಬುದು ನಿಮಗೆ ಗೊತ್ತಾಗುತ್ತಿದೆ ಎಂದು ಕಂಗನಾ ಹೇಳಿದ್ದಾರೆ.
ಅಮೀರ್ ಖಾನ್ ನಟಿಸಿ, ನಿರ್ಮಿಸುತ್ತಿರುವ “ಲಾಲ್ ಸಿಂಗ್ ಚಡ್ಡಾ’ ಚಿತ್ರದಲ್ಲಿ ನಾಗಚೈತನ್ಯ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರ ಮುಂದಿನ ವರ್ಷ ಬಿಡುಗಡೆಯಾಗಲಿದೆ ಎಂದು ವರದಿಯಾಗಿದೆ. 2017 ರಲ್ಲಿ ನಾಗಚೈತನ್ಯ ಮತ್ತು ಸಮಂತಾ ದಾಂಪತ್ಯ ಜೀವನ ಪ್ರವೇಶಿಸಿದ್ದರು.
ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More
ಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಬಳಿಕ ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣರನ್ನು ಅಮಾನತು ಮಾಡಿ ಜೆಡಿಎಸ್… Read More
ಬೆಂಗಳೂರು : ರಾಜ್ಯದ ಎರಡನೇ ಹಂತದ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಗತ್ಯ ಸೇವೆಗಳ ಇಲಾಖೆಗಳ ಸಿಬ್ಬಂದಿಗೆ ನಾಳೆಯಿಂದ 3 ದಿನಗಳ… Read More
ಬೆಂಗಳೂರು : ಮೇ 10ರಂದು - ಪ್ರಸಕ್ತ ಸಾಲಿನ SSLC ಪರೀಕ್ಷೆಯ ಫಲಿತಾಂಶ ಪ್ರಕಟಿಸಲು ಇಲಾಖೆ ಎಲ್ಲಾ ರೀತಿಯ ಸಿದ್ದತೆಗಳನ್ನು… Read More
ನವದೆಹಲಿ ,ಏಪ್ರಿಲ್ 30 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,550 ರೂಪಾಯಿ ದಾಖಲಾಗಿದೆ. 24… Read More
ರಾಮನಗರ : ಮೇಕೆದಾಟು (Mekedatu) ಬಳಿಯ ಸಂಗಮದ ಕಾವೇರಿ ನದಿಯಲ್ಲಿ ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರು ಪಾಲಾದ ಘಟನೆ… Read More
This website uses cookies.
Leave a Comment