ರಾಜ್ಯಸಭೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳಲು ಇನ್ನಿಲ್ಲದ ಕಸರತ್ತು ನಡೆಸುತ್ತಿರುವ ಮಾಜಿ ಸಿಎಂ ಕುಮಾರಸ್ವಾಮಿ ಗುರುವಾರ ಬೆಳಗ್ಗೆ ಬೆಂಗಳೂರಿನ ವೈಟ್ಫೀಲ್ಡ್ನ ವಿವಂತಾ ಹೋಟೆಲ್ನಲ್ಲಿ ಶಾಸಕರ ಜೊತೆ ಒಂದು ಸುತ್ತಿನ ಸಭೆ ನಡೆಸಿದ್ದಾರೆ.
ಇದನ್ನು ಓದಿ –ವ್ಯಕ್ತಿಯ ಮೇಲೆ ಚಿತ್ರನಟ ಜೈಜಗದೀಶ್ ಹಲ್ಲೆ? ಪೊಲೀಸರಿಗೆ ದೂರು
ಮತ್ತೊಂದು ಸುತ್ತಿನ ಸಭೆ ಯಶವಂತಪುರದ ತಾಜ್ ವಿವಂತಾ ಹೋಟೆಲ್ಗೆ ಶಿಫ್ಟ್ ಆಗಿದೆ. ಎಲ್ಲರೂ ಕಡ್ಡಾಯವಾಗಿ ಬರಬೇಕು ಎಂಬ ಸೂಚನೆ ಇದೆ. ಆದರೆ ಟ್ರಿಪ್ ನೆಪದಲ್ಲಿ ತುಮಕೂರು ಗ್ರಾಮಾಂತರ ಶಾಸಕ ಶಾಸಕ ಗೌರಿಶಂಕರ್ ನಾಪತ್ತೆಯಾಗಿದ್ದಾರೆ.
ಕುಟುಂಬದ ಜೊತೆ ಫಾರಿನ್ ಟ್ರಿಪ್ನಲ್ಲಿ ಇದ್ದೀನಿ. ಫಾರಿನ್ನಿಂದ ಇಂದು ಸಂಜೆ ಬೆಂಗಳೂರಿಗೆ ಬರುವೆ. ನಾಳೆ ಮತ ಹಾಕ್ತೀನಿ ಎಂದು ಶಾಸಕ ಗೌರಿಶಂಕರ್ ಹೇಳಿರುವುದು ಜೆಡಿಎಸ್ನಲ್ಲಿ ಆತಂಕ ಹೆಚ್ಚಿಸಿದೆ.
ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿಸಲು ಕಾಂಗ್ರೆಸ್ ಸಂಚು ರೂಪಿಸಿದೆ, ಗೌರಿಶಂಕರ್ ಅವರು ಕಾಂಗ್ರೆಸ್ ನಾಯಕರ ಆಮಿಷಕ್ಕೆ ಒಳಗಾಗಿ ಉಲ್ಟಾ ಹೊಡೀತಾರಾ? ಎಂಬ ಆತಂಕ ಜೆಡಿಎಸ್ಗೆ ಕಾಡುತ್ತಿದೆ.
ಇಂದು ಸಂಜೆ ಬೆಂಗಳೂರಿನಲ್ಲಿ ನಡೆಯಲಿರುವ ಜೆಡಿಎಸ್ ಸಭೆಗೆ ಗೌರಿಶಂಕರ್ ಹಾಜರಾಗುವುದು ಅನುಮಾನ
ಗುಬ್ಬಿ ಶಾಸಕ ಶ್ರೀನಿವಾಸ್ ಕೂಡ ಜೆಡಿಎಸ್ಗೆ ಕೈಕೊಡುವ ಸಾಧ್ಯತೆ ಇದೆ. ಒಟ್ಟಾರೆ ಜೆಡಿಎಸ್ ಭದ್ರಕೋಟೆಯಂತಿದ್ದ ತುಮಕೂರು ಜಿಲ್ಲೆಯ ಶಾಸಕರಿಬ್ಬರ ನಡೆ ಜೆಡಿಎಸ್ ಪಾಲಿಗೆ ಮುಳ್ಳಾಗಿರುವುದಂತೂ ನಿಜ.
- ಶ್ರೀರಂಗಪಟ್ಟಣ : ಅನೈತಿಕ ಸಂಬಂಧ ಪ್ರಶ್ನಿಸಿ ಮಕ್ಕಳ ಎದುರಿನಲ್ಲೇ ಪತ್ನಿಯ ಹತ್ಯೆಗೈದ ಪಾಪಿ ಪತಿ
- ತಮ್ಮನ್ನು ಮಾತ್ರ ಬಲಿಪಶು ಮಾಡುವ ರಾಜಕಾರಣಿಗಳ ವಿರುದ್ದ ಪ್ರಧಾನಿ ಮೋದಿಗೆ ಅಧಿಕಾರಿಗಳಿಂದ ಪತ್ರ
- ಬಾದಾಮಿಯ ಕೇರೂರಿನಲ್ಲಿ ನೂಪುರ್ ಶರ್ಮ ವಿವಾದ : ಮೂವರ ಯುವಕರ ಮೇಲೆ ಚಾಕೂವಿನಿಂದ ಇರಿದು ಹಲ್ಲೆ
- ಶಾಸಕ ಜಮೀರ್ ಅಹಮದ್ ಅಕ್ರಮ ಆಸ್ತಿ 87.44 ಕೋಟಿ: ಇಡಿಗೆ ಎಸಿಬಿ ವರದಿ
- ಡಾ. ವೀರೇಂದ್ರ ಹೆಗ್ಗಡೆ, ಇಳಯರಾಜ ಸೇರಿ ನಾಲ್ವರು ರಾಜ್ಯಸಭೆಗೆ ನಾಮ ನಿರ್ದೇಶನ
- KRSಗೆ 30 ಸಾವಿರ ಕ್ಯೂಸೆಕ್ ಒಳಹರಿವು – ಪ್ರವಾಹದ ಮುನ್ನೆಚ್ಚರಿಕೆ : ಆಣೆಕಟ್ಟೆ ಭರ್ತಿಗೆ 9 ಅಡಿ ಬಾಕಿ
More Stories
ಶ್ರೀರಂಗಪಟ್ಟಣ : ಅನೈತಿಕ ಸಂಬಂಧ ಪ್ರಶ್ನಿಸಿ ಮಕ್ಕಳ ಎದುರಿನಲ್ಲೇ ಪತ್ನಿಯ ಹತ್ಯೆಗೈದ ಪಾಪಿ ಪತಿ
ತಮ್ಮನ್ನು ಮಾತ್ರ ಬಲಿಪಶು ಮಾಡುವ ರಾಜಕಾರಣಿಗಳ ವಿರುದ್ದ ಪ್ರಧಾನಿ ಮೋದಿಗೆ ಅಧಿಕಾರಿಗಳಿಂದ ಪತ್ರ
ಬಾದಾಮಿಯ ಕೇರೂರಿನಲ್ಲಿ ನೂಪುರ್ ಶರ್ಮ ವಿವಾದ : ಮೂವರ ಯುವಕರ ಮೇಲೆ ಚಾಕೂವಿನಿಂದ ಇರಿದು ಹಲ್ಲೆ