ಸಮಸ್ಯೆ ಹೇಳಿಕೊಳ್ಳಲು ಬಂದಿದ್ದ ಮಹಿಳೆ ಮೇಲೆಯೇ ಶಾಸಕ ಅರವಿಂದ ಲಿಂಬಾವಳಿ ಅವಾಜ್ ಹಾಕಿ, ದರ್ಪ ತೋರಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಶಾಸಕರು ಗುರುವಾರ ವರ್ತೂರು ಕೆರೆ ಕೋಡಿ ವೀಕ್ಷಣೆ ಮಾಡಲು ತೆರಳಿದ ಮೇಲೆ ಘಟನೆ ನಡೆದಿದೆ. ಅಧಿಕಾರಿಗಳ ಜೊತೆ ಮಳೆ ಹಾನಿ ಪ್ರದೇಶ ವೀಕ್ಷಣೆಗೆ ತೆರಳಿದ್ದ ಶಾಸಕ ಅರವಿಂದ್ ಲಿಂಬಾವಳಿಯಿಂದ ಅಮಾಯಕ ಮಹಿಳೆ ಮೇಲೆ ದರ್ಪ ಮೇರೆದಿದ್ದಾರೆ.
ಮಳೆಯಿಂದ ವರ್ತೂರು ಕೆರೆ ಕೋಡಿ ಬಿದ್ದ ಪರಿಣಾಮ ನೀರು ವಸತಿ ಪ್ರದೇಶಗಳಿಗೆ ನೀರು ನುಗ್ಗಿತ್ತು. ಈ ವೇಳೆ ಹಾನಿಗೊಳಗಾದ ಪ್ರದೇಶ ವೀಕ್ಷಣೆಗೆ ಶಾಸಕ ಲಿಂಬಾವಳಿ ತೆರಳಿದ್ದರು. ಈ ವೇಳೆ ಶಾಸಕರಿಗೆ ಮನವಿ ಸಲ್ಲಿಸಲು ಮಹಿಳೆ ಮನವಿ ಪತ್ರ ಇಟ್ಟುಕೊಂಡು ಬಂದಿದ್ದರು.
ಮುರುಘಾ ಮಠದ ವಸತಿ ಶಾಲಾ ವಿದ್ಯಾರ್ಥಿನಿಯರು ಬೇರೆಡೆಗೆ ಸ್ಥಳಾಂತರಕ್ಕೆ ಚಿಂತನೆ
ಮಹಿಳೆ ನೋಡುತ್ತಿದಂತೆ ಗರಂ ಆದ ಶಾಸಕರು, ಮಹಿಳೆಯ ಬಳಿ ಮನವಿ ಪತ್ರ ಕಸಿದುಕೊಂಡು ಆವಾಜ್ ಹಾಕಿ ಸಮಸ್ಯೆ ಹೇಳಿಕೊಳ್ಳಲು ಬಂದ ಮಹಿಳೆಯನ್ನು ನೋಡಿದ ಕೂಡಲೇ ಗರಂ ಆದ ಶಾಸಕರು, ನಿಂಗೆ ಮಾನ ಮರ್ಯಾದೆ ಇದೀಯಾ? ನಾಚಿಕೆ ಅಗಲ್ವಾ ನಿಂಗೆ? ನಿಂಗೆ ಮರ್ಯಾದೆ ಬೇರೆ ಕೊಡಬೇಕಾ? ಏಯ್ ಆಕೆಯನ್ನು ಸ್ಟೇಷನ್ ಗೆ ಕರೆದುಕೊಂಡು ಹೋಗಿ ಕೂರಿಸಿ.. ಏಯ್ ಎತ್ತಿಕೊಂಡು ಹೋಗೋ ಅವಳನ್ನು, ಹೇ ಬಾಯಿ ಮುಚ್ಚು, ಹೇ ಬಾಯಿ ಮುಚ್ಚು.. ಒದ್ದು ಒಳಗೆ ಹಾಕ್ತಿನಿ ಅಂತಾ ಏಕವಚನದಲ್ಲಿ ನಿಂದಿಸಿದ್ದಾರೆ.
ಈ ವೇಳೆ ಮಹಿಳೆ ತಾನು ನ್ಯಾಯ ಕೇಳಲು ಬಂದಿದ್ದೇನೆ, ಮಹಿಳೆ ಇದ್ದೀನಿ. ಗೌರವ ಕೊಟ್ಟು ಮಾತನಾಡಿಸಿ ಎಂದು ಮನವಿ ಮಾಡಿಕೊಂಡರೂ ಕೇಳದೆ ವಶಕ್ಕೆ ಪಡೆದುಕೊಳ್ಳಲು ಶಾಸಕರು ಸೂಚನೆ ನೀಡಿರುವ ವಿಡಿಯೋದಲ್ಲಿಇದೆ.
ಶಾಸಕರು ಸೂಚನೆ ನೀಡುತ್ತಿದ್ದಂತೆ ಮಹಿಳೆಯನ್ನು ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ ಗಂಟೆಗಟ್ಟಲೇ ಠಾಣೆಯಲ್ಲೇ ಕೂರಿಸಿ ಕಿರುಕುಳ ಕೊಟ್ಟಿದ್ದಾರೆ ಎಂದು ಆರೋಪ ಮಾಡಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು