Karnataka

ಮಹಿಳೆ ಮೇಲೆ ಶಾಸಕ ಲಿಂಬಾವಳಿ ದರ್ಪ: ದೂರು ಇಲ್ಲದೇ ಹೋದರೂ ಗಂಟೆಗಟ್ಟಲೇ ಠಾಣೆಯಲ್ಲಿ ಕೂರಿಸಿ ಶಿಕ್ಷೆ

ಸಮಸ್ಯೆ ಹೇಳಿಕೊಳ್ಳಲು ಬಂದಿದ್ದ ಮಹಿಳೆ ಮೇಲೆಯೇ ಶಾಸಕ ಅರವಿಂದ ಲಿಂಬಾವಳಿ ಅವಾಜ್ ಹಾಕಿ, ದರ್ಪ ತೋರಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಶಾಸಕರು ಗುರುವಾರ ವರ್ತೂರು ಕೆರೆ ಕೋಡಿ ವೀಕ್ಷಣೆ ಮಾಡಲು ತೆರಳಿದ ಮೇಲೆ ಘಟನೆ ನಡೆದಿದೆ. ಅಧಿಕಾರಿಗಳ ಜೊತೆ ಮಳೆ ಹಾನಿ ಪ್ರದೇಶ ವೀಕ್ಷಣೆಗೆ ತೆರಳಿದ್ದ ಶಾಸಕ ಅರವಿಂದ್ ಲಿಂಬಾವಳಿಯಿಂದ ಅಮಾಯಕ ಮಹಿಳೆ ಮೇಲೆ ದರ್ಪ ಮೇರೆದಿದ್ದಾರೆ.

ಮಳೆಯಿಂದ ವರ್ತೂರು ಕೆರೆ ಕೋಡಿ ಬಿದ್ದ ಪರಿಣಾಮ ನೀರು ವಸತಿ ಪ್ರದೇಶಗಳಿಗೆ ನೀರು ನುಗ್ಗಿತ್ತು. ಈ ವೇಳೆ ಹಾನಿಗೊಳಗಾದ ಪ್ರದೇಶ ವೀಕ್ಷಣೆಗೆ ಶಾಸಕ ಲಿಂಬಾವಳಿ ತೆರಳಿದ್ದರು. ಈ ವೇಳೆ ಶಾಸಕರಿಗೆ‌ ಮನವಿ ಸಲ್ಲಿಸಲು ಮಹಿಳೆ ಮನವಿ ಪತ್ರ ಇಟ್ಟುಕೊಂಡು ಬಂದಿದ್ದರು.

ಮುರುಘಾ ಮಠದ ವಸತಿ ಶಾಲಾ ವಿದ್ಯಾರ್ಥಿನಿಯರು ಬೇರೆಡೆಗೆ ಸ್ಥಳಾಂತರಕ್ಕೆ ಚಿಂತನೆ

ಮಹಿಳೆ ನೋಡುತ್ತಿದಂತೆ ಗರಂ ಆದ ಶಾಸಕರು, ಮಹಿಳೆಯ ಬಳಿ ಮನವಿ ಪತ್ರ ಕಸಿದುಕೊಂಡು ಆವಾಜ್ ಹಾಕಿ ಸಮಸ್ಯೆ ಹೇಳಿಕೊಳ್ಳಲು ಬಂದ ಮಹಿಳೆಯನ್ನು ನೋಡಿದ ಕೂಡಲೇ ಗರಂ ಆದ ಶಾಸಕರು, ನಿಂಗೆ ಮಾನ ಮರ್ಯಾದೆ ಇದೀಯಾ? ನಾಚಿಕೆ ಅಗಲ್ವಾ ನಿಂಗೆ? ನಿಂಗೆ ಮರ್ಯಾದೆ ಬೇರೆ ಕೊಡಬೇಕಾ? ಏಯ್ ಆಕೆಯನ್ನು ಸ್ಟೇಷನ್ ಗೆ ಕರೆದುಕೊಂಡು ಹೋಗಿ ಕೂರಿಸಿ.. ಏಯ್ ಎತ್ತಿಕೊಂಡು ಹೋಗೋ ಅವಳನ್ನು, ಹೇ ಬಾಯಿ ಮುಚ್ಚು, ಹೇ ಬಾಯಿ ಮುಚ್ಚು.. ಒದ್ದು ಒಳಗೆ ಹಾಕ್ತಿನಿ ಅಂತಾ ಏಕವಚನದಲ್ಲಿ ನಿಂದಿಸಿದ್ದಾರೆ.

ಈ ವೇಳೆ ಮಹಿಳೆ ತಾನು ನ್ಯಾಯ ಕೇಳಲು ಬಂದಿದ್ದೇನೆ, ಮಹಿಳೆ ಇದ್ದೀನಿ. ಗೌರವ ಕೊಟ್ಟು ಮಾತನಾಡಿಸಿ ಎಂದು ಮನವಿ ಮಾಡಿಕೊಂಡರೂ ಕೇಳದೆ ವಶಕ್ಕೆ ಪಡೆದುಕೊಳ್ಳಲು ಶಾಸಕರು ಸೂಚನೆ ನೀಡಿರುವ ವಿಡಿಯೋದಲ್ಲಿಇದೆ.

ಶಾಸಕರು ಸೂಚನೆ ನೀಡುತ್ತಿದ್ದಂತೆ ಮಹಿಳೆಯನ್ನು ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ ಗಂಟೆಗಟ್ಟಲೇ ಠಾಣೆಯಲ್ಲೇ ಕೂರಿಸಿ ಕಿರುಕುಳ ಕೊಟ್ಟಿದ್ದಾರೆ ಎಂದು ಆರೋಪ ಮಾಡಿದ್ದಾರೆ.

Team Newsnap
Leave a Comment
Share
Published by
Team Newsnap

Recent Posts

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024

ಲೋಕಾಯುಕ್ತರ ಹೆಸರಿನಲ್ಲಿ ಬೆಸ್ಕಾಂ ಎಂಡಿಗೆ ಬೆದರಿಕೆ – ದೂರು ದಾಖಲು

ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More

May 5, 2024

ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ

ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More

May 4, 2024

ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ

ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್​.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More

May 4, 2024

ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ

ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More

May 4, 2024

ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು

ನಿನ್ನೆ ರಾತ್ರಿ 72ರ ವಯಸ್ಸಿನ ಎನ್.ಮುನಿಕೆಂಪಣ್ಣ ಶಕುನಿ (Shakuni) ವೇಷದಲ್ಲಿ ವೇದಿಕೆಗೆ ಬಂದು ಪಾತ್ರ ನಿರ್ವಹಿಸುತ್ತಲೇ ವೇದಿಕೆಯ ಮೇಲೆ ಕುಸಿದು… Read More

May 4, 2024