January 29, 2026

Newsnap Kannada

The World at your finger tips!

ravindra3

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ರವೀಂದ್ರ ಶ್ರೀಕಂಠಯ್ಯ ಚಾಲನೆ

Spread the love

ಶ್ರೀರಂಗಪಟ್ಟಣ ವಿಧಾನ ಸಭಾ ಕ್ಷೇತ್ರದ ಶಾಸಕ ರವೀಂದ್ರ ಶ್ರೀಕಂಠಯ್ಯ ಅವರು ಸೋಮವಾರ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.

ravindra2

ಶಾಸಕ ರವೀಂದ್ರ ಮಂಗಲ ಗ್ರಾಮದ ಶ್ರೀ ಮಲ್ಲೇಶ್ವರ ಸ್ವಾಮಿ ಸಮುದಾಯ ಭವನದ ಉದ್ಘಾಟನೆ ನೆರವೇರಿಸಿದರು.

ನಂತರ ಶಾಸಕರು ಹೆಬ್ಬಕವಾಡಿ ಗ್ರಾಮದ ಸರ್ಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಕಟ್ಟಡ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು.

ravindra1

ಹೆಬ್ಬಕವಾಡಿ ಗ್ರಾಮದಲ್ಲಿ ಮಂಗಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಗೋದಾಮು ಕಟ್ಟಡ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ಮತ್ತು ಶಿಲಾನ್ಯಾಸ ನೆರವೇರಿಸಿದರು.

ಹನಿಯಂಬಾಡಿ ಗ್ರಾಮದ ಹನುಮಂತೆಗೌಡ ಎಂಬ ರೈತರ ಮನೆಯಲ್ಲಿ ಮೂರು ಹಸುಗಳು ಹಠಾತ್ ಅಸು ನೀಗಿದ್ದವು.

ravindra

ಇಂದು ಶಾಸಕ ರವೀಂದ್ರ ಅವರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದರು, ಜೊತೆಗೆ ರೂ. 25 ಸಾವಿರ ಧನ ಸಹಾಯ ಮಾಡಿದರು.

ಈ ಸಂದರ್ಭದಲ್ಲಿ ಶಾಸಕರ ಜೊತೆ ಮುಖಂಡರಾದ ತಗ್ಗಳ್ಳಿ ವೆಂಕಟೇಶ್, ಹನಿಯಂಬಾಡಿ ರಾಮಲಿಂಗು, ಗ್ರಾಮ ಪಂಚಾಯಿತಿ ಸದಸ್ಯರಾದ ಲೋಕೇಶ್, ಸುರೇಶ ಉಪಸ್ಥಿತರಿದ್ದರು.

error: Content is protected !!