ಮುಂದಿನ ಎಂಟು ತಿಂಗಳವರೆಗೆ ಯಾವುದೇ ಅನುದಾನವನ್ನು ಕೇಳಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್ ಶಾಸಕರಿಗೆ ಮನವಿ ಮಾಡಿದ್ದಾರೆ .
ಜು. 7ರಂದು ಬಜೆಟ್ ಮಂಡನೆಗೂ ಮುನ್ನ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಅವರು ಮಾತನಾಡಿ, ಚುನಾವಣೆಗೂ ಮುನ್ನ ನಾವು ನೀಡಿದ್ದ ಐದು ಗ್ಯಾರಂಟಿಗಳನ್ನು ನಾವು ಜಾರಿಗೊಳಿಸಲೇಬೇಕಿದ್ದು, ಅದಕ್ಕಾಗಿ ಬದ್ಧತೆಯನ್ನು ತೋರಿಸಬೇಕಿದೆ.
ಗ್ಯಾರಂಟಿಗಳ ಯೋಜನೆಗೆ ಸಾವಿರಾರು ಕೋಟಿ ರೂ.ಗಳು ಬೇಕಿರುವುದರಿಂದ ಸಂಪನ್ಮೂಲ ಕ್ರೋಢೀಕರಣವು ನಮ್ಮ ಮುಂದಿನ ಬಹುದೊಡ್ಡ ಸವಾಲಾಗಿದೆ ಎಂದರು.
ಕೆಲವು ಉಳಿತಾಯಗಳನ್ನೂ ಮಾಡಬೇಕಿದ್ದು ಆ ನಿಟ್ಟಿನಲ್ಲಿ, ಶಾಸಕರಿಗೆ ನೀಡಬೇಕಾದ ಅನುದಾನವನ್ನು ಮುಂದಿನ ಎಂಟು ತಿಂಗಳವರೆಗೆ ಶಾಸಕರು ಕೇಳದೇ ಇದ್ದರೆ ಗ್ಯಾರಂಟಿಗಳ ಅನುಷ್ಠಾನಕ್ಕೆ ಹೆಚ್ಚಿನ ಬೆಂಬಲ ಕೊಟ್ಟಂತಾಗುತ್ತದೆ.
ಸವಾಲನ್ನು ಸುಲಭವಾಗಿ ಮೆಟ್ಟಲು ಸಾಕಷ್ಟು ದಾರಿಗಳೂ ನಮ್ಮ ಮುಂದಿವೆ ಎಂದು ಅವರು ವಿವರಿಸಿದ್ದು, ಗ್ಯಾರಂಟಿಗಳ ಜಾರಿಗೆ ಬೇಕಾದ ಹಣವನ್ನು ಹೊಂದಿಸಲು ನಾವು ಹಲವಾರು ಮಾರ್ಗೋಪಾಯಗಳನ್ನು ಕಂಡುಕೊಳ್ಳಬೇಕಿದೆ ಎಂದು ಅವರು ಹೇಳಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು