ಡಿಸೆಂಬರ್ 10 ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ಮಂಡ್ಯದಿಂದ ಸ್ಪರ್ಧೆ ಮಾಡಿರುವ ಬಿಜೆಪಿ ಅಭ್ಯರ್ಥಿ ಬೂಕಹಳ್ಳಿ ಮಂಜು ಮಂಡ್ಯ ಸಂಸದೆ ಸುಮಲತಾ ಅವರನ್ನು ಭೇಟಿ ಮಾಡಿ ಬೆಂಬಲ ಕೋರಿ ಮನವಿ ಮಾಡಿದರು
ಬೆಂಗಳೂರಿನ ಸಂಸದೆ ಸುಮಲತಾ ಅಂಬರೀಶ್ ನಿವಾಸಕ್ಕೆ ಭೇಟಿ ನೀಡಿದ್ದ ಬೂಕಹಳ್ಳಿ ಮಂಜು ಅವರಿಗೆ ಸಚಿವ ಕೆ.ಸಿ.ನಾರಾಯಣ್ ಗೌಡ ಹಾಗೂ ಬಿಜೆಪಿ ಮುಖಂಡರು ಸಾಥ್ ನೀಡಿದ್ದರು.
ಈ ವೇಳೆ ಪರಿಷತ್ ಚುನಾವಣೆಯಲ್ಲಿ ಬೆಂಬಲಿಸುವಂತೆ ಸಂಸದೆಗೆ ಮನವಿ ಮಾಡಿದರು. ಈ ವೇಳೆ ಸುಮಲತಾ ಅವರು ಬೂಕಹಳ್ಳಿ ಮಂಜು ಅವರಿಗೆ ಶುಭ ಹಾರೈಸಿದರು.
ಅಡ್ಡಗೋಡೆ ಮೇಲೆ ದೀಪ :
ಮಂಡ್ಯದಲ್ಲಿ ಸುಮಲತಾ ಕಾಂಗ್ರೆಸ್ಗೆ ಅಥವಾ ಬಿಜೆಪಿಗೆ ಬೆಂಬಲ ನೀಡುತ್ತಾರಾ ಎಂಬ ಕುತೂಹಲಕ್ಕೆ ಸಂಸದೆ ಈಗಾಗಲೇ ತೆರೆ ಎಳೆದಿದ್ದಾರೆ.
ನನಗೆ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಬೆಂಬಲ ನೀಡಿದ್ದಾರೆ. ಆದ್ದರಿಂದ ನಾನು ಇಂತಹ ಪಕ್ಷಕ್ಕೆ ಬೆಂಬಲ ನೀಡುತ್ತೀನಿ ಅಂತ ಹೇಳಲಾರೆ. ಅದು ಕೆಲವರಿಗೆ ನೋವಾಗುತ್ತದೆ. ಆದ್ದರಿಂದ ನಾನು ಈ ಬಗ್ಗೆ ತಟಸ್ಥವಾಗಿರುತ್ತೇನೆ ಎಂದರು
ಆದರೆ ಮಂಡ್ಯ ಜಿಲ್ಲೆಯ ಅಭಿವೃದ್ಧಿಗೆ ಯಾರು ಸೂಕ್ತ ಎನಿಸುತ್ತಾರೆ ಅಂತ ಅಭ್ಯರ್ಥಿಗೆ ಬೆಂಬಲ ನೀಡುತ್ತೇನೆ ಎಂದು ಸ್ಪಷ್ಟಪಡಿಸಿದ್ದರು.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ