ವಿಧಾನ ಪರಿಷತ್ ಚುನಾವಣೆಗೆ ದಿನಗಣನೆ ಶುರುವಾಗುತ್ತಿದ್ದಂತೆ ಜೆಡಿಎಸ್ ನ ದಳಪತಿಗಳು ಮಂಡ್ಯ ಹಾಗೂ ತುಮಕೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು ಸಂಸದೆ ಸುಮಲತಾಗೆ ಪಾಠ ಕಲಿಸಲು ಲೆಕ್ಕಾಚಾರ ಹಾಕಿದ್ದಾರೆ.
ಈ ಎರಡು ಕ್ಷೇತ್ರಗಳನ್ನು ಸವಾಲಾಗಿ ತೆಗೆದುಕೊಂಡಿರುವ ದಳಪತಿಗಳು ಸೋಲಿನ ಸೇಡು ತೀರಿಸಿಕೊಳ್ಳಲು ಎರಡು ಕ್ಷೇತ್ರಗಳನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರಂತೆ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ.
ಅವಮಾನವಾಗಿರುವ ಕ್ಷೇತ್ರಗಳಲ್ಲೇ ಪಾಠ ಕಲಿಸಲು ಹೊರಟಿರುವ ದಳಪತಿಗಳು, ತುಮಕೂರು ಹಾಗೂ ಮಂಡ್ಯದ ಮೇಲೆ ಹೆಚ್ಚಿನ ಗಮನ ಕೇಂದ್ರೀಕರಿಸಿದ್ದಾರೆ.
ಮಂಡ್ಯದಲ್ಲಿ ಕಳೆದ ಲೋಕಸಭಾ ಚುನಾವಣೆಯ ಸೋಲಿನ ಸೇಡು ತೀರಿಸಿಕೊಳ್ಳಲು ಹಠಕ್ಕೆ ಬಿದ್ದಿರುವ ದಳಪತಿಗಳು, ತಮ್ಮ ರಾಜಕೀಯ ಕಡುವೈರಿ ಸಂಸದೆ ಸುಮಲತಾ ವಿರುದ್ಧ ಗೆದ್ದು ತೋರಿಸಲು ಮುಂದಾಗಿದ್ದಾರೆ.
ನಿಖಿಲ್ ವಿರುದ್ಧ ಚಕ್ರವ್ಯೂಹ ರಚಿಸಿ ಸೋಲಿಸಿದ್ದವರಿಗೆ ಪಾಠ ಕಲಿಸಲು ಮುಂದಾಗಿದ್ದಾರೆ ನಾಯಕರು. ಹಾಗಾಗಿ ಖುದ್ದು ಮಂಡ್ಯ ಜಿಲ್ಲೆಯ ಉಸ್ತುವಾರಿಯನ್ನು ನಿಖಿಲ್ಗೆ ವಹಿಸಿದ್ದಾರೆ.
ಈಗಾಗಲೇ ಮಂಡ್ಯದಲ್ಲಿ ಬೀಡುಬಿಟ್ಟು ನಿರಂತರ ಪ್ರಚಾರ ನಡೆಸುತ್ತಿದ್ದಾರೆ ನಿಖಿಲ್. ಜಿಲ್ಲೆಯ ಎಲ್ಲಾ ಶಾಸಕರೊಂದಿಗೆ ನಿರಂತರ ಪ್ರಚಾರ ಕೈಗೊಂಡಿದ್ದಾರೆ.
ಕಳೆದ ಚುನಾವಣೆಯಲ್ಲಾದಂತೆ ಯಡವಟ್ಟಾಗಬಾರದೆಂದು ಜಿಲ್ಲೆಯ ಶಾಸಕರಿಗೆ ಸೂಚನೆಯನ್ನೂ ನೀಡಿದ್ದಾರೆ. ಇನ್ನು ತುಮಕೂರಿನಲ್ಲೂ ಸೋಲಿನ ಸೇಡು ತೀರಿಸಿಕೊಳ್ಳಲು ನಿರ್ಧರಿಸಿದ್ದಾರೆ. ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರನ್ನ ಸೋಲಿಸಿರುವ ಬೇಗುದಿ ಇನ್ನು ಕಡಿಮೆಯಾಗಿಲ್ಲ. ಕುತಂತ್ರ ನಡೆಸಿ ಕೈನಾಯಕರು ಸೋಲಿಸಿದರೆಂದು ಕುದಿಯುತ್ತಿದ್ದಾರೆ. ಅದೇ ಕಾರಣಕ್ಕೆ ಈ ಬಾರಿ ಸೋಲಿನ ಅಪಮಾನಕ್ಕೆ ಉತ್ತರ ಕೊಡಲು ಮುಂದಾಗಿದ್ದಾರೆ. ಈ ಕ್ಷೇತ್ರದ ಖುದ್ದು ಉಸ್ತುವಾರಿ ಕುಮಾರಸ್ವಾಮಿ ವಹಿಸಿಕೊಂಡಿ
ದ್ದಾರೆ
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More
ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More
This website uses cookies.
Leave a Comment