ಮಂಡ್ಯದಲ್ಲಿ ಸುದ್ದಿಗಾರರ ಜೊತೆ ಮಾತಾನಾಡಿದ ಮರಿತಿಬ್ಬೇಗೌಡ ಜೆಡಿಎಸ್ ಪಕ್ಷದ ಮೇಲೆ ಹಾಗೂ ನಾಯಕರ ಮೇಲೆ ಕಾಂಗ್ರೆಸ್ ಮತ್ತು ಬಿಜೆಪಿಯವರು ಆರೋಪ ಮಾಡಿ ವಾಗ್ದಾಳಿ ಮಾಡುತ್ತಿತ್ತು. ಆದರೆ ಇದೀಗ ನಾವೇ ಜೆಡಿಎಸ್ ಸ್ವಪಕ್ಷದ ನಾಯಕರ ಮೇಲೆ ಗಂಭೀರ ಆರೋಪ ಮಾಡುವಂತಾಗಿದೆ ಎಂದರು.
ದಕ್ಷಿಣ ಪದವೀಧರ ಕ್ಷೇತ್ರದಿಂದ ತಮ್ಮ ಆಪ್ತ ಕೀಲಾರ ಜಯರಾಂ ಅವರಿಗೆ ದಕ್ಷಿಣ ಪದವೀಧರ ಕ್ಷೇತ್ರ ಚುನಾವಣೆಗೆ ಟಿಕೆಟ್ ಕೇಳಿದಕ್ಕೆ ಆತನ ಬಳಿ ಹಣ ಇಲ್ಲ. ಅವನಿಗೆ ಟಿಕೆಟ್ ಬೇಡಾ ಎಂದು ಜೆಡಿಎಸ್ ವರಿಷ್ಠರು ಹೇಳಿದ್ದರು.
ಇದಾದ ಬಳಿಕ ಪಕ್ಷದ ಬಾವುಟವನ್ನೇ ಹಿಡಿಯದ ಹೆಚ್.ಕೆ.ರಾಮುಗೆ ಟಿಕೆಟ್ ನೀಡಿದ್ದಾರೆ. ಈ ಮೂಲಕ ಜೆಡಿಎಸ್ನಲ್ಲಿ ಹಣವಿದ್ದವರಿಗೆ ಮಾತ್ರ ಟಿಕೆಟ್ ಕೊಡುವುದು ತಿಳಿಯುತ್ತದೆ. ಜೆಡಿಎಸ್ನಲ್ಲಿ ಪಕ್ಷದ ಕಾರ್ಯಕರ್ತರಿಗೆ ಯಾವುದೇ ಬೆಲೆ ಇಲ್ಲ, ಇಲ್ಲಿ ಹಣ ಇದ್ದವರಿಗೆ ಬೆಲೆ ಎಂದು ವಾಗ್ದಾಳಿ ನಡೆಸಿದರು.
ಕಳೆದ ಲೋಕಸಭಾ ಚುನಾವಣೆಯಲ್ಲಿ ದೇವೇಗೌಡರು ಮತ್ತು ನಿಖಿಲ್ ಕುಮಾರಸ್ವಾಮಿ ಸೋಲಲು ಶಾಸಕರು, ಕಾರ್ಯಕರ್ತರು, ಜನರು ಕಾರಣರಲ್ಲ, ಇದಕ್ಕೆ ಅವರ ಕುಟುಂಬದಲ್ಲಿ ತೆಗೆದುಕೊಂಡ ನಿರ್ಣಯಗಳೇ ಕಾರಣ. ಕುಟುಂಬ ರಾಜಕೀಯದಿಂದಲೇ ಈ ಸೋಲು ಉಂಟಾಗಿದೆ. ಮೊಮ್ಮಕ್ಕಳನ್ನು ಚುನಾವಣೆಗೆ ನಿಲ್ಲಿಸಿದ ಮೇಲೆ ದೇವೇಗೌಡರು ಚುನಾವಣೆಗೆ ನಿಲ್ಲುವ ಅವಶ್ಯಕತೆ ಇರಲಿಲ್ಲ. ನಿಖಿಲ್ ಮಂಡ್ಯಗೆ ಬೇಡಾ ಎಂದು ನಾನು ಒತ್ತಿ ಹೇಳಿದೆ. ಹೀಗಿದ್ದರೂ, ನನ್ನ ಮಾತನ್ನು ಕೇಳದೆ ನಿಖಿಲ್ ಕುಮಾರಸ್ವಾಮಿ ಅವರನ್ನು ನಿಲ್ಲಿಸಿದ್ದರಿಂದ ಸೋತರು. ಈ ಸೋಲಿಗೆ ಯಾರು ಕಾರಣರಲ್ಲ ಸ್ವತಃ ದೇವೇಗೌಡರ ಕುಟುಂಬವೇ ಇದಕ್ಕೆ ಮೂಲ ಕಾರಣ ಎಂದು ಕಿಡಿಕಾರಿದರು.
ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More
ಆಂಧ್ರಪ್ರದೇಶ: ಹಿಂದಿನ ಸರ್ಕಾರ ತಿರುಪತಿ ಲಡ್ಡುವನ್ನು ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಯಾರಿಸಲಾಗಿದೆ ಎಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು… Read More
ಬೆಂಗಳೂರು: ಜೆಪಿ ಶಾಸಕ ಮುನಿರತ್ನವಿರುದ್ಧ ಮತ್ತೊಂದು ಕೇಸ್ ದಾಖಲಾಗಿದ್ದು , ಇದೀಗ ಶಾಸಕನ ವಿರುದ್ಧ ಅತ್ಯಾಚಾರ ಕೇಸ್ ದಾಖಲಾಗಿದೆ. ಶಾಸಕ… Read More
ಬೆಂಗಳೂರು: ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಬಿಎಂಟಿಸಿ ಬಸ್ ಅಪಘಾತಕ್ಕೆ ವಿಶೇಷ ಚೇತನ ಬಲಿಯಾಗಿರುವ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಯಶವಂತಪುರದಿಂದ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,640 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಸೆ.19ರಿಂದ ಮ ಆಡಳಿತಾಧಿಕಾರಿ ಮತ್ತು ಜಿಟಿಟಿಸಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ… Read More
This website uses cookies.
Leave a Comment