ಇದನ್ನು ಓದಿ : SSLC ಪೇಲ್ ಕಡಿಮೆ ಮಾಡಲು ಶೇ 10 ರಷ್ಟು ಗ್ರೇಸ್ ಮಾರ್ಕ್ಸ್ : ಸರ್ಕಾರದ ನಿರ್ಧಾರ
ಮಂಡ್ಯ ಜಿಲ್ಲೆ ಪಾಂಡವಪುರ ಪಟ್ಟಣದ STG ಪ್ರಥಮ ದರ್ಜೆ ಕಾಲೇಜಿನ ಪ್ರಥಮ ವರ್ಷದ ಬಿಕಾಂ ವಿದ್ಯಾರ್ಥಿನಿ ಎಲ್.ವೈ.ಐಶ್ವರ್ಯ (ತೇಜಸ್ವಿನಿ) ತಾಳಿ ಕಟ್ಟಿಸಿಕೊಂಡು ನೇರವಾಗಿ ಪರೀಕ್ಷೆಗೆ ಬರೆದು ಬೆರಗು ಮೂಡಿಸಿದರು.
ಲಿಂಗಪುರ ಗ್ರಾಮದ ಕಮಲಾ ಮತ್ತು ಯೋಗೇಂದ್ರ ಪುತ್ರಿ ಐಶ್ವರ್ಯಾ ಹಾಗೂ ಮೈಸೂರು ತಾಲೂಕು ಲಕ್ಷ್ಮೀಪುರ ಗ್ರಾಮದ ಭಾಗ್ಯಲಕ್ಷ್ಮೀ ಮತ್ತು ಸೋಮಶೇಖರ್ ಅವರ ಪುತ್ರ ಎಲ್.ಎಸ್.ಯಶ್ವಂತ್ ಅವರ ವಿವಾಹ ಪಾಂಡವಪುರದ ಟಿಎಪಿಸಿಎಂಎಸ್ ಕಲ್ಯಾಣ ಮಂಟಪದಲ್ಲಿ ಬುಧವಾರ ನೆರವೇರಿತು.
ಆದರೆ ಇದೇ ದಿನ ಬಿಕಾಂ ಪ್ರಥಮ ವರ್ಷದ ಡಿಜಿಟಲ್ ಫ್ಲೂಯೆನ್ಸಿ ವಿಷಯ ಪರೀಕ್ಷೆ ಇತ್ತು . ಹೀಗಾಗಿ ಧಾರೆ ಮುಗಿದ ತಕ್ಷಣ ನವವಧು ಹಿರಿಯರ ಅನುಮತಿ ಪಡೆದು ಪರೀಕ್ಷೆಗೆ ಹಾಜರಾದರು.
ಐಶ್ವರ್ಯಳ ಮದುವೆ ಇಂದು ಅವಿನಾಶ್ ಎಲ್.ಎಸ್ ಜೊತೆಗೆ ಬೆಳಗ್ಗೆ 9.30 ರಿಂದ 10.30ರವರೆಗೆ ಮುಹೂರ್ತದಲ್ಲಿ ನೆರವೇರಿತು ನಂತರ ಆರತಕ್ಷತೆ ಮುಗಿಸಿ ಅತ್ತೆಯ ಮನೆಗೆ ಪ್ರವೇಶಿಸ ಬೇಕಿದ್ದ ಮಧುಮಗಳು ಕಲ್ಯಾಣ ಮಂಟಪದಿಂದ ಮಧುಮಗನೊಂದಿಗೆ ಕಾಲೇಜಿಗೆ ಆಗಮಿಸಿದಳು.
ಮಧುಮಗಳ ಅಲಂಕಾರದಲ್ಲೇ ಸರಿಯಾದ ಸಮಯಕ್ಕೆ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿ ಪರೀಕ್ಷೆ ಬರೆದು ಇತರ ಎಲ್ಲ ಹೆಣ್ಣು ಮಕ್ಕಳಿಗೂ ಪ್ರೇರಣೆಯಾಗಿದ್ದಾಳೆ.
ಇದನ್ನು ಓದಿ : weather report 12 – 05 – 2022
ಮದುವೆ ದಿನವೇ ಪರೀಕ್ಷೆ ಬರೆದ ವಿದ್ಯಾರ್ಥಿನಿ ಐಶ್ವರ್ಯ ಹಾಗೂ ಈಕೆಗೆ ಸಹಕಾರ ನೀಡಿದ ಪಾಲಕರಿಗೆ ಶಾಸಕ ಸಿ.ಎಸ್.ಪುಟ್ಟರಾಜು ಹಾಗೂ ಎಸ್ಟಿಜಿ ಶಿಕ್ಷಣ ಸಂಸ್ಥೆಯ ಸಿಇಒ ಸಿ.ಪಿ.ಶಿವರಾಜು ಅಭಿನಂದನೆ ಸಲ್ಲಿಸಿದ್ದಾರೆ.
ರಾಮನಗರ : ಮೇಕೆದಾಟು (Mekedatu) ಬಳಿಯ ಸಂಗಮದ ಕಾವೇರಿ ನದಿಯಲ್ಲಿ ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರು ಪಾಲಾದ ಘಟನೆ… Read More
ಬೆಂಗಳೂರು: ಮಾಜಿ ಸಿಎಂ ಎಸ್.ಎಂ ಕೃಷ್ಣ (91) ಆರೋಗ್ಯದಲ್ಲಿ ಏರುಪೇರು ಆಗಿದೆ. ವೈದ್ಯರ ಸೂಚನೆ ಮೇರೆಗೆ ಮಣಿಪಾಲ್ ಆಸ್ಪತ್ರೆಗೆ ಎಸ್.ಎಂ… Read More
ಬೆಂಗಳೂರು: ಮಹಿಳೆಯರ ಮೇಲಿನ ಸತತ ದೌರ್ಜನ್ಯದ ಆರೋಪಗಳ ಹಿನ್ನೆಲೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣರನ್ನು ಜೆಡಿಎಸ್ ನಿಂದ ಅಮಾನತು ಮಾಡಲಾಗಿದೆ. ಈ… Read More
ಮೈಸೂರು : ಶ್ರೀನಿವಾಸ್ ಪ್ರಸಾದ್ (Srinivas Prasad) ಅವರ ಅಂತ್ಯಕ್ರಿಯೆ ನಾಳೆ ಮಾಡಲಾಗುತ್ತದೆ ಎಂದು ಮಗಳು ಪ್ರತಿಮಾ ಪ್ರಸಾದ್… Read More
ಮೈಸೂರು : ಉದಯಗಿರಿ ಪೊಲೀಸ್ ಠಾಣೆಯಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಗರ್ಭಪಾತ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಮಂದಿ… Read More
ಬೆಂಗಳೂರು: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ (76) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಮೂತ್ರಕೋಶ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರು… Read More
This website uses cookies.
Leave a Comment