ಕರ್ನಾಟಕ ವಿಧಾನಸಭಾ ಚುನಾವಣೆಗೆ ನಾಳೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಇಂದು ಪ್ರಧಾನಿ ನರೇಂದ್ರ ಮೋದಿಯವರು ಬೆಂಗಳೂರಿನಲ್ಲಿ ರೋಡ್ ಶೋ, ದಕ್ಷಿಣ ಕನ್ನಡ, ಮೈಸೂರಿನಲ್ಲಿ ಪ್ರಚಾರ ಸಭೆಯನ್ನು ನಡೆಸಿದರು.
ಹುಮ್ನಾಬಾದ್ ನಲ್ಲಿ ಆರಂಭಗೊಂಡ ಅವರ ಚುನಾವಣಾ ಪ್ರಚಾರವು, ಇಂದು ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಯಲ್ಲಿ ಅಂತ್ಯಗೊಂಡಿದೆ.
ಪ್ರಧಾನಿ ಮಂತ್ರಿ ನರೇಂದ್ರ ಮೋದಿಯವರು ಏಪ್ರಿಲ್ 29ರಂದು ಬೀದರ್ ಜಿಲ್ಲೆಯ ಹುಮ್ನಾಬಾದ್ ನಲ್ಲಿ ಬಿಜೆಪಿ ಅಭ್ಯರ್ಥಿಯ ಪರವಾಗಿ ಚುನಾವಣಾ ಪ್ರಚಾರ ಆರಂಭಿಸಿದರು. ಮೇ.7ರ ಇಂದಿನವರೆಗೆ ಒಟ್ಟು 7 ದಿನಗಳ ಕಾಲ ಅವರು ರಾಜ್ಯದಲ್ಲಿ ಮತಬೇಟೆಯನ್ನು ನಡೆಸಿದರು.
ಕರ್ನಾಟಕದಲ್ಲಿ ಮೋದಿಯವರು 18 ಸಾರ್ವಜನಿಕ ಸಭೆ, 6 ರೋಡೋ ಶೋಗಳನ್ನು ನಡೆಸಿದರು. ಅದರಲ್ಲೂ ಬೆಂಗಳೂರಿನಲ್ಲಿ ಅತ್ಯಂತ ಹೆಚ್ಚು ರೋಡ್ ಶೋ ನಡೆಸಿ, ಸಿಲಿಕಾನ್ ಸಿಟಿಯಲ್ಲಿ ಮತಪ್ರಚಾರವನ್ನು ಕೈಗೊಂಡದರು.
ಇಂದು ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ಮೋದಿಯವರು ಕೊನೆಯ ಚುನಾವಣಾ ಪ್ರಚಾರ ಸಭೆಯನ್ನು ನಡೆಸಿದರು. ಈ ಬಳಿಕ ನಂಜುಂಡೇಶ್ವರ ದೇಗುಲಕ್ಕೆ ತೆರಳಿ ಪ್ರದಕ್ಷಿಣೆ ಹಾಕಿ, ವಿಶೇಷ ಪೂಜೆಯನ್ನು ಸಲ್ಲಿಸಿದರು.
ಮೋದಿಯವರು ಬೆಂಗಳೂರು, ಮೈಸೂರು ಕಲಬುರ್ಗಿಯಲ್ಲಿ ರೋಡ್ ಶೋ ನಡೆಸಿದ್ರೇ, ಹುಮ್ನಾಬಾದ್, ವಿಜಯಪುರ, ಕುಟಚಿ, ಕೋಲಾರ, ಚನ್ನಪಟ್ಟಣ, ಬೇಲೂರು, ಚಿತ್ರದುರ್ಗ, ಹೊಸಪೇಟೆ, ಸಿಂಧನೂರು, ಮುಲ್ಕಿ, ಅಂಕೋಲಾ, ಬೈಲಹೊಂಗಲ, ಬಳ್ಳಾರಿ, ತುಮಕೂರು, ಬಾದಾಮಿ, ಹಾವೇರಿ, ಶಿವಮೊಗ್ಗ ಹಾಗೂ ಇಂದು ನಂಜನಗೂಡಿನಲ್ಲಿ ಚುನಾವಣಾ ಪ್ರಚಾರ ಸಭೆಯನ್ನು ನಡೆಸಿದರು.
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More
ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More
This website uses cookies.
Leave a Comment