Main News

ಅಯೋಧ್ಯೆಯಲ್ಲಿ ಮೋದಿ ಮೇನಿಯಾ ಆರಂಭ : ವಿವಿಧ ಯೋಜನೆಗಳಿಗೆ ಚಾಲನೆಗೆ ಸಿದ್ದತೆ

ಅಯೋಧ್ಯೆ : ವಿವಿಧ ಕಾರ್ಯಕ್ರಮಗಳಿಗಾಗಿ ಪ್ರಧಾನಿ ಮೋದಿ ಶನಿವಾರ ರಾಮನೂರು ಅಯೋಧ್ಯೆಗೆ ಆಗಮಿಸಿದ್ದಾರೆ.

ನೂತನ ವಿಮಾನ ನಿಲ್ದಾಣ ಹಾಗೂ ಅಭಿವೃದ್ಧಿಪಡಿಸಿದ ರೈಲ್ವೆ ನಿಲ್ದಾಣ ಉದ್ಘಾಟನೆ ನೆರವೇರಿಸುವುದಕ್ಕೂ ಮುನ್ನ ಸುಮಾರು 15 ಕಿಮೀ ರೋಡ್‌ ಶೋ ಆರಂಭಿಸಿದ್ದಾರೆ.

ದೆಹಲಿಯಿಂದ ವಿಶೇಷ ವಿಮಾನದಲ್ಲಿ 10.45ರ ಸುಮಾರಿಗೆ ಮೋದಿ ಅವರು ಅಯೋಧ್ಯೆ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಶಾಲುಹೊದಿಸಿ ಪ್ರಧಾನ ಮಂತ್ರಿಯನ್ನು ಸ್ವಾಗತಿಸಿದರು .

ರೋಡ್‌ ಶೋ ನಂತರ ರೈಲ್ವೆ ನಿಲ್ದಾಣ ಉದ್ಘಾಟಿಸಲಿದ್ದಾರೆ. ಪ್ರಧಾನಿ ರೋಡ್‌ ಶೋ ನಡೆಯಲಿರುವ ರಸ್ತೆಯ ಎರಡೂ ಕಡೆಗಳಲ್ಲಿ ಸಾವಿರಾರು ಜನ ನೆರೆದು ಮೋದಿಯವರನ್ನು ಪುಷ್ಪಾರ್ಚನೆ ಹಾಗೂ ಜಯಘೋಷಗಳಿಂದ ಸ್ವಾಗತಿಸಿದರು. ದೇಶದ ನಾನಾ ಕಡೆಗಳಿಂದ ಬಂದ ಸಾಂಸ್ಕೃತಿಕ ಕಲಾ ತಂಡಗಳು ದಾರಿಯುದ್ದಕ್ಕೂ ತಮ್ಮ ಕಲಾ ಪ್ರದರ್ಶನಗಳನ್ನು ನೀಡಿ ನೋಡುಗರ ಮನಸೂರೆಗೊಂಡವು. ಸುಮಾರು 1,400 ಕಲಾವಿದರು 40ಕ್ಕೂ ಹೆಚ್ಚು ವೇದಿಕೆಗಳಲ್ಲಿ ಸಾಂಸ್ಕೃತಿಕ ನೃತ್ಯ ಪ್ರದರ್ಶನದೊಂದಿಗೆ ಪ್ರಧಾನಿಗಳನ್ನು ಸ್ವಾಗತಿಸಿದವು.ಕುಡಿದ ಮತ್ತಿನಲ್ಲಿ 33 ನೇ ಮಹಡಿಯಿಂದ ಬಿದ್ದು ಟೆಕ್ಕಿ ಸಾವು

ಅಯೋಧ್ಯೆಯಲ್ಲಿ ಏನೇನು ಕಾರ್ಯಕ್ರಮ?

  • ಬೆಳಗ್ಗೆ 11:15ಕ್ಕೆ ರೈಲ್ವೆ ನಿಲ್ದಾಣ ಉದ್ಘಾಟನೆ
  • 2 ಹೊಸ ಅಮೃತ್ ಭಾರತ್ & 6 ಹೊಸ ವಂದೇ ಭಾರತ್ ರೈಲುಗಳಿಗೆ ಚಾಲನೆ
  • 2183 ಕೋಟಿ ರೂ. ಗ್ರೀನ್‌ಫೀಲ್ಡ್ ಟೌನ್‌ಶಿಪ್‌ಗೆ ಅಡಿಗಲ್ಲು
  • 300 ಕೋಟಿ ರೂ. ವಷಿಷ್ಠ ಕುಂಜ್ ವಸತಿ ಯೋಜನೆ
  • ನವೀಕರಣಗೊಂಡಿರುವ ನಯಾಘಾಟ್‌ನಿಂದ ಲಕ್ಷ್ಮಣ ಘಾಟ್ ಉದ್ಘಾಟನೆ
    ( ದೀಪೋತ್ಸವ ಸ್ಥಳ, ಪ್ರವಾಸಿಗರಪಥವಾದ ರಾಮ್ ಕಿ ಪೌಡಿನಿಂದ ರಾಜ್‌ಘಾಟ್, ರಾಜ್‌ಘಾಟ್‌ನಿಂದ ರಾಮ ಮಂದಿರ ರಸ್ತೆ)
  • ಅಯೋಧ್ಯೆ ನಗರದಲ್ಲಿ 4 ಹೊಸ ರಸ್ತೆಗಳ ಉದ್ಘಾಟನೆ
  • ರಾಮಪಥ, ಭಕ್ತಿಪಥ, ಧರ್ಮಪಥ, ಶ್ರೀರಾಮ ಜನ್ಮಭೂಮಿ ಪಥ (ಜೊತೆಗೆ ಅಯೋಧ್ಯೆಗೆ ಸಂಪರ್ಕ ಕಲ್ಪಿಸುವ ಲಖನೌ-ಅಯೋಧ್ಯ ಹೈವೇ, ಅಯೋಧ್ಯ ಬೈಪಾಸ್, ವಾರಣಾಸಿ ಬೈಪಾಸ್, ಖುತಾರ್-ಲಖೀಂಪುರ ಹೈವೇ ಸೇರಿವೆ )
  • ಮಧ್ಯಾಹ್ನ 12:15ಕ್ಕೆ ಅಯೋಧ್ಯೆ ವಿಮಾನ ನಿಲ್ದಾಣ ಉದ್ಘಾಟನೆ
Team Newsnap
Leave a Comment

Recent Posts

ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ

2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್​ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More

May 18, 2024

SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ

ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More

May 17, 2024

ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More

May 17, 2024

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ… Read More

May 16, 2024

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More

May 16, 2024

ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ

ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More

May 16, 2024