New Delhi

ಡಿಕೆ ಸುರೇಶ್‌ ಹೇಳಿಕೆ ವಿರುದ್ಧ ಮೋದಿ ಕಿಡಿ

ನವದೆಹಲಿ : ರಾಜ್ಯಸಭೆಯಲ್ಲಿ ಭಾಷಣ ಮಾಡಿದ ಪ್ರಧಾನಿ ಮೋದಿ ಅವರು ಕಾಂಗ್ರೆಸ್‌ (Congress) ಈಗ ಉತ್ತರ-ದಕ್ಷಿಣದ ಹೆಸರಿನಲ್ಲಿ ದೇಶವನ್ನು ಒಡೆಯಲು ಮುಂದಾಗುತ್ತಿದೆ ಎಂದು ಹೇಳುವ ಮೂಲಕ ಡಿಕೆ ಸುರೇಶ್‌ (DK Suresh) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ನಮಗೆ ರಾಷ್ಟ್ರವೆಂದರೆ ಕೇವಲ ಒಂದು ತುಂಡು ಭೂಮಿ ಅಲ್ಲ , ಎಲ್ಲರಿಗೂ ಇದು ಸ್ಪೂರ್ತಿ ನೀಡುವ ಜಾಗ.

ದೇಹದ ಒಂದು ಅಂಗವು ಕಾರ್ಯ ನಿರ್ವಹಿಸದಿದ್ದರೆ, ಇಡೀ ದೇಹವನ್ನು ನಿಷ್ಕ್ರಿಯವೆಂದು ಪರಿಗಣಿಸಲಾಗುತ್ತದೆ. ಅದೇ ರೀತಿ ದೇಶದ ಒಂದು ಮೂಲೆಯಲ್ಲಿ ಅಭಿವೃದ್ದಿಯಿಲ್ಲದಿದ್ದರೆ ದೇಶ ಅಭಿವೃದ್ಧಿಯಾಗಲಾರದು ಎಂದು ಹೇಳಿದರು.

ರಾಜಕೀಯ ಸ್ವಾರ್ಥಕ್ಕಾಗಿ ದೇಶ ಒಡೆಯುವ ಹೊಸ ಕಥೆಗಳು ಸೃಷ್ಟಿಯಾಗುತ್ತಿದ್ದು , ದೇಶಕ್ಕೆ ಇದಕ್ಕಿಂತ ದೊಡ್ಡ ದೌರ್ಭಾಗ್ಯ ಏನಿದೆ? ರಾಷ್ಟ್ರೀಯ ಪಕ್ಷದಿಂದ ಇಂತಹ ಮನಸ್ಥಿತಿ ಹೊರಬರುತ್ತಿದೆ.

ದೇಶದ ಭವಿಷ್ಯಕ್ಕೆ ಇದು ಅಪಾಯಕಾರಿ ಮತ್ತು ಕಾಂಗ್ರೆಸ್‌ ದೇಶವನ್ನು ವಿಭಜಿಸುವ ಹೇಳಿಕೆ ನೀಡುವ ಹವ್ಯಾಸ ಬೆಳೆಸಿಕೊಂಡಿದೆ ವಾಗ್ದಾಳಿ ನಡೆಸಿದರು.

ರಾಜ್ಯಗಳು ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿಯಾದಂತೆ . ವರ್ಷ ಕಾಲ ನಡೆದ ಜಿ20 ವಿವಿಧ ಸಭೆಗಳನ್ನು ಉಲ್ಲೇಖಿಸಿದ ಅವರು, ಜಿ20ಗೆ ಸಂಬಂಧಿಸಿದ ಎಲ್ಲಾ ಸಭೆಗಳನ್ನು ಸರ್ಕಾರ ದೆಹಲಿಯಲ್ಲೇ ನಡೆಸಬಹುದಿತ್ತು , ಆದರೆ ನಾವು ಎಲ್ಲಾ ರಾಜ್ಯಗಳಲ್ಲಿ ಸಭೆ ಆಯೋಜಿಸಿದ್ದೇವೆ.

ಪ್ರವಾಸೋದ್ಯಮ ಅಭಿವೃದ್ಧಿಯಾಗಲಿ ,ರಾಜ್ಯದ ಪ್ರಸಿದ್ಧ ಸ್ಥಳಗಳು ವಿದೇಶಿಯರಿಗೆ ತಿಳಿಯಲಿ ಎಂಬ ಕಾರಣ ರಾಜ್ಯಗಳಲ್ಲಿ ಒಂದೊಂದು ಸಭೆ ಆಯೋಜಿಸಿಸಾಲಾಗಿತ್ತು.ಕರ್ನಾಟಕ ರಾಜ್ಯಕ್ಕೆ ದ್ರೋಹ – ಈ ಪ್ರತಿಭಟನೆ ದೇಶದ ಗಮನ ಸೆಳೆಯಲು : CM Siddaramaiah 

ಅಭಿವೃದ್ಧಿ ವಿಚಾರದಲ್ಲಿ ರಾಜ್ಯಗಳು ಒಂದು ಹೆಜ್ಜೆ ಮುಂದೆ ಇಟ್ಟರೆ ನಾನು ಎರಡು ಹೆಜ್ಜೆ ಮುಂದೆ ಇಡುತ್ತೇನೆ ಎಂದು ಪ್ರಧಾನ ಮಂತ್ರಿ ಹೇಳಿದರು.

Team Newsnap
Leave a Comment

Recent Posts

ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ

2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್​ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More

May 18, 2024

SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ

ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More

May 17, 2024

ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More

May 17, 2024

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ… Read More

May 16, 2024

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More

May 16, 2024

ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ

ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More

May 16, 2024