Main News

ಬೆಂಗಳೂರಿನ ಆರ್ ಟಿಒ ಕಚೇರಿಯಲ್ಲಿ ಹಣದ ಮಳೆ – ಸಿಕ್ಕವನಿಗೆ ಸೀರುಂಡೆ…..

ಬೆಂಗಳೂರಿನ ಕೋರಮಂಗಲದ ಆರ್ ಟಿ ಒ ಕಚೇರಿಯ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ ವೇಳೆ ಹಣದ ಮಳೆ ಸುರಿದಿದೆ.

ಈ ವೇಳೆ ಕಿಟಕಿಗಳಿಂದ ಹೊರ ಹಾಕಿದ ಹಣವನ್ನು ಕೆಳಗಿದ್ದ ಅಂಗಡಿ ಹಾಗೂ ಫುಟ್ ಪಾತ್ ನಲ್ಲಿ ನಿಂತಿದ್ದ ಜನರು ಆಯ್ಕೆ ಮಾಡಿಕೊಂಡು ಧನ್ಯವಾದರು.

ಎಸಿಬಿ ಅಧಿಕಾರಿಗಳು ದಾಳಿ ಮಾಡುತ್ತಿದ್ದಾರೆ ಎಂಬ ವಿಷಯ ತಿಳಿಯುತ್ತಿದ್ದಂತೆ ಕಚೇರಿಯಲ್ಲಿದ್ದಂತಹ ಸಿಬ್ಬಂದಿಗಳು ಕಿಟಕಿಯ ಮೂಲಕ ಹಣ ಹೊರ ಎಸೆದಿದ್ದಾರೆ.

ಸಿಬ್ಬಂದಿಗಳು ಹೀಗೆ ಎಸೆದಿದ್ದೇ ತಡ, ಕಿಟಕಿಯಿಂದ ಬಿದ್ದ ಹಣವನ್ನು ನಾ ಮುಂದು, ತಾ ಮುಂದೆ ಅಂತ ಜನರು ಬಾಚಿಕೊಂಡಿದ್ದಾರೆ.

ಕೋರಮಂಗಲದ ಆರ್ ಟಿ ಒ ಕಚೇರಿಯಲ್ಲಿ ವಾಹನ ನೊಂದಣಿ, ಚಾಲನಾ ಪರವಾನಗಿ ವಿತರಣೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿರುವುದಾಗಿ ಎಸಿಬಿಗೆ ದೂರುಗಳು ಬಂದಿದ್ದವು.

ಬೆಂಗಳೂರು ವಿಭಾಗದ ಎಸ್ ಪಿ ಕುಲದೀಪ್ ಆರ್ ಜೈನ್ ನೇತೃತ್ವದ ಎಸಿಬಿ ಅಧಿಕಾರಿಗಳ ತಂಡ, ಕಚೇರಿಯ ಮೇಲೆ ದಿಢೀರ್ ದಾಳಿ ನಡೆಸಿದ್ದರು.

5 ಲಕ್ಷ ನಗದು ವಶ

ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ದ ಅಧಿಕಾರಿಗಳು ದಾಳಿ ಮಾಡಿ ಕೈಗೆ 5.96 ಲಕ್ಷ ನಗದು ಹಣ ಸಿಕ್ಕಿದ್ದು ವಶಪಡಿಸಿಕೊಂಡಿದ್ದಾರೆ.ದಾಖಲೆಗಳ ಕೊಠಡಿ, ಅಧಿಕಾರಿಗಳ ಕೊಠಡಿ, ಕಚೇರಿ ಪಕ್ಕದ ಖಾಸಗಿ ಅಂಗಡಿ ಸೇರಿದಂತೆ ಹಲವು ಕಡೆಗಳಲ್ಲಿ ಲಂಚದ ಹಣವನ್ನು ಬಚ್ಚಿಟ್ಟಿರುವುದನ್ನು ತನಿಖಾ ತಂಡ ಪತ್ತೆಮಾಡಿದೆ.

ಆರ್‌ಟಿಒ ಕಚೇರಿಯ ಒಳಗಡೆ ಇದ್ದ ನಾಲ್ವರು ಖಾಸಗಿ ಮಧ್ಯವರ್ತಿಗಳು ಹಾಗೂ ಅಕ್ರಮದಲ್ಲಿ ಶಾಮೀಲಾದ ಶಂಕೆ ಇರುವ ಇಬ್ಬರು ಅಧಿಕಾರಿಗಳನ್ನು ಎಸಿಬಿ ತಂಡ ವಶಕ್ಕೆ ಪಡೆದು, ವಿಚಾರಣೆ ನಡೆಯುತ್ತದೆ.

Team Newsnap
Leave a Comment
Share
Published by
Team Newsnap

Recent Posts

ರಾಣೇಬೆನ್ನೂರು ಸಮೀಪ ಕಾರು ಪಲ್ಟಿಯಾಗಿ ನಾಲ್ವರು ಸಾವು : 6 ಮಂದಿಗೆ ಗಾಯ

ರಾಣೇಬೆನ್ನೂರು : ವೇಗವಾಗಿ ಚಲಿಸುತ್ತಿದ್ದ ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿ 6 ಮಂದಿ ಗಾಯಗೊಂಡ… Read More

May 24, 2024

ಹೈಕೋರ್ಟ್ ವಕೀಲೆ ಚೈತ್ರಾ ಗೌಡ ಅನುಮಾನಾಸ್ಪದ ಸಾವು : ಸಂಪೂರ್ಣ ವಿವರ

ಬೆಂಗಳೂರು : ಹೈಕೋರ್ಟ್ ವಕೀಲರಾದ ಚೈತ್ರಾ ಗೌಡ ಅವರದ್ದು ಕೊಲೆಯಲ್ಲ, ಆತ್ಮಹತ್ಯೆ ಎಂದು ಪೊಲೀಸ್ ಅಧಿಕಾರಿಗಳ ಮೂಲಗಳು ತಿಳಿಸಿವೆ. ಚೈತ್ರಾ… Read More

May 24, 2024

16ನೇ ವಯಸ್ಸಿನ ಭಾರತೀಯ ಬಾಲಕಿ ಮೌಂಟ್‌ ಎವರೆಸ್ಟ್‌ ಶಿಖರ ಏರಿ ಸಾಧನೆ

ನವದೆಹಲಿ : 12ನೇ ತರಗತಿ ವಿದ್ಯಾರ್ಥಿನಿ ಕಾಮ್ಯ ಕಾರ್ತಿಕೇಯನ್‌ ವಿಶ್ವದ ಅತಿ ಎತ್ತರದ ಮೌಂಟ್‌ ಎವರೆಸ್ಟ್‌ ಶಿಖರವನ್ನು ನೇಪಾಳ ಕಡೆಯಿಂದ… Read More

May 24, 2024

ಅರಮನೆ ಮಂಡಳಿ ಕಚೇರಿ ಮೇಲೆ ‘ಲೋಕಾ’ದಾಳಿ : ಲೆಕ್ಕವೇ ಇಲ್ಲದ 4 ಲಕ್ಷ ವಶ

ಮೈಸೂರು: ಅರಮನೆ ಮಂಡಳಿ ಕಚೇರಿ ಮೇಲೆ ಗುರುವಾರ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ದಾಳಿಯ ವೇಳೆ ಪ್ರವೇಶ ದ್ವಾರ… Read More

May 23, 2024

‘ COMEDK ಪರೀಕ್ಷೆ’ ಫಲಿತಾಂಶ ನಾಳೆ ಮಧ್ಯಾಹ್ನ 2 ಗಂಟೆಗೆ ಬಿಡುಗಡೆ

ಬೆಂಗಳೂರು : ನಾಳೆ ಮಧ್ಯಾಹ್ನ 2 ಗಂಟೆಗೆ : ಕರ್ನಾಟಕದ ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ದಂತ ವೈದ್ಯಕೀಯ ಕಾಲೇಜುಗಳ ಒಕ್ಕೂಟ… Read More

May 23, 2024

ಲೋಕ ಚುನಾವಣೆ: ಮತ ಎಣಿಕೆ ಕಾರ್ಯದಲ್ಲಿ ಯಾವುದೇ ಲೋಪ ಬೇಡ: ಡಾ. ಕುಮಾರ

ಮಂಡ್ಯ : ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ರ ಮತ ಎಣಿಕೆ ಕಾರ್ಯ ಜೂನ್ 4 ರಂದು ನಡೆಯಲಿದೆ, ಉತ್ತಮ… Read More

May 23, 2024