“ಹೀಗ್ಯಾಕೆ ಸುಮ್ಮನಿದ್ದುಬಿಟ್ಟಿದ್ದೀಯ?
ಮಾತಾಡು,
ಸದ್ದುಬರುವಂತೆ ಪಾದ ಒತ್ತಿ ನಡೆದಾಡು,
ನೀರು ಗುಟುಕರಿಸುವಾಗ ಬೇಕಂತಲೇ ಗಂಟಲು ಕೊಂಕಿಸು,
ಉಸಿರಾಟ ನೆನಪಾದಾಗೆಲ್ಲ ಸ್ವಲ್ಪ ಜೋರಾಗಿ ಉಸಿರೆಳೆದುಕೊ,
ಆಗಾಗ ಕನ್ನಡಿ ನೋಡಿಕೊಂಡು ಮುಖವಿದೆಯಾ ಅಂತ ಖಾತ್ರಿಮಾಡಿಕೊ……….
ನಗುವು ನಿನ್ನದು, ನಡಿಗೆ ನಿನ್ನದು;
ಆಕಳಿಕೆ, ಬಿಕ್ಕಳಿಕೆಗಳೂ ನಿನ್ನವು.
ಇಲ್ಲಿ ಹಠವಿದೆ, ತ್ಯಾಗವಿದೆ,
ಧ್ಯಾನವಿದೆ, ಪರಿಪೂರ್ಣ ಅರ್ಪಣೆಯಿದೆ.
ನೀ ದೇವಿಯಲ್ಲ;
ಬರಿ ಶಕ್ತಿಯಲ್ಲ..
ಮಾನವತೆಯ ಪರಿಪಾಕ.
ನಿನ್ನ ಆತ್ಮ ಸ್ಥೈರ್ಯ ಸಾಂಕ್ರಾಮಿಕವಾಗಬೇಕು
ಮಿಥ್ಯವನ್ನು ಭಗ್ನಗೊಳಿಸಲು;
ಸತ್ಯವನ್ನು ನಗ್ನಗೊಳಿಸಲು..
ಮೂಕಳಾದರೆ ಲೋಕವೂ ನೂಕಿಬಿಟ್ಟೀತು……….. ಶಬ್ದವಾಗು “
- ರಾಹುಲ್ ಗಾಂಧಿ ‘ಪ್ರಧಾನಿಯಾಗಲು’ ಮೋದಿಗಿಂತ ಸಮರ್ಥರು : CM ಸಿದ್ದರಾಮಯ್ಯ
- 22 ಕೆಜಿ ಚಿನ್ನ, 6 ಕೋಟಿ ಮೌಲ್ಯದ ವಜ್ರ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಜಪ್ತಿ
- ಇಂದು ಕೆ.ಪಿ. ನಂಜುಂಡಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ
- ರಾಜಕೀಯ ಸ್ವಾರ್ಥಕ್ಕಾಗಿ ನೆರೆ ರಾಜ್ಯಕ್ಕೆ ಕಾವೇರಿ ನೀರು ಮಾರಿಕೊಂಡ ಕಾಂಗ್ರೆಸ್!
- Bengaluru Airport : ವಿಮಾನದಲ್ಲಿ ಅಕ್ರಮವಾಗಿ 10 ಅನಕೊಂಡ ಹಾವುಗಳ ಕಳ್ಳಸಾಗಾಟ
- ಏಪ್ರಿಲ್ 26ರಂದು ಮೈಸೂರಿನ ಪ್ರವಾಸಿ ತಾಣಗಳು ಬಂದ್