“ಹೀಗ್ಯಾಕೆ ಸುಮ್ಮನಿದ್ದುಬಿಟ್ಟಿದ್ದೀಯ?
ಮಾತಾಡು,
ಸದ್ದುಬರುವಂತೆ ಪಾದ ಒತ್ತಿ ನಡೆದಾಡು,
ನೀರು ಗುಟುಕರಿಸುವಾಗ ಬೇಕಂತಲೇ ಗಂಟಲು ಕೊಂಕಿಸು,
ಉಸಿರಾಟ ನೆನಪಾದಾಗೆಲ್ಲ ಸ್ವಲ್ಪ ಜೋರಾಗಿ ಉಸಿರೆಳೆದುಕೊ,
ಆಗಾಗ ಕನ್ನಡಿ ನೋಡಿಕೊಂಡು ಮುಖವಿದೆಯಾ ಅಂತ ಖಾತ್ರಿಮಾಡಿಕೊ……….
ನಗುವು ನಿನ್ನದು, ನಡಿಗೆ ನಿನ್ನದು;
ಆಕಳಿಕೆ, ಬಿಕ್ಕಳಿಕೆಗಳೂ ನಿನ್ನವು.
ಇಲ್ಲಿ ಹಠವಿದೆ, ತ್ಯಾಗವಿದೆ,
ಧ್ಯಾನವಿದೆ, ಪರಿಪೂರ್ಣ ಅರ್ಪಣೆಯಿದೆ.
ನೀ ದೇವಿಯಲ್ಲ;
ಬರಿ ಶಕ್ತಿಯಲ್ಲ..
ಮಾನವತೆಯ ಪರಿಪಾಕ.
ನಿನ್ನ ಆತ್ಮ ಸ್ಥೈರ್ಯ ಸಾಂಕ್ರಾಮಿಕವಾಗಬೇಕು
ಮಿಥ್ಯವನ್ನು ಭಗ್ನಗೊಳಿಸಲು;
ಸತ್ಯವನ್ನು ನಗ್ನಗೊಳಿಸಲು..
ಮೂಕಳಾದರೆ ಲೋಕವೂ ನೂಕಿಬಿಟ್ಟೀತು……….. ಶಬ್ದವಾಗು “
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ