ರಾಜ್ಯದಲ್ಲಿ ಜೂನ್ 5 ರಿಂದ ಮುಂಗಾರು ಆರಂಭ : ಕೃಷಿ ಚಟುವಟಿಕೆ ಚುರುಕುಗೊಳಿಸಲು ರೈತರೂ ಕೂಡ ಸಿದ್ದ

Team Newsnap
1 Min Read

ರಾಜ್ಯದಲ್ಲಿ ಜೂನ್.5ಕ್ಕೆ ಮುಂಗಾರು ಆರಂಭವಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ಹೇಳಿದೆ.ಮೇ 27ರಂದೇ ಕೇರಳಕ್ಕೆ ಮುಂಗಾರು ಪ್ರವೇಶವಾಗಬೇಕಿತ್ತು ಆದರೆ, ಮುಂಗಾರು ವಿಳಂಬವಾಗಲಿದೆ ಇನ್ನೆರಡು ದಿನಗಳಲ್ಲಿ ಕೇರಳಕ್ಕೆ ಮಾನ್ಸೂನ್ ಪ್ರವೇಶವಾಗುವ ಸಾಧ್ಯತೆಯಿದೆ.

ಜೂನ್.5ಕ್ಕೆ ರಾಜ್ಯದಲ್ಲೂ ಮುಂಗಾರು ಆರಂಭವಾಗಲಿದೆ , ರೈತರೂ ಕೂಡ ಕೃಷಿ ಚಟುವಟಿಕೆ ಚುರುಕುಗೊಳಿಸಲು ಸಿದ್ದತೆ ನಡೆಸಿದ್ದಾರೆ ಎಂದು ತಿಳಿಸಿದೆ.

ಅಸನಿ ಚಂಡಮಾರುತದ ಪ್ರಭಾವದಿಂದಾಗಿ ಈ ಬಾರಿ ವಾಡಿಕೆಗಿಂತ ಮೊದಲೇ ಅಂದರೆ ಮೇ 16ಕ್ಕೆ ಅಂಡಮಾನ್ ಅನ್ನು ಮುಂಗಾರು ತಲುಪಿತ್ತು. ಆದರೆ, ಆರು ದಿನಗಳ ವಿರಾಮದ ಬಳಿಕ ಈಗ ಶ್ರೀಲಂಕಾದಿಂದ ಕೇರಳದ ಕಡೆಗೆ ಚಲಿಸಲು ಪ್ರಾರಂಭಿಸಿದೆ. ಕೇರಳಕ್ಕೆ ಆಗಮಿಸುವುದು ಮಾತ್ರವೇ ಬಾಕಿ ಇದೆ ಎನ್ನಲಾಗಿದೆ.

ಮಾನ್ಸೂನ್ ಜೂನ್ 1 ರಂದು ಕೇರಳ ರಾಜ್ಯವನ್ನು ಪ್ರವೇಸಿಸಿದರೆ, ಜೂನ್ 5 ರಂದು ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನ ಕೆಲ ಭಾಗಗಳನ್ನು ಮುಟ್ಟಲಿದೆ. ಜೂನ್ 10 ರ ವೇಳೆಗೆ ಅದು ಇಡೀ ರಾಜ್ಯವನ್ನು ಆವರಿಸುತ್ತದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನು ಓದಿ :ಕರ್ನಾಟಕ ಫಿಲ್ಮ್ ಚೇಂಬರ್ ಗೆ ಭಾ.ಮಾ.ಹರೀಶ್ ಅಧ್ಯಕ್ಷರಾಗಿ ಆಯ್ಕೆ

ಮುಂದಿನ 48 ಗಂಟೆಗಳಲ್ಲಿ ದಕ್ಷಿಣ ಅರೇಬಿಯನ್ ಸಮುದ್ರದ ಕೆಲವು ಭಾಗಗಳು ಮತ್ತು ಇಡೀ ಮಾಲ್ಡೀವ್ಸ್ ಮತ್ತು ಲಕ್ಷದ್ವೀಪದ ಪಕ್ಕದ ಪ್ರದೇಶಗಳು ಹಾಗೂ ಕೊಮೊರಿನ್​ನ ಕೆಲವೆಡೆ ನೈಋತ್ಯ ಮುಂಗಾರು ಮತ್ತಷ್ಟು ಪ್ರವೇಶ ಪಡೆಯುವ ನಿರೀಕ್ಷೆ ಇದೆ. ಈ ವಾರದಲ್ಲಿ ಕೇರಳದಲ್ಲಿ ಮಾನ್ಸೂನ್ ಆರಂಭವಾಗಲು ಪೂರಕವಾದ ವಾತಾವರಣವಿದೆ ಎಂದು ಹೇಳಿದೆ.

Share This Article
Leave a comment