ಗುಜರಾತ್ನ ಮೊರ್ಬಿ ಜಿಲ್ಲೆಯ ಮಚ್ಚು ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ತೂಗು ಸೇತುವೆ ಭಾನುವಾರ ಕುಸಿದು ಬಿದ್ದು ದೊಡ್ಡ ದುರಂತ ಸಂಭವಿಸಿದೆ. ಸೇತುವೆ ಮೇಲಿದ್ದ ಹಲವರು ನದಿಗೆ ಬಿದ್ದಿದ್ದಾರೆ. ಗುಜರಾತ್ ಸೇತುವೆ ದುರಂತದಲ್ಲಿ ಈವರೆಗೆ ಬಂದ ಮಾಹಿತಿ ಪ್ರಕಾರ 30 ಮಕ್ಕಳು ಸೇರಿದಂತೆ 90 ಜನರು ಸಾವನ್ನಪ್ಪಿದ್ದಾರೆ.
ಮೋರ್ಬಿಯಲ್ಲಿರುವ ಕೇಬಲ್ ಸೇತುವೆಯು ಐತಿಹಾಸಿಕವಾದದ್ದು. ಕಳೆದ ವಾರ ಅದನ್ನು ನವೀಕರಿಸಲಾಗಿತ್ತು. ನವೀಕರಣದ ನಂತರ, ಅಕ್ಟೋಬರ್ 26 ರಂದು ಗುಜರಾತಿ ಹೊಸ ವರ್ಷದ ದಿನದಂದು ಅದನ್ನು ಸಾರ್ವಜನಿಕರ ಉಪಯೋಗಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಅಕ್ಟೋಬರ್ 30ರಂದು ಸಂಜೆ ಛಾತ್ ಪೂಜೆಯ ನಿಮಿತ್ತ ಕೆಲವು ವಿಧಿವಿಧಾನಗಳನ್ನು ನೆರವೇರಿಸಲು ಸೇತುವೆ ಮೇಲೆ ಬಹಳಷ್ಟು ಜನರು ಜಮಾಯಿಸಿದ್ದರು.
ಪ್ರಮುಖ ಪ್ರವಾಸಿ ಆಕರ್ಷಣೆಯಾಗಿರುವ ಸೇತುವೆ ಮೇಲೆ ದೀಪಾವಳಿ ರಜೆ ಮತ್ತು ಭಾನುವಾರದ ಕಾರಣ ಪ್ರವಾಸಿಗರ ನೂಕುನುಗ್ಗಲು ಇತ್ತು.ಸೇತುವೆ ಕುಸಿದಾಗ ಮೇಲೆ ಸುಮಾರು 500 ಜನರು ಇದ್ದರು ಎನ್ನಲಾಗಿದ್ದು, ಭಾರ ಹೆಚ್ಚಾಗಿದ್ದಕ್ಕೆ ಸೇತುವೆ ಕುಸಿದಿದೆ ಎಂದು ತಿಳಿದುಬಂದಿದೆ. ಮನೆಯಲ್ಲಿ ಭಗತ್ ಸಿಂಗ್ ಪಾತ್ರದ ಅಭ್ಯಾಸ – ನೇಣಿಗೆ ಕೊರಳು, ಬಾಲಕ ಸಾವು – ಚಿತ್ರದುರ್ಗದಲ್ಲಿ ದುರಂತ
ಕೇಬಲ್ ಸೇತುವೆ ಕುಸಿತ ದುರಂತದಲ್ಲಿ ಸಾವು-ನೋವಿನ ಸಂಖ್ಯೆ ಹೆಚ್ಚಾಗುತ್ತಿದ್ದು, ಸದ್ಯ ಮೃತರ ಸಂಖ್ಯೆ 90ರಿಂದ 141ಕ್ಕೆ ಏರಿಕೆಯಾಗಿದೆ. ಇನ್ನೂ ಹಲವರು ನದಿಯಲ್ಲಿ ಸಿಲುಕಿರುವ ಅನುಮಾನ ವ್ಯಕ್ತವಾಗಿದ್ದು, ಇವರ ಶೋಧಕಾರ್ಯ ಹಾಗೂ ರಕ್ಷಣಾ ಕಾರ್ಯ ಮುಂದುವರಿದೆ. ಸ್ಥಳದಲ್ಲಿ ಸೇನೆ, ಎಸ್ಡಿಆರ್ಎಫ್, ಎನ್ಡಿಆರ್ಎಫ್ ಬೀಡುಬಿಟ್ಟಿದೆ. ಘಟನೆಗೆ ನಿಖರ ಕಾರಣ ತಿಳಿಯಲು ತನಿಖೆಗೆ ಆದೇಶಿಸಲಾಗಿದೆ.
- ಜುಲೈ ವೇಳೆಗೆ ಧಾರವಾಡ – ಬೆಂಗಳೂರು ನಡುವೆ ವಂದೇ ಭಾರತ್ ರೈಲು ಸಂಚಾರ ಆರಂಭ – ಜೋಶಿ
- ನಮ್ಮ ಮೆಟ್ರೋ ಲಿಖಿತ ಪರೀಕ್ಷೆ ಮುಂದೂಡಿಕೆ
- ನನ್ನ ವಿರುದ್ಧದ ಆರೋಪ ಸಾಬೀತಾದರೆ ನೇಣು ಹಾಕಿಕೊಳ್ಳುವೆ : ಬ್ರಿಜ್ ಭೂಷಣ್
- ಲೋಕಸಭೆ ಚುನಾವಣೆ ಸ್ಪರ್ಧೆ ಕುರಿತು ಯಾವುದೇ ಚರ್ಚೆ ಇಲ್ಲ : ಜಗದೀಶ್ ಶೆಟ್ಟರ್
- ಲೋಕಾಯುಕ್ತ ದಾಳಿ- ಜಿಂಕೆ ಕೊಂಬು ಸೇರಿ 4.75 ಕೋಟಿ ರೂ. ಮೌಲ್ಯದ ಆಸ್ತಿ ಪತ್ತೆ
More Stories
ನನ್ನ ವಿರುದ್ಧದ ಆರೋಪ ಸಾಬೀತಾದರೆ ನೇಣು ಹಾಕಿಕೊಳ್ಳುವೆ : ಬ್ರಿಜ್ ಭೂಷಣ್
ಯಾಸಿನ್ ಮಲಿಕ್ ಮರಣದಂಡನೆಗೆ ಮನವಿ : ಹೈಕೋರ್ಟ್ ನೋಟಿಸ್
ನೂತನ ಸಂಸತ್ ಭವನ ಉದ್ಘಾಟನೆ : ಶೃಂಗೇರಿಯ ಪುರೋಹಿತರಿಂದ ಧಾರ್ಮಿಕ ವಿಧಿವಿಧಾನ