Main News

ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದಾರೆ ವಿಶ್ವದ 100 ಕೋಟಿಗೂ ಹೆಚ್ಚು ಜನ: ಡಬ್ಲುಎಚ್‌ಒ

ವಿಶ್ವದಲ್ಲಿ 100 ಕೋಟಿಗೂ ಹೆಚ್ಚು ಜನರು ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದಾರೆ. ಖಿನ್ನತೆಯಿಂದಾಗಿ ಜನರ ಮಾನಸಿಕ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗುತ್ತಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಆತಂಕ ವ್ಯಕ್ತಪಡಿಸಿದೆ.


ಪ್ರತಿ ವರ್ಷ ಅಕ್ಟೋಬರ್ 10 ಅನ್ನು “ವಿಶ್ವ ಮಾನಸಿಕ ಆರೋಗ್ಯ ದಿನ’ವಾಗಿ ಆಚರಿಸಲಾಗುತ್ತಿದೆ. ಕೋವಿಡ್ ಸಮಯದಲ್ಲಿ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳುವುದು ಇಂದಿನ ತುರ್ತು ಅಗತ್ಯ ಎಂದು ಡಬ್ಲುಎಚ್‌ಒ ತಿಳಿಸಿದೆ.


ಸರ್ಕಾರಗಳು ನಿತ್ಯದ ಪ್ರಾಥಮಿಕ ಆರೋಗ್ಯ ಸೇವೆಗಳ ಜತೆಗೆ ಮಾನಸಿಕ ಆರೋಗ್ಯ ಸೇವೆಗಳನ್ನು ನೀಡಬೇಕೆಂದು ಸಲಹೆ ನೀಡಿದೆ. ಮಾನಸಿಕ ಆರೋಗ್ಯ ಇಲ್ಲದಿದ್ದರೆ ಸಾಮಾನ್ಯ ಆರೋಗ್ಯವೂ ಇಲ್ಲ ಎಂಬುದು ಎಚ್ಚರಿಕೆ ಗಂಟೆಯಾಗಲಿ ಎಂದು ಅದು ಕಿವಿಮಾತು ಹೇಳಿದೆ.


ವ್ಯಾಕುಲತೆಯಿಂದ ಜನರನ್ನು ಹೊರತರುವುದು ಸರ್ಕಾರ, ಆರೋಗ್ಯ ಸಂಸ್ಥೆಗಳ ಕರ್ತವ್ಯವಾಗಿದೆ. ಮಾನಸಿಕ ಆರೋಗ್ಯ ಸೇವೆ, ಆಪ್ತಸಮಾಲೋಚನೆ ಮತ್ತು ಧೈರ್ಯ ತುಂಬುವ ಕೆಲಸಗಳು ಆಗಬೇಕು ಎಂದಿದೆ.


ಪರಿಸ್ಥಿತಿಯ ಒತ್ತಡ, ಕೆಲಸದ ಸ್ಧಳದಲ್ಲಿನ ಕಿರಿಕಿರಿ, ಅನುವಂಶೀಯತೆ, ಸುತ್ತಮುತ್ತಲ ವಾತಾವರಣ, ಕೌಟುಂಬಿಕ ಸಮಸ್ಯೆಗಳು ಮಾನಸಿಕ ಕಾಯಿಲೆಗೆ ಕಾರಣವಾಗುತ್ತಿವೆ. ಆಧುನಿಕ ಜೀವನ ಶೈಲಿಯಲ್ಲಿ ಜನರು ಶಾರೀರಿಕ ಮತ್ತು ಮಾನಸಿಕ ಆರೋಗ್ಯ ನಿರ್ಲಕ್ಷಿಸುತ್ತಿದ್ದಾರೆ.


1992 ರಲ್ಲಿ ಪ್ರಥಮವಾಗಿ ವಿಶ್ವ ಮಾನಸಿಕ ಆರೋಗ್ಯ ದಿನವಾಗಿ ಆಚರಿಸಲಾಯಿತು. ಇದು ಆರಂಭವಾಗಿ 29 ವರ್ಷಗಳೇ ಆದರೂ ಮಾನಸಿಕ ಆರೋಗ್ಯ ಕುರಿತು ಜನರಲ್ಲಿ ಜಾಗೃತಿ ಮೂಡಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ ಅಭಿಪ್ರಾಯಪಟ್ಟಿದೆ.

Team Newsnap
Leave a Comment
Share
Published by
Team Newsnap

Recent Posts

ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ

ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More

May 4, 2024

ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು

ನಿನ್ನೆ ರಾತ್ರಿ 72ರ ವಯಸ್ಸಿನ ಎನ್.ಮುನಿಕೆಂಪಣ್ಣ ಶಕುನಿ (Shakuni) ವೇಷದಲ್ಲಿ ವೇದಿಕೆಗೆ ಬಂದು ಪಾತ್ರ ನಿರ್ವಹಿಸುತ್ತಲೇ ವೇದಿಕೆಯ ಮೇಲೆ ಕುಸಿದು… Read More

May 4, 2024

ಬಿಜೆಪಿಯವರು ಏಕೆ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮಾತನಾಡುತ್ತಿಲ್ಲ ?ಡಿ.ಕೆ.ಶಿವಕುಮಾರ್

ಬಾಗಲಕೋಟೆ : ಡಿಸಿಎಂ ಡಿ.ಕೆ.ಶಿವಕುಮಾರ್ , ಬಿಜೆಪಿ ಮುಖಂಡರು ಪ್ರಜ್ವಲ್ ರೇವಣ್ಣ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ? ಹೆಣ್ಣುಮಕ್ಕಳಿಗೆ ಸಾಂತ್ವನ… Read More

May 4, 2024

ರೇವಣ್ಣ ಅಪಹರಣ ಕೇಸ್‌ : ಎಸ್‌ಐಟಿ ವಿಶೇಷ ತಂಡದಿಂದ 40 ಕಡೆ ರೇಡ್‌

ಬೆಂಗಳೂರು : ನೆನ್ನೆ ವಿಶೇಷ ತನಿಖಾ ತಂಡ (ಎಸ್‌ಐಟಿ) , ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದಳು… Read More

May 4, 2024

ಕ್ರೇಜಿವಾಲ್ ಗೆ ಮಧ್ಯಂತರ ಜಾಮೀನು ಪರಿಗಣನೆಗೆ ಸುಪ್ರೀಂ ಸೂಚನೆ

ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌… Read More

May 3, 2024

ಬಿಜೆಪಿ ಜೊತೆಗಿನ ಮೈತ್ರಿ ಸದ್ಯಕ್ಕೆ ನನಗೆ ಮುಖ್ಯ ಅಲ್ಲ: ಎಚ್ ಡಿ ಕೆ

ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More

May 3, 2024