ಸಾಂಬಾರು ಚೆನ್ನಾಗಿಲ್ಲ ಎಂಬ ವಿಷಯಕ್ಕೆ ಗಲಾಟೆ ಆರಂಭಿಸಿ ರೊಚ್ಚಿಗೆದ್ದ ಮಗನೊಬ್ಬ ಹೆತ್ತ ಅಮ್ಮ ಹಾಗೂ ತಂಗಿಯನ್ನೇ ನಾಡಬಂದೂಕಿನಿಂದ ಗುಂಡು ಹಾರಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ದೊಡ್ಮನೆ ಗ್ರಾಮದ ಕುಡಗೋಡಿನಲ್ಲಿ ಜರುಗಿದೆ.
ಪಾರ್ವತಿ ನಾರಾಯಣ ಹಸ್ಲರ್ (42), ರಮ್ಯಾ ನಾರಾಯಣ ಹಸ್ಲರ್(19) ಹತ್ಯೆಯಾದ ದುರ್ದೈವಿಗಳು. ಮಂಜುನಾಥ ಹಸ್ಲರ್ (24) ಕೊಲೆ ಮಾಡಿದ ಆರೋಪಿ.
ಮನೆಯಲ್ಲಿ ಮಾಡಿದ್ದ ಸಾಂಬಾರು ಚೆನ್ನಾಗಿಲ್ಲ ಎಂದು ಆರೋಪಿ ಕ್ಯಾತೆ ತೆಗೆದು ಮನೆಯಲ್ಲಿದ್ದ ನಾಡ ಬಂದೂಕು ತೆಗೆದುಕೊಂಡು ಇಬ್ಬರ ಮೇಲೂ ಗುಂಡು ಹಾರಿಸಿದ್ದಾನೆ.
ಮಂಜುನಾಥ ಮದ್ಯ ವ್ಯಸನಿಯಾಗಿದ್ದ. ಆರೋಪಿ ಮಂಜುನಾಥ್ ವಿರುದ್ಧ ತಂದೆ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ