February 21, 2026

Newsnap Kannada

The World at your finger tips!

krushi honda

ತಾಯಿ, ಇಬ್ಬರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ಆತ್ಮಹತ್ಯೆ ‌

Spread the love

ತಾಯಿಯೊಬ್ಬಳು ಇಬ್ಬರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪದಲ್ಲಿ ನಡದಿದೆ.

ಸಿರುಗುಪ್ಪ ತಾಲೂಕಿನ ಶಾಲಿಗನೂರು ಗ್ರಾಮದ ನಾಗರತ್ನ (40), ಪುತ್ರಿಯರಾದ ಶೃತಿ (12), ಗಿರಿಜಾ (7) ಎಂದು ಹೇಳಲಾಗಿದೆ.

kere 2

ನಾಗರತ್ನ ತಮ್ಮ ಹೊಲದಲ್ಲಿದ್ದ ಕೃಷಿ ಹೊಂಡಕ್ಕೆ ತಮ್ಮಿಬ್ಬರು ಹೆಣ್ಣು ಮಕ್ಕಳೊಂದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ತಮ್ಮ ಜಮೀನಿನಲ್ಲಿ ಕೃಷಿ ಮಾಡಿಕೊಂಡು ರೈತ ಮಹಿಳೆಯಾಗಿ ಗುರುತಿಸಿಕೊಂಡಿದ್ದ ನಾಗರತ್ನ ಅವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಆಂಧ್ರ ಬ್ಯಾಂಕ್‍ನಲ್ಲಿ ಅಂದಾಜು 5.60 ಲಕ್ಷ ರೂ ಹಾಗೂ ಖಾಸಗಿ ಲೇವಾದೇವಿಗಾರರಿಂದ 15 ಲಕ್ಷ ರೂ. ಸಾಲಮಾಡಿದ್ದರೆಂದು ಮಾಹಿತಿ ಸಿಕ್ಕಿದ್ದು, ಸಾಲ ಮರುಪಾವತಿ ಮಾಡಲು ಸಾಲಗಾರರು ಕಾಟ ಕೊಡುತ್ತಿದ್ದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕೆ ವ್ಯಕ್ತವಾಗಿದೆ.

ಘಟನಾ ಸ್ಥಳಕ್ಕೆ ಸಿರುಗುಪ್ಪ ಪೋಲಿಸ್ ಠಾಣೆಯ ಸಿಪಿಐ ಟಿ ಆರ್ ಪವಾರ್, ಪಿಎಸ್‍ಐ ಕೆ.ರಂಗಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

error: Content is protected !!