ತಾಯಿಯೊಬ್ಬಳು ಇಬ್ಬರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪದಲ್ಲಿ ನಡದಿದೆ.
ಸಿರುಗುಪ್ಪ ತಾಲೂಕಿನ ಶಾಲಿಗನೂರು ಗ್ರಾಮದ ನಾಗರತ್ನ (40), ಪುತ್ರಿಯರಾದ ಶೃತಿ (12), ಗಿರಿಜಾ (7) ಎಂದು ಹೇಳಲಾಗಿದೆ.

ನಾಗರತ್ನ ತಮ್ಮ ಹೊಲದಲ್ಲಿದ್ದ ಕೃಷಿ ಹೊಂಡಕ್ಕೆ ತಮ್ಮಿಬ್ಬರು ಹೆಣ್ಣು ಮಕ್ಕಳೊಂದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ತಮ್ಮ ಜಮೀನಿನಲ್ಲಿ ಕೃಷಿ ಮಾಡಿಕೊಂಡು ರೈತ ಮಹಿಳೆಯಾಗಿ ಗುರುತಿಸಿಕೊಂಡಿದ್ದ ನಾಗರತ್ನ ಅವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಆಂಧ್ರ ಬ್ಯಾಂಕ್ನಲ್ಲಿ ಅಂದಾಜು 5.60 ಲಕ್ಷ ರೂ ಹಾಗೂ ಖಾಸಗಿ ಲೇವಾದೇವಿಗಾರರಿಂದ 15 ಲಕ್ಷ ರೂ. ಸಾಲಮಾಡಿದ್ದರೆಂದು ಮಾಹಿತಿ ಸಿಕ್ಕಿದ್ದು, ಸಾಲ ಮರುಪಾವತಿ ಮಾಡಲು ಸಾಲಗಾರರು ಕಾಟ ಕೊಡುತ್ತಿದ್ದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕೆ ವ್ಯಕ್ತವಾಗಿದೆ.
ಘಟನಾ ಸ್ಥಳಕ್ಕೆ ಸಿರುಗುಪ್ಪ ಪೋಲಿಸ್ ಠಾಣೆಯ ಸಿಪಿಐ ಟಿ ಆರ್ ಪವಾರ್, ಪಿಎಸ್ಐ ಕೆ.ರಂಗಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ