ಜ್ಯೋತಿ ಸೋನಾರ್ ಪತಿ ಹಾಗೂ ತನ್ನ ಮಕ್ಕಳೊಂದಿಗೆ ಪಿಕ್ ನಿಕ್ ಗೆಂದು ಜುಹು ಚೌಪಾಟಿಗೆ ಭೇಟಿ ನೀಡಲು ಯೋಜನೆ ಹಾಕಿಕೊಂಡಿದ್ದರು.
ಅಲೆಗಳ ಅಬ್ಬರ ಹೆಚ್ಚಾಗಿರುವ ಕಾರಣ ಜುಹು ಬೀಚ್ ಗೆ ಪ್ರವೇಶ ನಿಷೇಧಿಸಲಾಗಿತ್ತು. ಈ ಕಾರಣದಿಂದ ಕುಟುಂಬ ಬಾಂದ್ರಾಕ್ಕೆ ಬಂದಿತ್ತು.
ಬಾಂದ್ರಾಕ್ಕೆ ತಲುಪಿದ ಬಳಿಕ ಸಮುದ್ರದ ಬಳಿ ಜ್ಯೋತಿ ತನ್ನ ಪತಿಯ ಜತೆ ಫೋಟೋ ತೆಗೆಸಿಕೊಳ್ಳಲು ಬಂಡೆಯ ಮೇಲೆ ಕೂತಿದ್ದಾರೆ.
ಸಮುದ್ರದ ಅಲೆಗಳು ಅಪ್ಪಳಿಸುತ್ತಿದ್ದರೂ ಫೋಟೋಗಾಗಿ ಜ್ಯೋತಿ ಗಂಡನನ್ನು ಹಿಡಿದುಕೊಂಡು ಕೂತಿದ್ದಾರೆ. ಮಕ್ಕಳ ಕೈಯಲ್ಲಿ ಮೊಬೈಲ್ ಕೊಟ್ಟು ಖುಷಿಯಿಂದ ಪೋಸ್ ಕೊಟ್ಟಿದ್ದಾರೆ.
ಈ ವೇಳೆಗೆ ಜೋರಾಗಿ ಅಪ್ಪಳಿಸಿದ ಅಲೆಯೊಂದು ಒಂದೇ ಕ್ಷಣದಲ್ಲಿ ಜ್ಯೋತಿ ಅವರನ್ನು ಎಳೆದುಕೊಂಡೇ ಹೋಗಿದೆ. ಇದನ್ನು ನೋಡಿದ ಮಕ್ಕಳು “ಅಮ್ಮ ಅಮ್ಮ..” ಎಂದು ಕಿರುಚಾಡಲು ಶುರುಮಾಡಿದ್ದಾರೆ.
#alert : Be careful ❗️ guys don’t get tempt with social media and give up on lives #bandra #bandstand #mumbairains pic.twitter.com/bFe4bTdXeS
— Suresh Kumar Kurapaty (@kurafatygyan) July 14, 2023
ಅಲ್ಲೇ ಇದ್ದ ಸ್ಥಳೀಯ ನಿವಾಸಿ ಮುಕೇಶ್ ಎಂಬ ಯುವಕ ಜ್ಯೋತಿ ಅವರ ಸೀರೆಯನ್ನು ಹಿಡಿದು ಅವರನ್ನು ರಕ್ಷಿಸಲು ಯತ್ನಿಸಿದ್ದಾರೆ. ಆದರೆ ಮುಕೇಶ್ ಕೂಡ ಈ ಪ್ರಯತ್ನದಲ್ಲಿ ಮುಳುಗುವ ಹಂತಕ್ಕೆ ಬಂದಾಗ ಮುಕೇಶ್ ಅವರ ಕಾಲನ್ನು ಬೇರೆ ಅವರು ಎಳೆದು ಹೊರಕ್ಕೆ ಎಳೆದಿದ್ದಾರೆ.
ಘಟನೆ ಬಗ್ಗೆ ಮಾಹಿತಿ ಪಡೆದ ಪೊಲೀಸರು, ಅಗ್ನಿಶಾಮಕ ದಳದ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆ ನಡೆಸಿದ್ದಾರೆ. ಸತತ ಕಾರ್ಯಾಚರಣೆ ನಡೆಸಿ ಜ್ಯೋತಿ ಅವರ ಮೃತದೇಹವನ್ನು ಹೊರಕ್ಕೆ ತೆಗೆದು ಆಸ್ಪತ್ರೆಗೆ ರವಾನಿಸಿದ್ದಾರೆ ಎಂದು ವರದಿ ತಿಳಿಸಿದೆ.‘ಲೋಕಾ ‘ಚುನಾವಣೆ ವೇಳೆಗೆ ಜೆಡಿಎಸ್ – ಬಿಜೆಪಿ ಮೈತ್ರಿಗೆ ವೇದಿಕೆ ಸಜ್ಜು – ಬೊಮ್ಮಾಯಿ
ವಿಡಿಯೋ ತೆಗೆಯುತ್ತಿದ್ದ ಮಕ್ಕಳು ಮೊಬೈಲ್ ನಲ್ಲಿ ತಾಯಿ ಮುಳುಗುತ್ತಿರುವ ವಿಡಿಯೋ ಸೆರೆಯಾಗಿದ್ದು, ವೈರಲ್ ಆಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು