ಜ್ಯೋತಿ ಸೋನಾರ್ ಪತಿ ಹಾಗೂ ತನ್ನ ಮಕ್ಕಳೊಂದಿಗೆ ಪಿಕ್ ನಿಕ್ ಗೆಂದು ಜುಹು ಚೌಪಾಟಿಗೆ ಭೇಟಿ ನೀಡಲು ಯೋಜನೆ ಹಾಕಿಕೊಂಡಿದ್ದರು.
ಅಲೆಗಳ ಅಬ್ಬರ ಹೆಚ್ಚಾಗಿರುವ ಕಾರಣ ಜುಹು ಬೀಚ್ ಗೆ ಪ್ರವೇಶ ನಿಷೇಧಿಸಲಾಗಿತ್ತು. ಈ ಕಾರಣದಿಂದ ಕುಟುಂಬ ಬಾಂದ್ರಾಕ್ಕೆ ಬಂದಿತ್ತು.
ಬಾಂದ್ರಾಕ್ಕೆ ತಲುಪಿದ ಬಳಿಕ ಸಮುದ್ರದ ಬಳಿ ಜ್ಯೋತಿ ತನ್ನ ಪತಿಯ ಜತೆ ಫೋಟೋ ತೆಗೆಸಿಕೊಳ್ಳಲು ಬಂಡೆಯ ಮೇಲೆ ಕೂತಿದ್ದಾರೆ.
ಸಮುದ್ರದ ಅಲೆಗಳು ಅಪ್ಪಳಿಸುತ್ತಿದ್ದರೂ ಫೋಟೋಗಾಗಿ ಜ್ಯೋತಿ ಗಂಡನನ್ನು ಹಿಡಿದುಕೊಂಡು ಕೂತಿದ್ದಾರೆ. ಮಕ್ಕಳ ಕೈಯಲ್ಲಿ ಮೊಬೈಲ್ ಕೊಟ್ಟು ಖುಷಿಯಿಂದ ಪೋಸ್ ಕೊಟ್ಟಿದ್ದಾರೆ.
ಈ ವೇಳೆಗೆ ಜೋರಾಗಿ ಅಪ್ಪಳಿಸಿದ ಅಲೆಯೊಂದು ಒಂದೇ ಕ್ಷಣದಲ್ಲಿ ಜ್ಯೋತಿ ಅವರನ್ನು ಎಳೆದುಕೊಂಡೇ ಹೋಗಿದೆ. ಇದನ್ನು ನೋಡಿದ ಮಕ್ಕಳು “ಅಮ್ಮ ಅಮ್ಮ..” ಎಂದು ಕಿರುಚಾಡಲು ಶುರುಮಾಡಿದ್ದಾರೆ.
ಅಲ್ಲೇ ಇದ್ದ ಸ್ಥಳೀಯ ನಿವಾಸಿ ಮುಕೇಶ್ ಎಂಬ ಯುವಕ ಜ್ಯೋತಿ ಅವರ ಸೀರೆಯನ್ನು ಹಿಡಿದು ಅವರನ್ನು ರಕ್ಷಿಸಲು ಯತ್ನಿಸಿದ್ದಾರೆ. ಆದರೆ ಮುಕೇಶ್ ಕೂಡ ಈ ಪ್ರಯತ್ನದಲ್ಲಿ ಮುಳುಗುವ ಹಂತಕ್ಕೆ ಬಂದಾಗ ಮುಕೇಶ್ ಅವರ ಕಾಲನ್ನು ಬೇರೆ ಅವರು ಎಳೆದು ಹೊರಕ್ಕೆ ಎಳೆದಿದ್ದಾರೆ.
ಘಟನೆ ಬಗ್ಗೆ ಮಾಹಿತಿ ಪಡೆದ ಪೊಲೀಸರು, ಅಗ್ನಿಶಾಮಕ ದಳದ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆ ನಡೆಸಿದ್ದಾರೆ. ಸತತ ಕಾರ್ಯಾಚರಣೆ ನಡೆಸಿ ಜ್ಯೋತಿ ಅವರ ಮೃತದೇಹವನ್ನು ಹೊರಕ್ಕೆ ತೆಗೆದು ಆಸ್ಪತ್ರೆಗೆ ರವಾನಿಸಿದ್ದಾರೆ ಎಂದು ವರದಿ ತಿಳಿಸಿದೆ.‘ಲೋಕಾ ‘ಚುನಾವಣೆ ವೇಳೆಗೆ ಜೆಡಿಎಸ್ – ಬಿಜೆಪಿ ಮೈತ್ರಿಗೆ ವೇದಿಕೆ ಸಜ್ಜು – ಬೊಮ್ಮಾಯಿ
ವಿಡಿಯೋ ತೆಗೆಯುತ್ತಿದ್ದ ಮಕ್ಕಳು ಮೊಬೈಲ್ ನಲ್ಲಿ ತಾಯಿ ಮುಳುಗುತ್ತಿರುವ ವಿಡಿಯೋ ಸೆರೆಯಾಗಿದ್ದು, ವೈರಲ್ ಆಗಿದೆ.
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More
ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More
This website uses cookies.
Leave a Comment