New Delhi

ಪ್ರತ್ಯೇಕ ದಕ್ಷಿಣ ಭಾರತ ರಾಷ್ಟ್ರ ರಚನೆಗೆ ಸಂಸದ ಡಿಕೆ ಸುರೇಶ್ ಕೂಗು

ನವದೆಹಲಿ : ಕೇಂದ್ರದ ಮಧ್ಯಂತರ ಬಜೆಟ್‌ನಲ್ಲಿ ಹೊಸತೇನು ಇಲ್ಲ. ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ ಆಗುತ್ತಿದೆ. ಹೀಗೆ ಅನ್ಯಾಯ ಆದರೆ ಪ್ರತ್ಯೇಕ ರಾಷ್ಟ್ರ ಕೇಳಬೇಕಾಗುತ್ತದೆ ಎಂದು ಸಂಸದ ಡಿಕೆ ಸುರೇಶ್‌ ಅಸಮಾಧಾನ ಹೊರ ಹಾಕಿದರು.

ದೆಹಲಿಯಲ್ಲಿ ಕೇಂದ್ರದ ಮಧ್ಯಂತರ ಬಜೆಟ್‌ ಕುರಿತು ಪ್ರತಿಕ್ರಿಯಿಸಿದ ಅವರು, ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದ್ದಾರೆ. ಇಂದು ನಮ್ಮ ಗ್ಯಾರಂಟಿಗಳನ್ನು ವಿರೋಧ ಮಾಡಿದಂತವರು ಗ್ಯಾರಂಟಿ ಹೆಸರಿನಲ್ಲಿ ಚುನಾವಣೆಗೆ ಹೊರಟಿದ್ದಾರೆ ಎಂದು ಮೂದಲಿಸಿದರು.

ದಕ್ಷಿಣ ಭಾರತದ ಹಣವನ್ನು ಉತ್ತರ ಭಾರತಕ್ಕೆ ಹಂಚುತ್ತಿದ್ದಾರೆ. ಇದರಿಂದ ನಮಗೆ ಆರ್ಥಿಕ ತೊಂದರೆಯಾಗುತ್ತಿದೆ. ಹೀಗೆ ಮುಂದುವರಿದರೆ ದಕ್ಷಿಣ ಭಾರತದ ಪ್ರತ್ಯೇಕ ಕೂಗು ಎತ್ತಬೇಕಾದ ಅನಿವಾರ್ಯತೆ ಬರಲಿದೆ ಎಂದು ಸಂಸದರು ಎಚ್ಚರಿಸಿದರು.

ಹೊಸ ಪದಗಳನ್ನು ಬಳಸಿ, ಹೊಸ ಹೆಸರಿಟ್ಟು ಒಂದಷ್ಟು ಯೋಜನೆ ಘೋಷಿಸಿದ್ದಾರೆ. ನಮಗೆ ಬರಬೇಕಾದ ಹಣವೇ ಸರಿಯಾಗಿ ಬರುತ್ತಿಲ್ಲ. ಇನ್ನೂ 75,000 ಕೋಟಿ ಬಡ್ಡಿ ರಹಿತ ಸಾಲ ಕೊಡುವ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಕಿಡಿಕಾರಿದರು.ಪಿರಿಯಪಟ್ಟಣದಲ್ಲಿ ದುರಂತ- ಕೆರೆಗೆ ಬಿದ್ದು ಯುವಕ ಸಾವು

ಈ  ಬಜೆಟ್‌ ನಲ್ಲಿ ನಾಮಫಲಕ ಮಾತ್ರ ಬದಲಾಯಿಸಲಾಗಿದೆ. ಬೇರೆ ಬೇರೆ ದೇಸಿ ಹೆಸರುಗಳನ್ನ ಇಡಲಾಗಿದೆ. ಎಕನಾಮಿಕ್ ಸರ್ವೆ ಅವರು ಇಟ್ಟಿದ್ದಿದ್ರೆ ಇವರ ಪರಿಸ್ಥಿತಿ ಏನಾಗುತ್ತಿತ್ತು?. ಯಾವ ರೀತಿ ದೇಶ ಕಳೆದ ಸಾಲಿನಲ್ಲಿ ಸಾಧನೆಯನ್ನು ಸಾಧಿಸಿದೆ ಅನ್ನುವ ಅನುಮಾನಗಳು ಪ್ರಾರಂಭವಾಗಿದೆ. ಚುನಾವಣೆಗೆ ಸಂಬಂಧಪಟ್ಟಂತೆ ಒಂದಷ್ಟು ಘೋಷಣೆಗಳು, ಒಂದಷ್ಟು ಹೇಳಿಕೆಗಳನ್ನು ಕೂಡಿರುವ ಬಜೆಟ್‌ ಇದಾಗಿದೆ ಎಂದರು.

Team Newsnap
Leave a Comment

Recent Posts

ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ

2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್​ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More

May 18, 2024

SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ

ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More

May 17, 2024

ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More

May 17, 2024

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ… Read More

May 16, 2024

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More

May 16, 2024

ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ

ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More

May 16, 2024