Main News

ಸಂಸದೆ ಸುಮಲತಾ ಬಿಜೆಪಿಗೆ ಬೆಂಬಲ ಘೋಷಣೆ : ಮಗನ ರಾಜಕೀಯ ಎಂಟ್ರಿ ಇಲ್ಲ

ಮಂಡ್ಯದ ಅಭಿವೃದ್ದಿ ಮುಖ್ಯ. ಈ ನಿಟ್ಟಿನಲ್ಲಿ ಸಮಗ್ರವಾಗಿ ಯೋಚನೆ ಮಾಡಿ ನನ್ನ ಭವಿಷ್ಯಕ್ಕಿಂತ ಜಿಲ್ಲೆಯ ಜನರ , ನೆಚ್ಚಿನ ಕಾರ್ಯಕರ್ತರ ಭವಿಷ್ಯ ರೂಪಿಸುವ ಆಶಯ ಇಟ್ಟು ಕೊಂಡ ಸಂಸದೆ ಸುಮಲತಾ ನಾನು ಬಿಜೆಪಿ ಬೆಂಬಲಿಸುತ್ತೇನೆ. ನರೇಂದ್ರ ಮೋದಿ ಅವರಿಗೆ ಹಾಗೂ ಪಕ್ಷಕ್ಕೆ ಬೆಂಬಲಿಸಿ ಬಿಜೆಪಿಗೆ ಸೇರ್ಪಡೆಯ ಘೋಷಣೆ ಮಾಡಿದರು.

ಮಂಡ್ಯದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಂಸದೆ ಸುಮಲತಾ, ನಾನು ರಾಜಕಾರಣದಲ್ಲಿ ಇರುವ ತನಕ ಯಾವುದೇ ಕಾರಣಕ್ಕೂ ಅಭಿಷೇಕ್ ಅಂಬರೀಷ್ ರಾಜಕಾರಣಕ್ಕೆ ಬರುವುದಿಲ್ಲ. ಇದೊಂದು ಸ್ಪಷ್ಟ ಮಾತು. ನಾನು ಕುಟುಂಬ ರಾಜಕಾರಣ ಮಾಡುವುದಿಲ್ಲ ಎಂದು ಹೇಳಿದರು.

ನನಗೆ ರಾಜಕೀಯ ಅನಿವಾರ್ಯ ಅಲ್ಲ, ಆಕಸ್ಮಿಕ . ನನಗೆ ಸ್ವಾರ್ಥ ಇದ್ದಿದ್ರೆ, ಮಗನ ಭವಿಷ್ಯ ಬೇಕು ಎಂದಿದ್ರೆ ಏನು ಬೇಕಾದ್ರು ಮಾಡಬಹುದಿತ್ತು. ಎಂಎಲ್‍ಸಿ ಪೋಸ್ಟ್ ಬಂದಿತ್ತು. ಬೆಂಗಳೂರಿನಲ್ಲಿ ಒಂದು ಕ್ಷೇತ್ರದಲ್ಲಿ ನಿಲ್ಲಿ ಎಂದಿದ್ರು. ಮಂಡ್ಯಗೆ ಬಂದು ಸರ್ಕಾರದ ವಿರುದ್ಧ ಸಿಎಂ ಮಗನ ಎದುರು ನಿಂತೆ. ಸ್ವಾರ್ಥ ಇದ್ದಿದ್ರೆ ನಾನು ಮಂಡ್ಯದಲ್ಲಿ ನಿಲ್ಲಬೇಕಿರಲಿಲ್ಲ. ನನ್ನ ಬೆಂಬಲಿಗರ ಭವಿಷ್ಯವನ್ನು ಏನು ನಾನು ನೋಡಿಲ್ಲ ಎಂದರು.

ಜನ ದುಡ್ಡು ಕೊಟ್ಟು ನಮ್ಮ ಸಿನಿಮಾ ನೋಡಿದ್ದಾರೆ. ಈಗ ಬೇರೆ ದಾರಿ ತುಳಿಯುವ ಅವಶ್ಯಕತೆ ಇಲ್ಲ. ಯಾವುದು ಅನಿವಾರ್ಯ ಅಲ್ಲ ಯಾವುದು ಶಾಶ್ವತ ಅಲ್ಲ. ನಾನು ರಾಜಕೀಯ ಪ್ರವೇಶ ಮಾಡಿ 4 ವರ್ಷ ಕಳೆದಿದೆ. ನನಗೆ ರಾಜಕೀಯ ಅನಿವಾರ್ಯ ಅಲ್ಲ ಆಕಸ್ಮಿಕ. ನನ್ನ ಸ್ವಾರ್ಥಕ್ಕೆ ರಾಜಕೀಯ ಪ್ರವೇಶ ಆಗಲಿಲ್ಲ. ಜನರ ಒತ್ತಾಯಕ್ಕೆ ಮಣಿದು ರಾಜಕೀಯಕ್ಕೆ ಬರಬೇಕಾಯ್ತು ಎಂದರು. ಇದನ್ನು ಓದಿ –ಬೆಂಗಳೂರಿನಲ್ಲಿ ದುರಂತ : ಬಿಎಂಟಿಸಿ ಬಸ್ ಗೆ ದಿಢೀರ್ ಬೆಂಕಿ – ಕಂಡಕ್ಟರ್ ಸಜೀವ ದಹನ

ಮಂಡ್ಯ ಜನ ಅಂಬರೀಶ್ ಅವರಿಗೆ ಪ್ರೀತಿ ಕೊಟ್ಟರು. ಅವರು ಹೋಗುವಾಗ ಮಹಾರಾಜನ ರೀತಿ ಕಳಿಸಿದ್ರಿ. ಈ ಪ್ರೀತಿಗಾಗಿ ನಾನು ಚುನಾವಣೆಗೆ ನಿಂತೆ. ಮಂಡ್ಯ ಜನ ನನ್ನ ಪರ ನಿಂತರು. ಚಿತ್ರರಂಗ, ಅಂಬರೀಶ್ ಅಭಿಮಾನಿಗಳು, ನನ್ನ ಜನ ಬೆಂಬಲಕ್ಕೆ ನಿಂತರು. ನಾನು ಯಾರು ಅಂಬರೀಶ್ ಯಾರು ಎಂದು ಇಂಡಿಯಾಗೆ ಹಲವು ವರ್ಷದಿಂದ ಗೊತ್ತು. ಈಗ ಅಲ್ಲ ನಾವು ಸಿನಿಮಾದಲ್ಲಿ ಇದ್ದಾಗಿನಿಂದ ನಮ್ಮ ಬ್ಯಾನರ್ ಹಾಕಿದ್ದಾರೆ ಎಂದು ಹೇಳಿದರು.

ನನ್ನ, ಮಗನ ಭವಿಷ್ಯ ಯೋಚಿಸಿದ್ದರೆ ನನ್ನ ಹೆಜ್ಜೆ ಬೇರೆ ಆಗಿರುತ್ತಿತ್ತು. ಅಂಬರೀಶ್ ಅವರಿಗಿದ್ದ ಪ್ರಭಾವ ಬಳಸಿ ನಾನು ಅಧಿಕಾರ ಪಡೆಯಬಹುದಿತ್ತು. ಆದರೆ ನಾನು ಸ್ವಾರ್ಥಕ್ಕೆ ರಾಜಕಾರಣ ಮಾಡಿಲ್ಲ. ಸರ್ಕಾರದ ಎದುರಿಸಿ ನಾನು ಚುನಾವಣೆಗೆ ನಿಂತೆ. ನನಗೆ ಮುಂದೆ ಏನಾಗುತ್ತೆ ಅನ್ನೋ ಯೋಚನೆ ಇರಲಿಲ್ಲ. ಜನರಿಗಾಗಿ ರಾಜಕೀಯಕ್ಕೆ ಬಂದೆ. ಜನರು ತೋರಿದ ಅಭಿಮಾನ ಪ್ರೀತಿಗೆ ಬೆಲೆ ಕೊಡದಿದ್ದರೆ ಮನುಷ್ಯತ್ವ ಇಲ್ಲದಂತಾಗುತ್ತಿತ್ತು ಎಂದು ತಿಳಿಸಿದರು.

Team Newsnap
Leave a Comment

Recent Posts

SSLC ಫಲಿತಾಂಶ : ಬಾಲಕಿಯರೇ ಮೇಲುಗೈ ಉಡುಪಿ ಪ್ರಥಮ- ಯಾದಗಿರಿ ಕೊನೆ

ಎಸ್ಎಸ್ಎಲ್ ಸಿ 2024ರ ಫಲಿತಾಂಶದಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.ಉಡುಪಿಗೆ ಪ್ರಥಮ ಸ್ಥಾನ ಲಭ್ಯವಾಗಿದೆ.8,59,967 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಅವರಲ್ಲಿ… Read More

May 9, 2024

ರೇವಣ್ಣ ಕೇಂದ್ರ ಕಾರಾಗೃಹಕ್ಕೆ ಶಿಪ್ಟ್ : 4567 ಖೈದಿ ಸಂಖ್ಯೆ ನೀಡಿಕೆ

ಬೆಂಗಳೂರು : ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಜೆಡಿಎಸ್​ ಶಾಸಕ ಹಾಗೂ ಮಾಜಿ ಸಚಿವ ಹೆಚ್.… Read More

May 8, 2024

SSLC ಫಲಿತಾಂಶ ಪರಿಶೀಲಿಸಲು ಸುಲಭ ಹಂತಗಳು : ವಿವರ

ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More

May 8, 2024

ಈಜು ಕಲಿಯಲು ಹೋದ 10 ವರ್ಷದ ಬಾಲಕ ನೀರುಪಾಲು

ರಾಯಚೂರು: ತಾಲೂಕಿನ ಹೆಂಬೆರಾಳ ಗ್ರಾಮದಲ್ಲಿ ಈಜು ಕಲಿಯಲು ಹೋಗಿದ್ದ ಬಾಲಕ ನೀರುಪಾಲಾದ ಘಟನೆ ನಡೆದಿದೆ. ವಿನಾಯಕ (10) ಜೇಗರ್‌ಕಲ್ ಮಲ್ಲಾಪೂರು… Read More

May 8, 2024

ನಾಳೆ ( May 9 ) SSLC ಫಲಿತಾಂಶ ಪ್ರಕಟ

ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More

May 8, 2024

ರಾಜ್ಯದ ಎರಡೂ ಹಂತದ ಮತದಾನದ ವಿವರ : ಮಂಡ್ಯ ಪ್ರಥಮ – ಬೆಂಗಳೂರು ದಕ್ಷಿಣ ಕೊನೆ

ಬೆಂಗಳೂರು : ರಾಜ್ಯದಲ್ಲಿ ನಡೆದ ಎರಡು ಹಂತದ ಚುನಾವಣೆಯಲ್ಲಿ 28 ಕ್ಷೇತ್ರಗಳ ಮತದಾನ ಸಮಗ್ರ ವಿವರ. Join WhatsApp Group… Read More

May 8, 2024