ಪೋಕ್ಸೋ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಚಿತ್ರದುರ್ಗದ ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶರಣರಿಗೆ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜಿಲ್ಲಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ಎದೆ ನೋವಿನಿಂದ ಶ್ರೀಗಳು ಆಸ್ಪತ್ರೆಯಲ್ಲಿ ಕುಸಿದು ಬಿದ್ದ ಹಿನ್ನೆಲೆ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಶ್ರೀಗಳಿಗೆ ಸದ್ಯ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ, ECG ತಪಾಸಣೆ ಮಾಡಲಾಗುತ್ತಿದೆ.
ಬಿಜೆಪಿ MLC ಎಚ್. ವಿಶ್ವನಾಥ್ ಮತ್ತೆ ಕಾಂಗ್ರೆಸ್ ಸೇರುವ ಸುಳಿವು
ಜೈಲಿಗೆ ಶಿಫ್ಟ್ ಮಾಡಲಾದ ಬಳಿಕ ಶ್ರೀಗಳನ್ನು ಬೆಳಗಿನ ಜಾವ 3 ಗಂಟೆಯಿಂದ ನಿದ್ದೆ ಮಾಡಲೇ ಇಲ್ಲ ,ಶ್ರೀಗಳನ್ನು ಜೈಲಿನಲ್ಲಿರುವ ಪ್ರತ್ಯೇಕ ಕೊಠಡಿಯಲ್ಲಿ ಇರಿಸಲಾಗಿತ್ತು. ಯಾರೊಂದಿಗೂ ಮಾತಾಡದೇ ಮೌನವಾಗಿದ್ದರಂತೆ. ಬೆಳಗ್ಗೆ ಒಂದು ಲೋಟ ಹಾಲನ್ನು ಮಾತ್ರ ಸ್ವೀಕರಿಸಿದ್ದರು.
ಮುರುಘಾ ಶರಣರ ವಿರುದ್ಧ ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಆಗಸ್ಟ್ 26 ರಂದು ಪ್ರಕರಣ ದಾಖಲಾಗಿತ್ತು. ಚಿತ್ರದುರ್ಗದ ಮುರುಘಾಮಠದ ಅಧೀನದಲ್ಲೇ ಬರುವ ಹಾಸ್ಟೆಲ್ ವಿದ್ಯಾರ್ಥಿನಿಯರಿಬ್ಬರು ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ದೂರಿದ್ದರು.
ಪೋಕ್ಸೋದಂತಹ ಗಂಭೀರ ಪ್ರಕರಣ ದಾಖಲಾಗಿದ್ದರೂ ಸಹ ಪ್ರಮುಖ ಆರೋಪಿಯಾಗಿದ್ದ ಮುರುಘಾ ಶರಣರನ್ನು ಬಂಧನ ಮಾಡುವಲ್ಲಿ ಪೊಲೀಸರು ವಿಳಂಬ ನೀತಿ ಅನುಸರಿಸಿದ್ದೂ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಮಧ್ಯೆ ನಿನ್ನೆ ರಾತ್ರಿ 10.10ರ ಸುಮಾರಿಗೆ ಮುರುಘಾ ಶರಣರು ಸ್ವತಃ ಶರಣಾಗಿದ್ದಾರೆ. ಬಳಿಕ ಶ್ರೀಗಳನ್ನು ಬಂಧಿಸಲಾಗಿತ್ತು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು