ಮೈಸೂರು : ಕೃಷ್ಣರಾಜ ಕ್ಷೇತ್ರದ ಬಿಜೆಪಿ ಶಾಸಕ ಶ್ರೀವತ್ಸ ,ಮಾಜಿ ಮುಡಾ ಆಯುಕ್ತರಾದ ನಟೇಶ್, ದಿನೇಶ್ ಕುಮಾರ್ ಅವರ ವಿರುದ್ಧ ಲೋಕಾಯುಕ್ತಕ್ಕೆ ದೂರುನೀಡಿದ್ದಾರೆ.
ಮಾಜಿ ಮುಡಾ ಆಯುಕ್ತರಾದ ನಟೇಶ್, ದಿನೇಶ್ ಕುಮಾರ್ ಅಕ್ರಮದಲ್ಲಿ ಭಾಗಿಯಾಗಿದ್ದು , ಕೂಡಲೇ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿ, ಅವರನ್ನು ಬಂಧಿಸಬೇಕು. ಈ ಸಂಬಂಧ ಭೂಸ್ವಾಧೀನ ಅಧಿಕಾರಿಗಳು, ಸರ್ಕಾರದ ಕಾರ್ಯದರ್ಶಿಗಳು, ನಗರಾಭಿವೃದ್ಧಿ ಇಲಾಖೆ ವಿರುದ್ಧ ಕ್ರಮ ಕೈಗೊಳ್ಳಬೇಕು. ಈ ಅಕ್ರಮದಿಂದ ಸರ್ಕಾರದ ಬೊಕ್ಕಸಕ್ಕೆ ನಷ್ಟ ಮಾಡಿದ ಅಧಿಕಾರಿಗಳಿಂದಲೇ ಹಣ ವಸೂಲಿ ಮಾಡಬೇಕು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಈ ಕೂಡಲೇ ಅಕ್ರಮದಲ್ಲಿ ಭಾಗಿಯಾಗಿರುವ ಅಧಿಕಾರಿ ವರ್ಗದವರನ್ನು ಬಂಧಿಸಿ, ಸರ್ಕಾರಕ್ಕೆ ಆಗಿರುವ ನಷ್ಟವನ್ನು ಸದರಿ ಅಧಿಕಾರಿಗಳಿಂದಲೇ ಭರಿಸುವಂತೆ ಸೂಕ್ತ ಆದೇಶ ಹೊರಡಿಸಬೇಕೆಂದು ಬಿಜೆಪಿ ಶಾಸಕ ಶ್ರೀವತ್ಸ ಮನವಿ ಮಾಡಿದ್ದಾರೆ.


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು