ಮೈಸೂರು: ಮುಡಾ ಸೈಟ್ (MUDA Scam Case) ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ (ED) ಅಧಿಕಾರಿಗಳು ಶುಕ್ರವಾರ ಮುಡಾ ಕಚೇರಿ ಹಾಗೂ ತಹಸೀಲ್ದಾರ್ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ.
ಈ ದಾಳಿ, ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರ ದೂರು ಆಧಾರವಾಗಿ ಬೆಳಗ್ಗೆ 11:30ಕ್ಕೆ ಆರಂಭವಾಯಿತು. ಮುಡಾ ಅಧಿಕಾರಿಗಳಿಗೆ ಸಮನ್ಸ್ ನೀಡಿದರೂ, ಅವರು ದಾಖಲೆಗಳನ್ನು ಒದಗಿಸದ ಕಾರಣ ಈ ದಾಳಿ ನಡೆದಿದೆ.
ಇದನ್ನು ಓದಿ – ಕಲಬುರ್ಗಿ ಜೈಲಲ್ಲಿ ಕೈದಿಗಳಿಗೆ ‘ರಾಜಾತಿಥ್ಯ’ ಆರೋಪ: ಸಿಸಿಬಿ ತನಿಖೆಗೆ ಕಮಿಷನರ್ ಆದೇಶ
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ, ಕೆಂಗೇರಿಯಲ್ಲಿರುವ ನಾಲ್ಕನೇ ಆರೋಪಿ ದೇವರಾಜು ಅವರ ಮನೆ ಮೇಲೂ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇ.ಡಿ ತಂಡದ ನಾಲ್ಕು ಅಧಿಕಾರಿಗಳು ಮೈಸೂರು ತಹಸೀಲ್ದಾರ್ ಕಚೇರಿಗೆ ಭೇಟಿ ನೀಡಿ, ಭೂಮಿ ಮಂಜೂರು ಸಂಬಂಧಿತ ದಾಖಲೆಗಳನ್ನು ಪರಿಶೀಲಿಸಿದ್ದಾರೆ.
More Stories
ಕಲಬುರ್ಗಿ ಜೈಲಲ್ಲಿ ಕೈದಿಗಳಿಗೆ ‘ರಾಜಾತಿಥ್ಯ’ ಆರೋಪ: ಸಿಸಿಬಿ ತನಿಖೆಗೆ ಕಮಿಷನರ್ ಆದೇಶ
ಜೈಲಿನಲ್ಲಿರುವ ದರ್ಶನ್ಗೆ ಮತ್ತೊಂದು ಸಂಕಷ್ಟ: ನಿರ್ಮಾಪಕನ ಬೆದರಿಕೆ ದೂರು ಪ್ರಕರಣ ಮತ್ತೆ ಮುಂದುವರಿಕೆ
ಅಂಚೆ ಪೇಮೆಂಟ್ ಬ್ಯಾಂಕಿನಲ್ಲಿ 344 ಹುದ್ದೆಗಳ ನೇಮಕಾತಿ, ಅರ್ಜಿಗೆ ಆಹ್ವಾನ