ಐಎಎಸ್ ಅಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ನೇತೃತ್ವದ ಸಮಿತಿಯು ಈ ಸಂಬಂಧ ತನಿಖೆ ನಡೆಸಿ, ತನ್ನ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿತ್ತು.
ಈ ವರದಿಯಲ್ಲಿ 8 ಬೃಹತ್ ಪ್ರಕರಣಗಳಲ್ಲಿ ಬದಲಿ ನಿವೇಶನ ಹಂಚಿಕೆಯಲ್ಲಿ ಉಂಟಾದ ಅವ್ಯವಹಾರವನ್ನು ಸಾಕ್ಷಿಗಳೊಂದಿಗೆ ಸಾಬೀತುಪಡಿಸಲಾಗಿದೆ. ಈ ಅವ್ಯವಹಾರದಿಂದ ಮುಡಾಗೆ ಮತ್ತು ಸರ್ಕಾರಕ್ಕೆ ದೊಡ್ಡ ಪ್ರಮಾಣದ ಆರ್ಥಿಕ ನಷ್ಟ ಉಂಟಾದ ಬಗ್ಗೆ ವರದಿಯಲ್ಲಿ ಉಲ್ಲೇಖಿಸಲಾಗಿದೆ. ದಿನೇಶ್ ಕುಮಾರ್ ಮುಡಾ ಆಯುಕ್ತರಾಗಿದ್ದ ಕಾಲದಲ್ಲಿ ಈ ಅವ್ಯವಹಾರ ನಡೆದಿದೆ ಎಂಬುದು ವರದಿಯ ಪ್ರಮುಖ ಅಂಶವಾಗಿದೆ.
ಈ ವರದಿ ಆಧರಿಸಿ, ಸರ್ಕಾರದ ಅಧೀನ ಕಾರ್ಯದರ್ಶಿ ಕೆ. ಲತಾ ಅವರು ಮುಡಾದ ಮಾಜಿ ಆಯುಕ್ತ ದಿನೇಶ್ ಕುಮಾರ್ ಅವರಿಗೆ ನೋಟಿಸ್ ಜಾರಿಗೊಳಿಸಿದ್ದಾರೆ. ನೋಟಿಸ್ನಲ್ಲಿ,
ಇದನ್ನು ಓದಿ –ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
ಇದಲ್ಲದೆ, ಈ ಪ್ರಕರಣದಲ್ಲಿ ಭಾಗಿಯಾಗಿರುವ ಯಾವುದೇ ನೌಕರನನ್ನು ರಕ್ಷಿಸಲು ಪ್ರಯತ್ನಿಸಿದ್ದಲ್ಲಿ, ಅದನ್ನು ಗಂಭೀರವಾಗಿ ಪರಿಗಣಿಸಲಾಗುವುದೆಂದು ಈಗಿನ ಆಯುಕ್ತರಿಗೆ ಎಚ್ಚರಿಕೆ ನೀಡಲಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು