Main News

ಮುಕೇಶ್ ಅಂಬಾನಿಗೆ ಭಾರತದ ಅತ್ಯಂತ ಶ್ರೀಮಂತ ಪಟ್ಟಿಯಲ್ಲಿ ಮೊದಲ ಸ್ಥಾನ

ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಮುಖೇಶ್ ಅಂಬಾನಿ ಏಷ್ಯಾದ ಶ್ರೀಮಂತ ವ್ಯಕ್ತಿಗಳ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿದ್ದಾರೆ. ತಮ್ಮ ಪ್ರತಿಸ್ಪರ್ಧಿ ಗೌತಮ್ ಅದಾನಿ ಅವರನ್ನು ಹಿಂದಿಕ್ಕುವ ಮೂಲಕ ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿ ಎಂಬ ಹೆಗ್ಗಳಿಕೆಯನ್ನು ಮರಳಿ ಪಡೆದಿದ್ದಾರೆ.

ಬ್ಲೂಮ್‌ಬರ್ಗ್ ಬಿಲಿಯನೇರ್ ಇಂಡೆಕ್ಸ್ ಪ್ರಕಾರ ಅಂಬಾನಿ $99.7 ಬಿಲಿಯನ್ ನಿವ್ವಳ ಮೌಲ್ಯವನ್ನು ಹೊಂದಿದ್ದಾರೆ. ಅಂಬಾನಿ ತಮ್ಮ ಸಂಪತ್ತಿನಲ್ಲಿ $ 3.59 ಶತಕೋಟಿ ಹೆಚ್ಚಳವನ್ನು ಕಂಡಿದ್ದಾರೆ. ಅದಾನಿ ತಮ್ಮ ಸಂಪತ್ತಿಗೆ ನಿವ್ವಳ ಮೌಲ್ಯಕ್ಕೆ $ 2.96 ಶತಕೋಟಿಯನ್ನು ಸೇರಿದ್ದಾರೆ ಎಂದು ವರದಿ ಹೇಳಿದೆ.

ಟೆಸ್ಲಾ ಮತ್ತು ಸ್ಪೇಸ್‌ಎಕ್ಸ್ ಸಂಸ್ಥಾಪಕ ಎಲೋನ್ ಮಸ್ಕ್ ವಿಶ್ವದ ಶ್ರೀಮಂತರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ನಂತರದ ಸ್ಥಾನದಲ್ಲಿ ಅಮೆಜಾನ್‌ನ ಜೆಫ್ ಬೆಜೋಸ್ ಇದ್ದಾರೆ. ಅಂಬಾನಿ ಈಗ ವಿಶ್ವದ ಟಾಪ್ 10 ಶ್ರೀಮಂತರ ಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದ್ದಾರೆ ಎಂದು ಫೋರ್ಬ್ಸ್ ಶ್ರೀಮಂತರ ಪಟ್ಟಿ ತಿಳಿಸಿದೆ.

ಇದನ್ನು ಓದಿ – ಮಂಡ್ಯದ ವಿಕಲಾಂಗನ ಸಮಸ್ಯೆಗೆ ಎರಡೇ ದಿನಕ್ಕೆ ಸ್ಪಂದಿಸಿದ ಪ್ರಧಾನಿ ಕಾರ್ಯಾಲಯ

ಶುಕ್ರವಾರದ ವಹಿವಾಟಿನಲ್ಲಿ ಆರ್‌ಐಎಲ್‌ನ ಷೇರುಗಳು ಬಿಎಸ್‌ಇಯಲ್ಲಿ ಶೇಕಡ ಮೂರು ಏರಿಕೆಯಾಗಿ ₹ 2,816.35ಕ್ಕೆ ತಲುಪಿದೆ, ಕಳೆದ ಎರಡು ವಹಿವಾಟಿನ ದಿನಗಳಲ್ಲಿ ಭಾರೀ ಪ್ರಮಾಣದ ವಹಿವಾಟಿನ ನಡುವೆ ಏಳು ಶೇಕಡಾ ಏರಿಕೆಯಾಗಿದೆ. ಒಂದು ವಾರದಲ್ಲಿ ರಿಲಯನ್ಸ್ ಷೇರು ಶೇ. 6.79ರಷ್ಟು ಏರಿಕೆ ಕಂಡಿದೆ. ಇದು 2022ರಲ್ಲಿ ಶೇಕಡಾ 16.61 ರಷ್ಟು ಏರಿಕೆಯಾಗಿದೆ ಮತ್ತು ಕಳೆದ ವರ್ಷದಲ್ಲಿ 27 ಶೇಕಡಾ ಆದಾಯವನ್ನು ನೀಡಿದೆ.

Team Newsnap
Leave a Comment
Share
Published by
Team Newsnap

Recent Posts

ರೇವಣ್ಣ ಅಪಹರಣ ಕೇಸ್‌ : ಎಸ್‌ಐಟಿ ವಿಶೇಷ ತಂಡದಿಂದ 40 ಕಡೆ ರೇಡ್‌

ಬೆಂಗಳೂರು : ನೆನ್ನೆ ವಿಶೇಷ ತನಿಖಾ ತಂಡ (ಎಸ್‌ಐಟಿ) , ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದಳು… Read More

May 4, 2024

ಕ್ರೇಜಿವಾಲ್ ಗೆ ಮಧ್ಯಂತರ ಜಾಮೀನು ಪರಿಗಣನೆಗೆ ಸುಪ್ರೀಂ ಸೂಚನೆ

ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌… Read More

May 3, 2024

ಬಿಜೆಪಿ ಜೊತೆಗಿನ ಮೈತ್ರಿ ಸದ್ಯಕ್ಕೆ ನನಗೆ ಮುಖ್ಯ ಅಲ್ಲ: ಎಚ್ ಡಿ ಕೆ

ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More

May 3, 2024

ಹೆಚ್.ಡಿ ರೇವಣ್ಣ ವಿರುದ್ಧ ಕಿಡ್ನಾಪ್ ಕೇಸ್ ದಾಖಲು

ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್‍ಐಆರ್… Read More

May 3, 2024

ರಾಮನಗರ : ಐಜೂರಿನಲ್ಲಿ ಕರಡಿ ಪ್ರತ್ಯಕ್ಷ

ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More

May 3, 2024

ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಕೇಸ್ ದಾಖಲು

ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More

May 3, 2024